Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಡಿಪು: ಮೇ 14ರಂದು ಮಜ್ಲಿಸ್...

ಮುಡಿಪು: ಮೇ 14ರಂದು ಮಜ್ಲಿಸ್ ಎಜುಪಾರ್ಕ್‌ಗೆ ಶಿಲಾನ್ಯಾಸ, ಸುನ್ನಿ ಮಹಾಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ11 May 2016 8:51 PM IST
share

ಕೊಣಾಜೆ, ಮೇ 11: ಮುಡಿಪುವಿನ ಮಜ್ಲಿಸ್ ಎಜುಪಾರ್ಕ್ ಸಂಘಟನೆಯ ಆಶ್ರಯದಲ್ಲಿ ಸೈಯದ್ ಆದೂರು ತಂಙಳ್‌ರ ನೇತೃತ್ವದಲ್ಲಿ ಮಜ್ಲಿಸ್ ಎಜುಪಾರ್ಕ್ ಹಾಗೂ ಸುಸಜ್ಜಿತ ಆಡಿಟೋರಿಯಂಗೆ ಶಿಲಾನ್ಯಾಸ ಮತ್ತು ಸುನ್ನೀ ಮಹಾ ಸಮ್ಮೇಳನವು ಮೇ 14ರಂದು ಸಂಜೆ 4 ಗಂಟೆಗೆ ಮುಡಿಪುವಿನ ಬಾಳೆಪುಣಿ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.

ಶಿಕ್ಷಣ ಕ್ಷೇತ್ರಕ್ಕೆ ಅತಿ ಹೆಚ್ಚಿನ ಪ್ರಾಮುಖ್ಯ ಇರುವ ಇಂದಿನ ಕಾಲದಲ್ಲಿ ನಮ್ಮ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಕಾನೂನು ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಬಹಳಷ್ಟು ಇವೆ. ಆದರೆ ಸರಕಾರಿ ಉನ್ನತ ದರ್ಜೆಗೆ ಅವಶ್ಯಕವಾಗಿರುವಂತಹ ಐಎಎಸ್, ಐಪಿಎಸ್, ಐಎಫ್‌ಎಸ್ ಪರೀಕ್ಷೆಗಳಿಗೆ ತರಬೇತಿ ನೀಡುವಂತಹ ಶಿಕ್ಷಣ ಸಂಸ್ಥೆಗಳು ಬಹಳಷ್ಟು ಕಡಿಮೆ ಇವೆ. ಈ ನಿಟ್ಟಿನಲ್ಲಿ ಅತ್ಯಂತ ಕಡುಬಡವರ ಮಕ್ಕಳಿಗೂ 7ನೆ ತರಗತಿಯಿಂದಲೇ ಇಂತಹ ಪರೀಕ್ಷೆಗಳಿಗೆ ವಿಶೇಷ ತರಬೇತಿ ಕೊಟ್ಟು  ರಾಜ್ಯ, ರಾಷ್ಟ್ರಕ್ಕೆ ಅವರ ಸೇವೆ ಲಭಿಸುವಂತೆ ಮುಡಿಪುವಿನ ಮಜ್ಲಿಸ್ ಎಜುಪಾರ್ಕ್ ಸಂಘಟನೆಯು ಚಿಂತನೆ ನಡೆಸಿದೆ.

ಮಜ್ಲಿಸ್ ಎಜುಪಾರ್ಕ್ ವಿದ್ಯಾಸಂಸ್ಥೆಗೆ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದ್ ಶಿಲಾನ್ಯಾಸವನ್ನು ನೆರವೇರಿಸಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪೆರೋಡ್ ಉಸ್ತಾದ್, ಅಲಿಕುಂಞಿ ಉಸ್ತಾದ್, ಖಾಝಿ ಕೂರತ್ ತಂಙಳ್, ಬೇಕಲ್ ಉಸ್ತಾದ್, ಅಬ್ದಾಸ್ ಉಸ್ತಾದ್, ಮಾಣಿ ಉಸ್ತಾದ್, ಆರೋಗ್ಯ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಮೊಯ್ದಿನ್ ಬಾವ, ಯೆನೆಪೊಯ ವಿವಿಯ ಅಬ್ದುಲ್ಲಾ ಕುಂಞಿ ಹಾಜಿ, ಕಣಚೂರು ಮೆಡಿಕಲ್ ಕಾಲೇಜಿನ ಯು.ಕೆ.ಮೋನು ಹಾಗೂ ಇನ್ನಿತರ ಉಲಮಾ-ಉಮರಾ ನಾಯಕರುಗಳು, ರಾಜಕೀಯ ಸಾಮಾಜಿಕ ಮುಖಂಡರು ಬಾಗವಹಿಸಲಿದ್ದಾರೆ ಎಂದು ಮುಡಿಪು ಮಜ್ಲಿಸ್ ಎಜುಪಾರ್ಕ್ ಸಂಘಟನೆಯ ಅಧ್ಯಕ್ಷ ಸೈಯದ್ ಆದೂರು ತಂಙಳ್, ಕಾರ್ಯಾಕಾರಿ ಅಧ್ಯಕ್ಷ ಎಸ್.ಕೆ.ಖಾದರ್ ಹಾಜಿ ಹಾಗೂ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X