Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಸ್ತೆ ವಿಚಾರದಲ್ಲಿ ಇತ್ತಂಡಗಳ ನಡುವೆ...

ರಸ್ತೆ ವಿಚಾರದಲ್ಲಿ ಇತ್ತಂಡಗಳ ನಡುವೆ ಹೊಡೆದಾಟ: ಮೂವರು ಆಸ್ಪತ್ರೆಗೆ

ವಾರ್ತಾಭಾರತಿವಾರ್ತಾಭಾರತಿ12 May 2016 5:04 PM IST
share

ಪುತ್ತೂರು, ಮೇ 12: ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಒಂದೇ ಕುಟುಂಬದ ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಆನಾಜೆ ಎಂಬಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಆನಾಜೆ ಇಸ್ಮಾಯಿಲ್ ಎಂಬವರ ಪುತ್ರರಾದ ಅಬ್ದುರ್ರಹ್ಮಾನ್ ಹಾಗೂ ಮುಹಮ್ಮದ್ ಶಾಫಿ ಎಂಬವರು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಾದರೆ ಇನ್ನೊಂದು ತಂಡದ ಕೊಡಿಪ್ಪಾಡಿಆನಾಜೆ ಇಸ್ಮಾಯಿಲ್ ಅವರ ಪುತ್ರ ಅಬ್ದುಲ್ ಕರೀಂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಮ್ಮ ವರ್ಗ ಜಾಗದ ಮೂಲಕ ಮನೆಗೆ ಹೋಗುವ ಖಾಸಗಿ ರಸ್ತೆಗೆ ನಾವು ತಿಂಗಳ ಹಿಂದೆಯಷ್ಟೇ ಕಾಂಕ್ರೀಟಿಕರಣ ಮಾಡಿದ್ದೇವೆ. ಆ ಬಳಿಕ ಸಣ್ಣ ವಾಹನಗಳು ಮಾತ್ರವೇ ಆ ರಸ್ತೆಯ ಮೂಲಕ ಸಂಚರಿಸುತ್ತಿದ್ದವು. ಈ ಮಧ್ಯೆ ನಮ್ಮ ಮನೆ ಪಕ್ಕದಲ್ಲಿರುವ ಅತ್ತೆಯ ಮನೆಗೆ ಟಿಪ್ಪರ್ ಲಾರಿಯಲ್ಲಿ ಹೊಗೆ ತಂದಿದ್ದಾರೆ. ಇದರಿಂದಾಗಿ ಇತ್ತೀಚೆಗೆ ಕಾಂಕ್ರೀಟಿಕರಣಗೊಂಡ ರಸ್ತೆ ಸಂಪೂರ್ಣ ಒಡೆದುಹೋಗಿದೆ. ಇದನ್ನು ಪ್ರಶ್ನಿಸಿರುವುದಕ್ಕೆ ತನ್ನ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಕಬ್ಬಿಣದ ರಾಡ್‌ನಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ನನ್ನ ತಮ್ಮ ಮುಹಮ್ಮದ್ ಶಾಫಿ ತಡೆಯಲು ಬಂದಿದ್ದು ಅವರಿಗೂ ಹಲ್ಲೆ ನಡೆಸಿದ್ದಾರೆ ಎಂದು ಅಬ್ದುರ್ರಹ್ಮಾನ್ ಆರೋಪಿಸಿದ್ದಾರೆ.

ನಮ್ಮ ಮನೆಯ ಬಳಿಯಿಂದಾಗಿ ನೆರೆಮನೆಯ ಅಬ್ದುರ್ರಹ್ಮಾನರ ಮನೆಗೆ ರಸ್ತೆ ಹಾದುಹೋಗುತ್ತಿದೆ. ಈ ರಸ್ತೆಗೆ ಕೆಲ ಸಮಯಗಳ ಹಿಂದೆ ಕಾಂಕ್ರೀಟಿಕರಣಗೊಳಿಸಿದ್ದರು. ಕಾಂಕ್ರೀಟಿಕರಣಗೊಂಡ ಬಳಿಕ ಆ ರಸ್ತೆ ಮೂಲಕ ವಾಹನ ಸಂಚಾರ ಮಾಡಬಾರದು ಎಂದು ಅವರು ಆಕ್ಷೇಪ ಮಾಡುತ್ತಿದ್ದರು. ಈ ಮಧ್ಯೆ ನಾವು ಹೊಸ ಮನೆ ನಿರ್ಮಿಸುತ್ತಿದ್ದು, ಕಾಮಗಾರಿಗೆ ಮರಳು ತರುವುದು ಅಗತ್ಯವಾಗಿದ್ದು ಟಿಪ್ಪರ್ ಲಾರಿಯ ಚಾಲಕ ನಮಗೆ ತಿಳಿಸದೇ ಮರಳು ತಂದಿದ್ದಾರೆ. ಇದನ್ನು ಆಕ್ಷೇಪಿಸಿ ಅಬ್ದುರ್ರಹ್ಮಾನ್ ಹಾಗೂ ಆತನ ಸಹೋದರ ಮುಹಮ್ಮದ್ ಶಾಫಿ ಎಂಬವರು ನಮ್ಮ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ನನಗೆ ಹಲ್ಲೆ ನಡೆಸುತ್ತಿರುವುದನ್ನು ಕಂಡು ತಡೆಯಲು ಬಂದ ನನ್ನ ತಾಯಿ ಬೀಪಾತುಮ್ಮನವರಿಗೂ ಹಲ್ಲೆ ನಡೆಸಿರುವುದಾಗಿ ಅಬ್ದುಲ್ ಕರೀಂ ಆರೋಪಿಸಿದ್ದಾರೆ.

ಪುತ್ತೂರು ನಗರ ಪೊಲೀಸರು ಇತ್ತಂಡದ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X