Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸದೀಯ ಸಮಿತಿಗಳಿಂದ ಕಡಿಮೆ ಅಂಕ

ಸಂಸದೀಯ ಸಮಿತಿಗಳಿಂದ ಕಡಿಮೆ ಅಂಕ

ಬಿಜೆಪಿಗೆ ತಲೆನೋವು

ವಾರ್ತಾಭಾರತಿವಾರ್ತಾಭಾರತಿ11 May 2016 11:33 PM IST
share

ಹೊಸದಿಲ್ಲಿ, ಮೇ 11: ಸಂಸತ್ತಿನ ಉಭಯ ಸದನಗಳಲ್ಲೂ ಕಲಾಪ ನಡೆಯಗೊಡದಿರಲು ಶಪಥ ಕೊಟ್ಟಂತಿರುವ ವಿಪಕ್ಷೀಯರಿಗೆ ತಿರುಗೇಟು ನೀಡುವ ಕೆಲಸವೇ ಕೈತುಂಬಾ ಇರುವ ಸಮಯದಲ್ಲಿ ಆಳುವ ಬಿಜೆಪಿಗೀಗ ಹೊಸ ಚಿಂತೆಯೊಂದು ಎದುರಾಗಿದೆ. ಸರಕಾರದ ಕಾರ್ಯವೈಖರಿಯ ಕುರಿತು ಸಂಸದೀಯ ಸಮಿತಿಗಳು ಸರಣಿಯಾಗಿ ಪ್ರತಿಕೂಲ ಟೀಕೆ ಮಾಡುತ್ತಿದೆ ಹಾಗೂ ಈ ಸಮಿತಿಗಳಲ್ಲಿ ಬಿಜೆಪಿ ಸಂಸದರ ಭಾಗವಹಿಸುವಿಕೆಯ ಕುರಿತಾಗಿಯೂ ಅವು ಅಸಂತೋಷ ವ್ಯಕ್ತಪಡಿಸಿದೆ.

ಸಂಸದೀಯ ಸಮಿತಿಯಿಂದ ಇತ್ತೀಚೆಗೆ ತರಾಟೆಗೆತ್ತಿಕೊಳ್ಳಲ್ಪಟ್ಟಿರುವುದು ಪರಿಸರ ಸಚಿವಾಲಯ ಹಾಗೂ ಅದರ ಮಾಲಿನ್ಯ ಕಾವಲು ನಾಯಿಗಿರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ. ಅದು ಮಾಲಿನ್ಯ ನಿಯಂತ್ರಣದಲ್ಲಿ ಕಳಪೆ ಸಾಧನೆ ತೋರಿಸಿವೆ ಹಾಗೂ ವಾಯು, ನೀರು ಹಾಗೂ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಮೂಲಸೌಲಕರ್ಯ ರಚಿಸಲು ವಿಫಲವಾಗಿವೆಯೆಂದು ಸಮಿತಿಯು ಕಿಡಿಕಾರಿದೆ.

ವಿಜ್ಞಾನ, ತಂತ್ರಜ್ಞಾನ, ಪರಿಸರ ಮಾಲಿನ್ಯ ಅರಣ್ಯ ಸಂಸದೀಯ ಸ್ಥಾಯಿ ಸಮಿತಿಯು ಮಾಲಿನ್ಯ ನಿಯಂತ್ರಣಕ್ಕೆ ಮೀಸಲಿರಿಸಿರುವ ನಿಧಿಯನ್ನು ಬಳಸಿಕೊಳ್ಳಲು ಪರಿಸರ ಸಚಿವಾಲಯ ವಿಫಲವಾಗಿದೆಯೆಂದು ಆರೋಪಿಸಿದೆ. ಅಲ್ಲದೆ, ಆಳುವ ಬಿಜೆಪಿಯ ಸಂಸದರು, ಈ ಸಂಸದೀಯ ಸಮಿತಿಗಳ ಕಲಾಪದಿಂದ ದೂರವುಳಿಯುತ್ತಿದ್ದಾರೆಂದು ಮಂಗಳವಾರ ನಡೆದ ಉಭಯ ಸದನಗಳ ಬಿಜೆಪಿ ಸಂಸದನ ಸಭೆಯೊಂದರಲ್ಲಿ ಸಂಸದೀಯ ವ್ಯವಹಾರ ಸಚಿವ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಪ್ರತಿಕೂಲ ಟೀಕೆ ಅಥವಾ ಶಿಫಾರಸುಗಳ ವರದಿಗಳು ಕಳವಳಕ್ಕೆ ಕಾರಣವಾಗಿವೆಯೆಂದು ಎಚ್ಚರಿಸಿದ ಅವರು, ಮಿನಿ ಸಂಸತ್ತುಗಳೆಂದು ಕರೆಯಲ್ಪಡುವ ಹಾಗೂ ಸರಕಾರ ವಿವಿಧ ಇಲಾಖೆಗಳ ಕೆಲಸಗಳು, ನೀತಿಗಳು ಹಾಗೂ ಕಾನೂನುಗಳನ್ನು ಪರಿಶೀಲಿಸುವ ಅಧಿಕಾರ ಹೊಂದಿರುವ ಸಂಸದೀಯ ಸಮಿತಿಗಳ ಸಭೆಗಳಲ್ಲಿ ಭಾಗವಹಿಸುವಿಕೆಯನ್ನು ಸುಧಾರಿಸುವಂತೆಯೂ ಸಂಸದರಿಗೆ ಸೂಚಿಸಿದರು.

ಸಭೆಯಲ್ಲಿ ನಾಯ್ಡು ಈ ವಿಷಯ ಪ್ರಸ್ತಾಪಿಸಿದಾಗ ಪ್ರಧಾನಿ ನರೇಂದ್ರ ಮೋದಿ ಸಹ ಅಲ್ಲಿದ್ದರು. ಅವರು, ಸಂಸದೀಯ ಸಮಿತಿಗಳ ಸಭೆಗಳಲ್ಲಿ ಭಾಗವಹಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.

ವಿವಿಧ ಪಕ್ಷಗಳ ಸಂಸದರನ್ನೊಳಗೊಂಡ ಸಂಸದೀಯ ಸಮಿತಿಗಳಲ್ಲಿ ಭಾಗವಹಿಸಿದ 12 ಮಂದಿ ಸಂಸದರನ್ನು ವರದಿಯೊಂದರ ಆಧಾರದಲ್ಲಿ ಸಮಿತಿಗಳಿಂದ ಕೈಬಿಟ್ಟಿತ್ತು. ಅವರಲ್ಲಿ ವಿನೋದ್ ಖನ್ನಾ, ಕೀರ್ತಿ ಆಝಾದ್, ಓಂ ಬಿರ್ಲಾ, ದುಶ್ಯಂತ ಸಿಂಗ್ ಹಾಗೂ ವರುಣ್ ಗಾಂಧಿ ಪ್ರಮುಖರಾಗಿದ್ದರು.

ಕೆಲವು ತಿಂಗಳ ಹಿಂದೆ ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯ ದಿಲ್ಲಿ ಪೋಲೀಸ್‌ಗೆ ನಿಧಿ ಕಡಿತಗೊಳಿಸಿದಕ್ಕಾಗಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಹುದ್ದೆ ತೆರವಿರುವ ವಿಚಾರದಲ್ಲಿ ಸಂಸ್ಕೃತಿ ಸಚಿವಾಲಯ ಹಾಗೂ ರೈಲುಗಳ ಸಂಚಾರದ ವಿಚಾರದಲ್ಲಿ ರೈಲ್ವೆ ಸಚಿವಾಲಯವನ್ನು ಸಂಬಂಧಿತ ಸಮಿತಿಗಳು ಟೀಕಿಸಿದ್ದವು.

ಆರೋಗ್ಯ ಹಾಗೂ ರಾಸಾಯನಿಕ ಸಚಿವಾಲಯಗಳು ಸಮಿತಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಇತರ ಇಲಾಖೆಗಳಾಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X