Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೇವಾ ಮನೋಭಾವದಿಂದ ಕೆಲಸಮಾಡಿ:...

ಸೇವಾ ಮನೋಭಾವದಿಂದ ಕೆಲಸಮಾಡಿ: ಗಾಯತ್ರಿಶಾಂತೇಗೌಡ

ಆಟೊ ನಿಲ್ದಾಣವನ್ನು ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 May 2016 10:08 PM IST
share
ಸೇವಾ ಮನೋಭಾವದಿಂದ ಕೆಲಸಮಾಡಿ: ಗಾಯತ್ರಿಶಾಂತೇಗೌಡ

 ಚಿಕ್ಕಮಗಳೂರು, ಮೇ 10: ಆಟೊ ಚಾಲಕರು ಸೇವಾ ಮನೋಭಾವದಿಂದ ಪ್ರಾಮಾಣಿಕತೆ ಮೆರೆದು ಕೆಲಸ ಮಾಡಿದರೆ ಪ್ರಯಾಣಿಕರ ಆಶೀರ್ವಾದದಿಂದ ನಿಮ್ಮ ಜೀವನ ಸುಗಮವಾಗಿ ಸಾಗುತ್ತದೆ ಎಂದು ಮಾಜಿ ಎಂಎಲ್ಸಿ ಎ.ವಿ.ಗಾಯತ್ರಿ ಶಾಂತೇಗೌಡ ಕರೆ ನೀಡಿದರು.

ಅವರು ಮಂಗಳವಾರ ದಂಟರಮಕ್ಕಿಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಕನಕದಾಸ ಆಟೊ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಆಟೊ ಚಾಲಕರು ತಮ್ಮ ಕುಟುಂಬ ನಿರ್ವಹಣೆಗಾಗಿ ಹಗಲು ರಾತ್ರಿ ಎನ್ನದೆ ಕಷ್ಟಪಡುತ್ತೀರಿ. ದುಡಿದ ಹಣವನ್ನು ವ್ಯಯಮಾಡದೆ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಗಿಸಿದರೆ ಭವಿಷ್ಯದಲ್ಲಿ ನಿಮಗೆ ಸಹಕಾರಿಯಾಗುತ್ತದೆ. ಮಳೆ, ಬಿಸಿಲಿನಲ್ಲಿ ದುಡಿಯುವ ಚಾಲಕರಿಗೆ ನೆರಳಿಗಾಗಿ ನಗರದ ವಿವಿಧ ಆಟೊ ನಿಲ್ದಾಣ ನಿರ್ಮಾಣಕ್ಕೆ 29 ಲಕ್ಷ ರೂ. ಈ ಹಿಂದೆ ನೀಡಿದ್ದೇನೆ ಎಂದು ಹೇಳಿದರು.

ಕೆ ಲವು ಪ್ರಯಾಣಿಕರು ಕಷ್ಟದಲ್ಲಿದ್ದಾಗ ಚಾಲಕರು ಮಾನವೀಯತೆಯಿಂದ ಸ್ಪಂದಿಸಿದ ಅದೆಷ್ಟೋ ಉದಾಹರಣೆಗಳಿದೆ. ಅದೇ ರೀತಿ ನಮಗೆ ಸಿಕ್ಕ ಅವಕಾಶದಲ್ಲಿ ಕೈಲಾದ ಮಟ್ಟಿಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿದಾಗ ಅದೇ ನಮ್ಮನ್ನು ಕಾಪಾಡುತ್ತದೆ ಎಂದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಮೂರು ವರ್ಷ ಕಳೆದಿದೆ. ಬಡವರು, ದೀನ ದಲಿತರು ಹಾಗೂ ಹಿಂದುಳಿದ ಸಮಾಜವನ್ನು ಆದ್ಯತೆಯಲ್ಲಿಟ್ಟುಕೊಂಡು ಜನರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿಶ್ವಾಸದ ನುಡಿಗಳನ್ನಾಡಿದರು.

ನಗರಸಭಾ ಸದಸ್ಯ ಜಗದೀಶ್ ಮಾತನಾಡಿ, ಜನರ ಕಷ್ಟ ಸುಖಕ್ಕೆ ಆದವನೆ ನೆಂಟ ಎಂಬಂತೆ ಗಾಯತ್ರಿ ಶಾಂತೇಗೌಡರು ಓರ್ವ ಮಹಿಳೆಯಾಗಿ ಎಲ್ಲ ರಾಜಕೀಯ ಅಡೆತಡೆಗಳನ್ನು ಎದುರಿಸಿ ಸಾಮಾನ್ಯ ಜನರಿಗೆ ಸ್ಪಂದಿಸುತ್ತಾ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ. ಶಂಕರಪುರ, ತಮಿಳು ಕಾಲನಿ, ವಿಜಯಪುರ, ಕೆಂಪನಹಳ್ಳಿ ಸೇರಿದಂತೆ ನಗರದ 11 ಕಡೆಗಳಲ್ಲಿ ನೂತನ ಆಟೊ ನಿಲ್ದಾಣದ ಅಭಿವೃದ್ಧ್ದಿಗೆ ಸಹಕರಿಸಿ ನೂರಾರು ಆಟೊ ಚಾಲಕರಿಗೆ ನೆರಳು ನೀಡಿದ್ದಾರೆ ಎಂದರು.

ಬಸವನಹಳ್ಳಿ ಕೆರೆಯ ನಡುಗುಡ್ಡೆಯಲ್ಲಿ ಕನಕದಾಸರ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದಾಗ ಗ್ರಾಮಸ್ಥರು ಕುಳಿತು ಚರ್ಚಿಸಿ ಒಗ್ಗಟ್ಟಿನಿಂದ ತೀರ್ಮಾನಿಸಿದರೆ ಸಂಬಂಧಪಟ್ಟವರ ಜೊತೆ ಮಾತನಾಡಿ ಸಹಕರಿಸುವುದಾಗಿ ಗಾಯತ್ರಿ ಶಾಂತೇಗೌಡ ಭರವಸೆ ನೀಡಿದರು.

ಸಿಡಿಎ ಅಧ್ಯಕ್ಷ ಚಂದ್ರೇಗೌಡ, ನಗರಸಭಾ ಸದಸ್ಯ ಡಿ.ಕೆ.ನಟರಾಜ್, ಪಿಸಿಎಲ್‌ಡಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಸಾಸೇಗೌಡ, ಆಟೊ ನಿಲ್ದಾಣದ ಅಧ್ಯಕ್ಷ ಮಂಜುನಾಥ್, ವಾಲ್ಮೀಕಿ ಸಂಘದ ಅಧ್ಯಕ್ಷ ಭೀಮಣ್ಣ, ಎಪಿಎಂಸಿ ಸದಸ್ಯ ಭದ್ರೇಗೌಡ, ಮುಖಂಡರಾದ ರೇವಣ್ಣ ಪುಟ್ಟಗೌಡ, ಬೈರೇಗೌಡ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X