Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಯೋ ಗೇಮ್ಸ್‌ಗೆ ಟ್ರಯಲ್ಸ್ ನಡೆಸಬೇಕು:...

ರಿಯೋ ಗೇಮ್ಸ್‌ಗೆ ಟ್ರಯಲ್ಸ್ ನಡೆಸಬೇಕು: ಸುಶೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ10 May 2016 10:39 PM IST
share
ರಿಯೋ ಗೇಮ್ಸ್‌ಗೆ ಟ್ರಯಲ್ಸ್ ನಡೆಸಬೇಕು: ಸುಶೀಲ್ ಕುಮಾರ್

ಹೊಸದಿಲ್ಲಿ, ಮೇ 10: ಮುಂಬರುವ ಒಲಿಂಪಿಕ್ಸ್‌ನಲ್ಲಿ ಪುರುಷರ 74 ಕೆ.ಜಿ. ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲು ನರಸಿಂಗ್ ಯಾದವ್ ಸಜ್ಜಾಗಿದ್ದಾರೆ. ಮತ್ತೊಂದೆಡೆ, ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಒಲವು ವ್ಯಕ್ತಪಡಿಸಿರುವ ಹಿರಿಯ ಕುಸ್ತಿಪಟು ಸುಶೀಲ್ ಕುಮಾರ್, ರಿಯೋ ಗೇಮ್ಸ್‌ಗೆ ನಮ್ಮಿಬ್ಬರಲ್ಲಿ ಯಾರು ಶ್ರೇಷ್ಠರೆಂದು ಆಯ್ಕೆ ಮಾಡಲು ಟ್ರಯಲ್ಸ್ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಸುಶೀಲ್ ಹಾಗೂ ನರಸಿಂಗ್ ನಡುವೆ ಪುರುಷರ 74 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಟ್ರಯಲ್ಸ್ ನಡೆಸಬೇಕೇ, ಬೇಡವೇ ಎಂಬ ಕುರಿತಂತೆ ಭಾರತದ ಕುಸ್ತಿ ಫೆಡರೇಶನ್(ಡಬ್ಲುಎಫ್‌ಐ) ಇನ್ನಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ.

‘‘ನಾನು ಟ್ರಯಲ್ಸ್ ನಡೆಸಬೇಕೆಂದು ಆಗ್ರಹಿಸುವೆ. ನನ್ನ ಈ ಹಿಂದಿನ ಉತ್ತಮ ದಾಖಲೆಯನ್ನು ಪರಿಗಣಿಸಿ ರಿಯೋಗೆ ಕಳುಹಿಸಿಕೊಡಿ ಎಂದು ಹೇಳಲಾರೆ. ನಾನು ಹಾಗೂ ನರಸಿಂಗ್ ನಡುವೆ ಯಾರು ದೇಶವನ್ನು ಪ್ರತಿನಿಧಿಸಲು ಅರ್ಹರೆಂದು ನಿರ್ಧರಿಸಬೇಕು ಎಂದು ಕೇಳಿಕೊಳ್ಳುತ್ತಿರುವೆ. ಒಲಿಂಪಿಕ್ಸ್ ಸ್ಥಾನ ದೇಶಕ್ಕಾಗಿಯೇ ಇದೆಯೇ ಹೊರತು ಓರ್ವ ವ್ಯಕ್ತಿಗಾಗಿ ಅಲ್ಲ. ಇಬ್ಬರು ಪ್ರಬಲ ಸ್ಪರ್ಧಿಗಳಿರುವಾಗ ಟ್ರಯಲ್ಸ್ ನಡೆಸುವುದೇ ಉತ್ತಮ. ಎಲ್ಲ ನಿಯಮವನ್ನು ತಪ್ಪದೇ ಅನುಸರಿಸಬೇಕು ಎಂದು ಸುಶೀಲ್ ಹೇಳಿದರು.

ವಿಶ್ವದ ಹಾಗೂ ಒಲಿಂಪಿಕ್ಸ್‌ನ ಹಾಲಿ ಚಾಂಪಿಯನ್ ಜೋರ್ಡನ್ ರಿಯೋ ಗೇಮ್ಸ್‌ನಲ್ಲಿ ಅಮೆರಿಕವನ್ನು ಪ್ರತಿನಿಧಿಸಲು ಟ್ರಯಲ್ಸ್‌ಗೆ ಒಳಪಡಲಿದ್ದಾರೆ. ಟ್ರಯಲ್ಸ್ ಎಲ್ಲ ಕಡೆಯೂ ನಡೆಯುತ್ತದೆ. ನನಗೆ ಒಲಿಂಪಿಕ್ಸ್‌ಗೆ ತಯಾರಿ ನಡೆಸಲು ಭಾರತದ ಕ್ರೀಡಾ ಪ್ರಾಧಿಕಾರ ಹಾಗೂ ಸರಕಾರ ಸಾಕಷ್ಟು ಹಣವನ್ನು ವ್ಯಯಿಸಿದೆ. ಒಲಿಂಪಿಕ್ಸ್‌ಗೆ ಉತ್ತಮ ತಯಾರಿ ನಡೆಸಿದ್ದು, ರಿಯೋ ಗೇಮ್ಸ್‌ಗೆ ತೆರಳುವ ವಿಶ್ವಾಸದಲ್ಲಿದ್ದೇನೆ ಎಂದು ಸುಶೀಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X