Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 16ರಂದು ನಡೆಯುವ ಪ್ರತಿಭಟನೆಯಲ್ಲಿ...

ಮೇ 16ರಂದು ನಡೆಯುವ ಪ್ರತಿಭಟನೆಯಲ್ಲಿ ಎಲ್ಲರೂ ಭಾಗವಹಿಸಬೇಕು: ಹರಿಕೃಷ್ಣ ಬಂಟ್ವಾಳ

ವಾರ್ತಾಭಾರತಿವಾರ್ತಾಭಾರತಿ11 May 2016 8:07 PM IST
share
ಮೇ 16ರಂದು ನಡೆಯುವ ಪ್ರತಿಭಟನೆಯಲ್ಲಿ ಎಲ್ಲರೂ ಭಾಗವಹಿಸಬೇಕು: ಹರಿಕೃಷ್ಣ ಬಂಟ್ವಾಳ

ಬಂಟ್ವಾಳ, ಮೇ 11: ಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಉಳಿಸುವ ನಿಟ್ಟಿನಲ್ಲಿ ಮೇ 16 ರಂದು ದ.ಕ. ಜಿಲ್ಲಾ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ಚಲೋ ಪ್ರತಿಭಟನಾ ಜಾಥದಲ್ಲಿ ತಾಲೂಕಿನ 84 ಗ್ರಾಮಗಳಿಂದಲೂ ಗ್ರಾಮಸ್ಥರು ಭಾಗವಹಿಸುವಂತೆ ಸಮಿತಿಯ ಮಾರ್ಗದರ್ಶಕ ಮಂಡಳಿ ಸದಸ್ಯ ಹರಿಕೃಷ್ಣ ಬಂಟ್ವಾಳ್ ಕರೆ ನೀಡಿದ್ದಾರೆ.

ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಜಾಥದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರು ಸೇರಿದಂತೆ ಎಲ್ಲರೂ ಜಾತಿ, ಮತ, ಪಕ್ಷ ಬೇದ ಮರೆತು ಪಾಳ್ಗೊಳ್ಳುವಂತೆ ಮನವಿ ಮಾಡಿದರು. ಜಿಲ್ಲೆಯ ಸಚಿವರು ಸಹಿತ ರಾಜಕೀಯ ನಾಯಕರು ಓಟು, ತಮ್ಮ ಅಧಿಕಾರ ಉಳಿಸಿಕೊಳ್ಳುವ ಚಿಂತನೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರುಗಳು ಮತ ನೀಡಿದ ಜನರ ಹಿತವನ್ನು ಮರೆತಿದ್ದಾರೆ. ಹೃದಯವಂತಿಕೆಯಿಂದ ಮಾತ್ರ ನೇತ್ರಾವತಿ ನದಿಯನ್ನು ಉಳಿಸಲು ಸಾಧ್ಯ ಎಂದ ಅವರು ಜಿಲ್ಲೆಯ ಭವಿಷ್ಯದ ದಿನಗಳನ್ನು ಗಮನದಲ್ಲಿರಿಸಿ ಹೋರಾಟದಲ್ಲಿ ಬಾಗವಹಿಸಬೇಕಾಗಿದೆ ಎಂದರು.

ಇದೇ ಮೊದಲ ಬಾರಿಗೆ ನೇತ್ರಾವತಿಗೆ ಇಂತಹ ಬರದ ಸ್ಥಿತಿ ನಿರ್ಮಾಣವಾಗಿದೆ. ಇದೇ ಸ್ಥಿತಿ ಮುಂದುವರಿದರೆ ದ.ಕ.ಜಿಲ್ಲೆಗೂ ಭಯಾನಕ ಬರದ ಗಂಡಾಂತರ ಎದುರಾದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಆತಂಕ ವ್ಯಕ್ತ ಪಡಿಸಿದ ಅವರು ಈಗಾಗಲೇ ಈ ಯೋಜನೆಯನ್ನು ವಿರೋಧಿಸಿ ಹಲವಾರು ಸಂಘಟನೆಗಳು ಹೋರಾಟ ನಡೆಸಿದರೂ ಕರ್ನಾಟಕ ಸರಕಾರ ಎಚ್ಚೆತ್ತುಕೊಂಡಿಲ್ಲ. ಈ ಹೋರಾಟಕ್ಕೂ ಮಣಿಯದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲು ಸಮಿತಿ ನಿರ್ಧರಿಸಿರುವುದಾಗಿ ಅವರು ತಿಳಿಸಿದರು.

ಶೇ. 70ರಷ್ಟು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಶೇ. 30ರಷ್ಟು ಬಂಟ್ವಾಳ ತಾಲೂಕಿನ ಜನರು ನೇತ್ರಾವತಿ ನದಿಯನ್ನು ಬಳಸಿಕೊಳ್ಳುತ್ತಿದ್ದರೂ ಈ ಯೋಜನೆಯ ದುಷ್ಪರಿಣಾಮದ ಬಗ್ಗೆ ಇನ್ನೂ ಎಚ್ಚೆತ್ತುಕೊಂಡಿಲ್ಲ. ಯಾವುದು ಹಕ್ಕು, ಯಾವುದು ಹೋರಾಟ ಎನ್ನುವುದು ಬುದ್ಧಿವಂತರ ಜಿಲ್ಲೆಯ ಜನತೆಗೆ ತಿಳಿಯದಿರುವುದು ವಿಷಾದನೀಯ ಎಂದರು. ಮುಖ್ಯಮಂತ್ರಿಯವರು ಸಮಿತಿ ಮುಖಂಡರೊಂದಿಗೆ ಚರ್ಚಿಸಿ ಯೋಜನೆಯನ್ನು ರದ್ದುಗೊಳಿಸಿದರೆ ತಮ್ಮ ಹೋರಾಟವನ್ನು ಹಿಂತೆಗೆದುಕೊಂಡು ತಮ್ಮ ಸಮಿತಿಯನ್ನು ಬರ್ಖಾಸ್ತುಗೊಳಿಸುವುದಾಗಿ ತಿಳಿಸಿದರು.

ಮೇ 19ರಂದು ಜಿಲ್ಲಾ ಬಂದ್

ಮೇ16ರಂದು ಮಧ್ಯಾಹ್ನ 3 ಗಂಟೆಯಿಂದ ಮಂಗಳೂರು ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥ ನಡೆಯಲಿದ್ದು ಪ್ರತಿಭಟನಾ ಸಭೆ ಜರಗಲಿರುವುದು. ಈ ಜಾಥದಲ್ಲಿ ಜಿಲ್ಲೆಯ ಜನರು ಸಹಸ್ರಾರು ಸಂಖ್ಯೆಯಲ್ಲಿ ಬಾಗವಹಿಸುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಈಗಾಗಲೇ ಸಮಾಲೋಚನಾ ಸಭೆ ನಡೆಸಿ ಜನಜಾಗೃತಿ ಮೂಡಿಸಲಾಗಿದೆ. ಸಾರ್ವಜನಿಕರು, ನೇತ್ರಾವತಿ ನದಿ ಬಳಕೆದಾರರು, ರೈತರು ಸ್ವಯಂ ಪ್ರೇರಿತರಾಗಿ ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕೋರಿದ ಅವರು, ಇದಕ್ಕೂ ಸರಕಾರ ಸೂಕ್ತ ಸ್ಪಂದನೆ ನೀಡದಿದ್ದಲ್ಲಿ ಮೇ 19 ರಂದು ಸ್ವಯಂ ಪ್ರೇರಿತ ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸಮಿತಿಯ ಪ್ರಮುಖರಾದ ಜಿ.ಆನಂದ, ಪಿ.ಎ.ರಹೀಂ, ಪ್ರಭಾಕರ ದೈವಗುಡ್ಡೆ, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X