Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೀರಿಗೆ ಹಣ ಪಡೆದರೆ ಸೂಕ್ತ ಕ್ರಮ: ಜಿಪಂ...

ನೀರಿಗೆ ಹಣ ಪಡೆದರೆ ಸೂಕ್ತ ಕ್ರಮ: ಜಿಪಂ ಸಿಇಒ

ವಾರ್ತಾಭಾರತಿವಾರ್ತಾಭಾರತಿ11 May 2016 11:57 PM IST
share
ನೀರಿಗೆ ಹಣ ಪಡೆದರೆ ಸೂಕ್ತ ಕ್ರಮ: ಜಿಪಂ ಸಿಇಒ

ಮಂಗಳೂರು, ಮೇ 11: ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಪಂಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಪಂ ಸಿಇಒ ಪಿ.ಐ.ಶ್ರೀವಿದ್ಯಾ ಎಚ್ಚರಿಕೆ ನೀಡಿದ್ದಾರೆ.

ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಮಾಸಿಕ ಸಭೆಯಲ್ಲಿ ಜಿಪಂ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಾದ ಚರ್ಚೆಯ ವೇಳೆ ಅವರು ಈ ಎಚ್ಚರಿಕೆ ನೀಡಿದರು.

ಉಪಾಧ್ಯಕ್ಷೆ ಕಸ್ತೂರಿ ಪಂಜ ಸಭೆಯಲ್ಲಿ ಟ್ಯಾಂಕರ್ ನೀರು ಪೂರೈಕೆ ಕುರಿತಂತೆ ವಿಷಯ ಪ್ರಸ್ತಾಪಿಸಿ, ಬೇಕಾಬಿಟ್ಟಿ ಯಾಗಿ ಟ್ಯಾಂಕರ್‌ಗಳಲ್ಲಿ ನೀರು ಪೂರೈಸುತ್ತಿರುವುದಲ್ಲದೆ 6,000 ಲೀಟರ್ ನೀರಿಗೆ 3,000 ರೂ. ಶುಲ್ಕ ಪಡೆದ ಪ್ರಸಂಗ ಎಕ್ಕಾರು ಗ್ರಾಪಂನಲ್ಲಿ ನಡೆದಿದೆ ಎಂದು ದೂರಿ ದರು. ಮಾತ್ರವಲ್ಲದೆ, ಪಿಡಿಒಗಳು ಕರೆ ಮಾಡಿದರೆ ಪ್ರತಿಕ್ರಿ ಯಿಸುವುದಿಲ್ಲ. ತೆಂಕಮಿಜಾರು ಪಿಡಿಒಗೆ ನಾಲ್ಕೈದು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. ಬಳಿಕ ಕರೆ ಮಾಡಿ ವಿಚಾರಿಸಿಯೂ ಇಲ್ಲ. ನಮಗೇ ಇಂತಹ ಪರಿಸ್ಥಿತಿಯಾದರೆ ಇನ್ನು ಜನಸಾಮಾನ್ಯರ ಕರೆಯನ್ನು ಸ್ವೀಕರಿಸುತ್ತಾರೆಯೇ ಎಂದು ಬೇಸರಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಇಒ, ಯಾರೇ ಕರೆ ಮಾಡಿದರೂ ಅದಕ್ಕೆ ಸೂಕ್ತವಾಗಿ ಸ್ಪಂದಿಸುವಂತೆ ಎಲ್ಲ ಅಧಿಕಾರಿಗಳಿಗೂ ನಿರ್ದೇಶನ ನೀಡಲಾಗಿದೆ. ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾ ಗುವುದು ಎಂದು ಹೇಳಿದರು. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಪ್ರತಿಕ್ರಿಯಿಸಿ, ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಯುದ್ಧೋಪಾದಿಯಲ್ಲಿ ಎದುರಿಸಬೇಕಾಗಿದೆ. ಇದಕ್ಕೆ ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಜನಸಾಮಾನ್ಯರ ಜೊತೆ ಸಹಕರಿಸಬೇಕು ಎಂದು ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ತಾಲೂಕು ಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಇಒ, ಕೃಷಿಗೆ ನೀರನ್ನು ಬಳಕೆ ಮಾಡದಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದರು.


ಅಧಿಕಾರಿಗಳು ಪರಿಚಯಿಸಿಕೊಂಡಿಲ್ಲ: ಅಧ್ಯಕ್ಷೆಯ ಅಳಲು

‘‘ನಾನು ಜಿಪಂ ಅಧ್ಯಕ್ಷೆ ಸ್ಥಾನ ಸ್ವೀಕರಿಸಿ ಒಂದು ತಿಂಗಳಾದರೂ ಕೆಲ ಅಧಿ ಕಾರಿಗಳು ಇನ್ನೂ ನನ್ನನ್ನು ಭೇಟಿಯಾಗಿ ಪರಿಚಯಿಸಿಕೊಳ್ಳುವ ಸೌಜನ್ಯ ತೋರಿಸಿಲ್ಲ’’ ಎಂದು ಜಿಪಂ ನೂತನ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪ್ರಥಮ ಕೆಡಿಪಿ ಸಭೆಯಲ್ಲೇ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು. ಸಭೆಯಲ್ಲಿ ಎಲ್ಲಾ ಅಧಿಕಾರಿಗಳು ಹಾಜರಾಗಿದ್ದಾರೆಯೇ ಎಂದು ಪ್ರಶ್ನಿಸುತ್ತಾ, ಹಾಜರಾತಿ ಪಡೆದುಕೊಂಡ ಬಳಿಕ ಅಧಿಕಾರಿಗಳನ್ನು ಪರಿಚಯಿಸಿಕೊಳ್ಳುವಂತೆ ತಿಳಿಸಿ, ಗೈರು ಹಾಜರಾದ ಅಧಿಕಾರಿಗಳ ಹೆಸರನ್ನು ಸರ ಕಾರಕ್ಕೆ ಬರೆಯಲಾಗುವುದು ಎಂದು ಹೇಳಿದಾಗ, ಅಧಿಕಾರಿಗಳು ಎದ್ದು ನಿಂತು ತಮ್ಮನ್ನು ಪರಿಚಯಿಸಿದರು. ಇಬ್ಬರು ಅಧಿಕಾರಿಗಳು ಅನುಮತಿ ಪಡೆದು ಸಭೆಯಲ್ಲಿ ಗೈರುಹಾಜರಾಗಿದ್ದು, ಉಳಿದಂತೆ ಗೈರುಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವುದಾಗಿ ಸಿಇಒ ಶ್ರೀವಿದ್ಯಾ ಸಭೆಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X