Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಪ್ಲೇ-ಆಫ್: ಮುಂಚೂಣಿಯಲ್ಲಿ...

ಐಪಿಎಲ್ ಪ್ಲೇ-ಆಫ್: ಮುಂಚೂಣಿಯಲ್ಲಿ ಗುಜರಾತ್, ಹೈದರಾಬಾದ್

ವಾರ್ತಾಭಾರತಿವಾರ್ತಾಭಾರತಿ10 May 2016 10:32 PM IST
share
ಐಪಿಎಲ್ ಪ್ಲೇ-ಆಫ್: ಮುಂಚೂಣಿಯಲ್ಲಿ ಗುಜರಾತ್, ಹೈದರಾಬಾದ್

 ನಿರ್ಗಮನದ ಹಾದಿಯಲ್ಲಿ ಪುಣೆ, ಪಂಜಾಬ್

ಹೊಸದಿಲ್ಲಿ, ಮೇ 10: ಬೆಂಗಳೂರಿನಲ್ಲಿ ಮೇ 24 ರಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯುವುದರೊಂದಿಗೆ ಈ ವರ್ಷದ ಐಪಿಎಲ್ ಟೂರ್ನಿಯ ಪ್ಲೇ-ಆಫ್ ಪಂದ್ಯಗಳು ಆರಂಭವಾಗುತ್ತವೆ. ಪ್ಲೇ -ಆಫ್ ಹಂತ ಆರಂಭವಾಗುವ ಮೊದಲು ಇನ್ನು 17 ಪಂದ್ಯಗಳು ನಡೆಯಲು ಬಾಕಿಯಿವೆೆ.

ಈ ವರ್ಷದ ಐಪಿಎಲ್‌ನಲ್ಲಿ ಪ್ಲೇ-ಆಫ್ ಹಂತಕ್ಕೇರಲು ಸ್ಪರ್ಧೆಯಲ್ಲಿರುವ ತಂಡಗಳ ಸಾಧನೆಯ ಅವಲೋಕನ ಇಲ್ಲಿದೆ....

 ಗುಜರಾತ್ ಲಯನ್ಸ್: ಸಾಂಪ್ರದಾಯಿಕವಾಗಿ 16 ಅಂಕಗಳನ್ನು ಪಡೆಯುವ ತಂಡ ಪ್ಲೇ-ಆಫ್ ಹಂತಕ್ಕೆ ತೇರ್ಗಡೆಯಾಗುತ್ತದೆ. 9ನೆ ಆವೃತ್ತಿಯ ಐಪಿಎಲ್‌ನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಗುಜರಾತ್ ಲಯನ್ಸ್ 11 ಪಂದ್ಯಗಳಲ್ಲಿ 14 ಅಂಕವನ್ನು ಗಳಿಸಿದ್ದು, ಮುಂದಿನ ಸುತ್ತಿಗೇರಲು ಸಜ್ಜಾಗಿದೆ. ಗುಜರಾತ್ ತಂಡ ಇನ್ನೂ 3 ಪಂದ್ಯ ಆಡಲು ಬಾಕಿಯಿದೆ. ಇನ್ನೆರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪ್ಲೇ-ಆಫ್ ಸ್ಥಾನ ಖಚಿತವಾಗಲಿದೆ.

ಒಂದು ವೇಳೆ ಗುಜರಾತ್ ಇನ್ನುಳಿದ 3 ಪಂದ್ಯಗಳನ್ನು ಸೋತರೆ 14 ಅಂಕದಲ್ಲೇ ಉಳಿಯಲಿದೆ. ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮತ್ತಷ್ಟು ಕಳಪೆ ಪ್ರದರ್ಶನ ನೀಡಿ ಪ್ಲೇ-ಆಫ್ ಸ್ಪರ್ಧೆಯಿಂದ ಹೊರ ನಡೆದರೆ ಗುಜರಾತ್‌ಗೆ ಅವಕಾಶ ಲಭಿಸಲಿದೆ. ಈ ಹಿಂದಿನ ಐಪಿಎಲ್ ಟೂರ್ನಿಯಲ್ಲಿ 14 ಅಂಕವನ್ನು ಗಳಿಸಿದ ತಂಡಗಳು ಪ್ಲೇ-ಆಫ್‌ಗೆ ಏರಿದ ನಿದರ್ಶನವಿದೆ.

ಸನ್‌ರೈಸರ್ಸ್ ಹೈದರಾಬಾದ್: ಇದೀಗ ಐಪಿಎಲ್ ಅಂಕಪಟ್ಟಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಎರಡನೆ ಸ್ಥಾನದಲ್ಲಿದೆ. ಹೈದರಾಬಾದ್ 9 ಪಂದ್ಯಗಳಲ್ಲಿ 6ರಲ್ಲಿ ಜಯ ಸಾಧಿಸಿದೆ. ತಂಡದ ನೆಟ್ ರನ್‌ರೇಟ್(+0.61) ಉಳಿದೆಲ್ಲಾ ತಂಡಗಳಿಗಿಂತ ಉತ್ತಮವಾಗಿದೆ. ಹೈದರಾಬಾದ್‌ಗೆ ಇನ್ನೂ 5 ಪಂದ್ಯಗಳು ಆಡಲು ಬಾಕಿಯಿದೆ. ತಂಡದ ಈಗಿನ ಫಾರ್ಮ್‌ನ್ನು ಗಮನಿಸಿದರೆ ಮುಂದಿನ ಸುತ್ತಿಗೆ ತಲುಪುವುದರಲ್ಲಿ ಸಂಶಯವೇ ಇಲ್ಲ.

ಕೋಲ್ಕತಾ ನೈಟ್ ರೈಡರ್ಸ್ : 10 ಪಂದ್ಯಗಳಲ್ಲಿ 12 ಅಂಕವನ್ನು ಗಳಿಸಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ 3ನೆ ಸ್ಥಾನವನ್ನು ಕಾಯ್ದುಕೊಂಡಿದೆ. ಎರಡು ಬಾರಿಯ ಐಪಿಎಲ್ ಚಾಂಪಿಯನ್ ಕೆಕೆಆರ್ ಈ ವಾರ ಕೇವಲ ಒಂದು ಪಂದ್ಯವನ್ನು ಆಡುತ್ತದೆ. ಆರು ದಿನಗಳ ಅಂತರದಲ್ಲಿ ಉಳಿದ 3 ಪಂದ್ಯಗಳನ್ನು ಆಡುತ್ತದೆ. ಇನ್ನೆರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ 16 ಅಂಕವನ್ನು ಗಳಿಸಲಿದೆ. ಇದು ಮುಂದಿನ ಸುತ್ತಿಗೇರಲು ಅನುಕೂಲಕರವಾಗಲಿದೆ.

  ಡೆಲ್ಲಿ ಡೇರ್ ಡೆವಿಲ್ಸ್ : ಮತ್ತೊಂದೆಡೆ, ಡೆಲ್ಲಿ ಡೇರ್ ಡೆವಿಲ್ಸ್ ತಂಡ 9 ಪಂದ್ಯಗಳಲ್ಲಿ 10 ಅಂಕವನ್ನು ಗಳಿಸಿ ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನದಲ್ಲಿದೆ. ಮುಂದಿನ ಸುತ್ತಿಗೆ ಅರ್ಹತೆ ಗಳಿಸಲು ಉಳಿದ 5 ಪಂದ್ಯಗಳ ಪೈಕಿ ಕನಿಷ್ಠ ಮೂರರಲ್ಲಿ ಜಯ ಸಾಧಿಸಬೇಕಾಗಿದೆ. ಒಂದು ವೇಳೆ ಡೆಲ್ಲಿ ಹಿನ್ನಡೆ ಅನುಭವಿಸಿದರೆ, ಮುಂಬೈ ಹಾಗೂ ಆರ್‌ಸಿಬಿ ಪ್ಲೇ-ಆಫ್‌ನ ನಾಲ್ಕನೆ ಸ್ಥಾನಕ್ಕಾಗಿ ಸ್ಪರ್ಧೆಗೆ ಇಳಿಯಲಿವೆ.

ಮುಂಬೈ ಇಂಡಿಯನ್ಸ್: ಹಾಲಿ ಚಾಂಪಿಯನ್ ಮುಂಬೈ ಈ ವರ್ಷ ಸ್ಥಿರ ಪ್ರದರ್ಶನ ನೀಡಲು ಪರದಾಡುತ್ತಿದೆ. ಮುಂಬೈ ಅಂಕಪಟ್ಟಿಯಲ್ಲಿ 3ನೆ ಸ್ಥಾನದಿಂದ 5ನೆ ಸ್ಥಾನಕ್ಕೆ ಕುಸಿದಿದೆ. 10 ಪಂದ್ಯಗಳಲ್ಲಿ ಕೇವಲ 5ರಲ್ಲಿ ಜಯ ಸಾಧಿಸಿ 10 ಅಂಕ ಗಳಿಸಿದೆ. ಮುಂಬೈ ಮುಂದಿನ ಸುತ್ತಿಗೇರಲು ಇನ್ನುಳಿದ 4 ಪಂದ್ಯಗಳಲ್ಲಿ ಕನಿಷ್ಠ 3 ಪಂದ್ಯಗಳನ್ನಾದರೂ ಗೆಲ್ಲಬೇಕಾಗಿದೆ. ನಾಲ್ಕೂ ಪಂದ್ಯಗಳನ್ನು ಜಯಿಸಿದರೆ 18 ಅಂಕ ಲಭಿಸಲಿದೆ.

ಆರ್‌ಸಿಬಿ: ವಿರಾಟ್ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಸೋಮವಾರ ಪಂಜಾಬ್ ವಿರುದ್ಧ 1 ರನ್‌ನಿಂದ ರೋಚಕವಾಗಿ ಜಯ ಸಾಧಿಸಿ ಪ್ಲೇ-ಆಫ್‌ಗೆ ತಲುಪುವ ವಿಶ್ವಾಸವನ್ನು ಜೀವಂತವಾಗಿರಿಸಿದೆ. ಕೊಹ್ಲಿ ಪಡೆ ಮುಂದಿನ ಸುತ್ತಿಗೇರಬೇಕಾದರೆ ಉಳಿದ 5 ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಅಥವಾ ಕನಿಷ್ಠ ಪಕ್ಷ ನಾಲ್ಕು ಪಂದ್ಯಗಳನ್ನಾದರೂ ಗೆದ್ದುಕೊಳ್ಳಬೇಕು. ಕೊಹ್ಲಿ ಬಳಗ 9 ಪಂದ್ಯಗಳಲ್ಲಿ 8 ಅಂಕವನ್ನು ಗಳಿಸಿದೆ.

ಪುಣೆ ಹಾಗೂ ಪಂಜಾಬ್: ಈ ವರ್ಷದ ಐಪಿಎಲ್‌ನಲ್ಲಿ ಅತ್ಯಂತ ದುರ್ಬಲ ತಂಡಗಳೆಂದರೆ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ರೈಸಿಂಗ್ ಪುಣೆ ಸೂಪರ್‌ಜಯಂಟ್ಸ್. 10 ಪಂದ್ಯಗಳಲ್ಲಿ ಕೇವಲ 6 ಅಂಕವನ್ನು ಗಳಿಸಿರುವ ಉಭಯ ತಂಡಗಳು ಟೂರ್ನಿಯಿಂದ ಹೊರಬೀಳುವ ಹಂತದಲ್ಲಿವೆ.

ಧೋನಿ ನೇತೃತ್ವದ ಪುಣೆ ತಂಡ ಉಳಿದ 4 ಪಂದ್ಯಗಳಲ್ಲಿ ನಾಲ್ಕೂ ಪಂದ್ಯಗಳನ್ನು ಜಯಿಸಿದರೂ ಪ್ಲೇ-ಆಫ್ ಸ್ಥಾನ ಸಿಗುವುದು ಗ್ಯಾರಂಟಿಯಿಲ್ಲ. ಪುಣೆ 14 ಅಂಕವನ್ನು ಗಳಿಸಿದರೆ, ಉಳಿದ ತಂಡಗಳ ಫಲಿತಾಂಶ ತನ್ನ ಪರವಾಗಿ ಬರುವುದನ್ನು ನಿರೀಕ್ಷಿಸಬೇಕಾಗುತ್ತದೆ. ಪುಣೆ ಮಂಗಳವಾರ ಹೈದರಾಬಾದ್ ತಂಡವನ್ನು ಎದುರಿಸಲಿದೆ. 2014ರ ಐಪಿಎಲ್‌ನಲ್ಲಿ ಫೈನಲ್‌ಗೆ ತಲುಪಿದ್ದ ಪಂಜಾಬ್ 2015ರಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X