Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಪತ್ತೆಯಾದ ನವಜಾತ ಶಿಶುವಿನ ಸುಳಿವು

ನಾಪತ್ತೆಯಾದ ನವಜಾತ ಶಿಶುವಿನ ಸುಳಿವು

ಮುಂದುವರಿದ ತನಿಖೆ

ವಾರ್ತಾಭಾರತಿವಾರ್ತಾಭಾರತಿ12 May 2016 10:22 PM IST
share

ಶಿವಮೊಗ್ಗ, ಮೇ 12: ಭದ್ರಾವತಿಯ ಸರಕಾರಿ ಆಸ್ಪತ್ರೆಯಿಂದ ಕಳವು ಮಾಡಲಾದ ನವಜಾತ ಗಂಡು ಶಿಶುವಿನ ಸುಳಿವು ಇಲ್ಲಿಯವರೆಗೂ ಪತ್ತೆಯಾಗಿಲ್ಲ. ಇದು ಪೋಷಕರ ದುಃಖ ಇಮ್ಮಡಿಗೊಳ್ಳುವಂತೆ ಮಾಡಿದ್ದು, ಆತಂಕ ಹೆಚ್ಚಿಸಿದೆ. ಮತ್ತೊಂದೆಡೆ ಪೊಲೀಸರು ಶಿಶುವಿನ ಪತ್ತೆಗೆ ಇನ್ನಿಲ್ಲದ ಹರಸಾಹಸ ನಡೆಸುತ್ತಿದ್ದು, ತನಿಖೆ ಬಿರುಸುಗೊಳಿಸಿದ್ದಾರೆ. ವಿಚಾರಣೆ: ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿ ಸಿದಂತೆ ಪೊಲೀಸರು ಅನುಮಾನದ ಮೇರೆಗೆ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ನಡೆದ ವೇಳೆ ಕರ್ತವ್ಯದಲ್ಲಿದ್ದ ಕಾವಲುಗಾರರು ಹಾಗೂ ಆಸ್ಪತ್ರೆಯ ಇತರ ಸಿಬ್ಬಂದಿಯಿಂದಲೂ ಮಾಹಿತಿ ಕಲೆ ಹಾಕಿದ್ದಾರೆ. ಆದರೆ, ಶಿಶುವಿನ ಸುಳಿವಿಗೆ ಸಂಬಂಧಿಸಿದಂತೆ ಯಾವುದೇ ಮಹತ್ವದ ಮಾಹಿತಿ ಲಭ್ಯವಾಗಿಲ್ಲವೆಂದು ಪೊಲೀಸ್ ಇಲಾಖೆಯ ಮೂಲಗಳು

ಮಾಹಿತಿ ನೀಡಿವೆ. ಪ್ರಕರಣ ರಾಜ್ಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾಂತೆಯೇ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದ್ದು, ಶಿಶುವಿನ ಪತ್ತೆಗೆ ಇನ್ನಿಲ್ಲದ ಹರಸಾಹಸ ನಡೆಸುತ್ತಿದ್ದಾರೆ. ನಾನಾ ಮೂಲಗಳಿಂದ ಮಾಹಿತಿ ಸಂಗ್ರಹಿಸುವ ಕೆಲಸ ಮುಂದುವರಿಸಿದ್ದಾರೆ. ಸದ್ಯದ ಮಟ್ಟಿಗೆ ಶಿಶುವಿನ ಸುಳಿವಿನ ಬಗ್ಗೆ ಯಾವುದೇ ಮಾಹಿತಿಯಿಲ್ಲವಾಗಿದೆ. ನಾನಾ ದಿಕ್ಕುಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುತ್ತಿದ್ದೇವೆ. ಶೀಘ್ರದಲ್ಲಿಯೇ ಶಿಶು ಪತ್ತೆ ಹಚ್ಚಲಿದ್ದೇವೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.

  ಅಸ್ಪಷ್ಟ ದೃಶ್ಯ: ಆಸ್ಪತ್ರೆಯ ಆವರಣದಲ್ಲಿ ಅಳವಡಿಸಲಾಗಿರುವ ಸಿ.ಸಿ.ಕ್ಯಾಮರಾವೊಂದರಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಮಹಿಳೆಯೋರ್ವರು ಕೈಯಲ್ಲಿ ಏನನ್ನೋ ಕೊಂಡೊಯ್ಯುತ್ತಿರುವ ಕೆಲವು ಸೆಕೆಂಡುಗಳು ದೃಶ್ಯ ಸೆರೆಯಾಗಿದೆ. ಆದರೆ ಮುಖ ಸ್ಪಷ್ಟವಾಗಿ ಗೋಚರಿಸುತ್ತಿಲ್ಲ ಎಂದು ಆಸ್ಪತ್ರೆಯ ಮೂಲಗಳು ಹೇಳುತ್ತಿವೆ. ಘಟನೆ ಹಿನ್ನೆಲೆ: ಪ್ರಸ್ತುತ ಅರಸೀಕೆರೆಯಲ್ಲಿ ಪತಿಯೊಂದಿಗೆ ನೆಲೆಸಿರುವ ಜೀವಿತಾ (25) ಎಂಬ ಮಹಿಳೆ ಗರ್ಭೀಣಿಯಾಗಿದ್ದ ಕಾರಣದಿಂದ ಭದ್ರಾವತಿಯ ತವರುಮನೆಯಲ್ಲಿದ್ದರು. ಮಂಗಳವಾರ ಬೆಳಗ್ಗೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನ 4 ಗಂಟೆ ಸುಮಾರಿಗೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ತಾಯಿ-ಮಗು ಆರೋಗ್ಯವಾಗಿದ್ದ ಕಾರಣದಿಂದ ರಾತ್ರಿ ಅವರನ್ನು ಆಸ್ಪತ್ರೆಯ ಜನರಲ್ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಇವರೊಂದಿಗೆ ಸಂಬಂಧಿ ಮಹಿಳೆಯೊಬ್ಬರಿದ್ದು, ರಾತ್ರಿ ವಾರ್ಡ್‌ನ ಹೊರಭಾಗದಲ್ಲಿ ಮಲಗಿಕೊಂಡಿದ್ದರು. ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ತಾಯಿ ಮಗುವಿಗೆ ಹಾಲುಣಿಸಿದ್ದಾರೆ. ಆದರೆ ಸುಮಾರು 5 ಗಂಟೆಗೆ ಎಚ್ಚರವಾದಾಗ ಪಕ್ಕದಲ್ಲಿದ್ದ ಮಗು ನಾಪತ್ತೆಯಾಗಿತ್ತು. ತಕ್ಷಣವೇ ಜೀವಿತಾ ನರ್ಸ್ ಹಾಗೂ ಆಸ್ಪತ್ರೆಯ ಭದ್ರತಾ ಕಾವಲುಗಾರರ ಗಮನಕ್ಕೆ ತಂದಿದ್ದಾರೆ. ಅಷ್ಟರಲ್ಲಾಗಲೇ ಮಗುವಿನೊಂದಿಗೆ ಕಳ್ಳರು ನಾಪತ್ತೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X