Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂಜಾಬ್ ವಿರುದ್ಧ ಗೆಲುವಿನ ಓಟ...

ಪಂಜಾಬ್ ವಿರುದ್ಧ ಗೆಲುವಿನ ಓಟ ಮುಂದುವರಿಸುವತ್ತ ಮುಂಬೈ ಚಿತ್ತ

ವಾರ್ತಾಭಾರತಿವಾರ್ತಾಭಾರತಿ12 May 2016 11:16 PM IST
share
ಪಂಜಾಬ್ ವಿರುದ್ಧ ಗೆಲುವಿನ ಓಟ ಮುಂದುವರಿಸುವತ್ತ ಮುಂಬೈ ಚಿತ್ತ

ವಿಶಾಖಪಟ್ಟಣ, ಮೇ 12: ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿ ಗೆಲುವಿನ ಹಾದಿಗೆ ಮರಳಿರುವ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಶುಕ್ರವಾರ ಇಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ.

ಸನ್‌ರೈಸರ್ಸ್ ಹೈದರಾಬಾದ್‌ನ ವಿರುದ್ಧ 85 ರನ್‌ಗಳ ಅಂತರದ ಹೀನಾಯ ಸೋಲಿನಿಂದ ಬೇಗನೆ ಚೇತರಿಸಿಕೊಂಡ ಮುಂಬೈ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದ್ದ ಪಂದ್ಯದಲ್ಲಿ ಆತಿಥೇಯ ಬೆಂಗಳೂರು ತಂಡವನ್ನು ಮಣಿಸಿತ್ತು. ರೋಹಿತ್ ಶರ್ಮ ನಾಯಕತ್ವದ ಮುಂಬೈ ತಂಡ 11 ಪಂದ್ಯಗಳಲ್ಲಿ ಆರರಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನ ಗಳಿಸಿದೆ. ಒಟ್ಟು 12 ಅಂಕ ಗಳಿಸಿರುವ ಮುಂಬೈ ಶುಕ್ರವಾರದ ಪಂದ್ಯದಲ್ಲೂ ಗೆಲುವಿನ ಓಟವನ್ನು ಮುಂದುವರಿಸುವ ವಿಶ್ವಾಸದಲ್ಲಿದೆ.

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದು ಪರದಾಡುತ್ತಿರುವ ಪಂಜಾಬ್ ತಂಡ ಈಗಾಗಲೇ ಐಪಿಎಲ್‌ನ ಪ್ಲೆ-ಆಫ್ ಸ್ಪರ್ಧೆಯಿಂದ ಹೊರ ನಡೆದಿದೆ. ಮುರಳಿ ವಿಜಯ್ ನೇತೃತ್ವದ ಪಂಜಾಬ್ ತಂಡ 10 ಪಂದ್ಯಗಳ ಪೈಕಿ ಏಳರಲ್ಲಿ ಸೋತಿದೆ.

ಮುಂಬೈ ತಂಡದ ಪರ ಅಗ್ರ ಸ್ಕೋರರ್ ಎನಿಸಿಕೊಂಡಿರುವ ರೋಹಿತ್ ಶರ್ಮ ತಂಡವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಹೆಚ್ಚಿನ ಸಂದರ್ಭದಲ್ಲಿ ತಂಡಕ್ಕೆ ಆಸರೆಯಾಗಿದ್ದಾರೆ. ಸನ್‌ರೈಸರ್ಸ್ ವಿರುದ್ಧ 92 ರನ್ ಗಳಿಸಿದ್ದ ಮುಂಬೈ ತಂಡ ಆರ್‌ಸಿಬಿ ವಿರುದ್ಧ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನಲಿ ಬುಧವಾರ ನಡೆದ ಪಂದ್ಯದಲ್ಲಿ ಬಲಿಷ್ಠ ಬ್ಯಾಟಿಂಗ್ ಸರದಿ ಹೊಂದಿರುವ ಆರ್‌ಸಿಬಿ ತಂಡವನ್ನು ಮುಂಬೈ ಬೌಲರ್‌ಗಳು 151 ರನ್‌ಗೆ ನಿಯಂತ್ರಿಸಿದ್ದರು. ಮುಂಬೈ ದಾಂಡಿಗರು 8 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್ ನಷ್ಟದಲ್ಲಿ ಗುರಿ ತಲುಪಿದ್ದರು.

ಬೆಂಗಳೂರು ವಿರುದ್ಧದ ಕಳೆದ ಪಂದ್ಯದಲ್ಲಿ ಬೌಲರ್‌ಗಳಾದ ಮಿಚೆಲ್ ಮೆಕ್ಲಿನಘನ್ ಹಾಗೂ ಟಿಮ್ ಸೌಥಿ ಉತ್ತಮ ಪ್ರದರ್ಶನ ನೀಡಿ ಮುಂಬೈಗೆ ಆರಂಭದಲ್ಲೇ ಮೇಲುಗೈ ಒದಗಿಸಿಕೊಟ್ಟಿದ್ದರು. ಸ್ಪಿನ್ನರ್ ಹರ್ಭಜನ್ ಸಿಂಗ್‌ರಲ್ಲದೆ ಮಧ್ಯಮ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ,ಹಾರ್ದಿಕ್ ಪಾಂಡ್ಯ ಹಾಗೂ ಪೊಲಾರ್ಡ್ ಎದುರಾಳಿ ದಾಂಡಿಗರಿಗೆ ಸವಾಲಾಗಬಲ್ಲರು.

ಲೀಗ್‌ನ ಮಧ್ಯೆ ಪಂಜಾಬ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ಪಡೆದಿರುವ ಮುರಳಿ ವಿಜಯ್ ಉತ್ತಮ ಪ್ರದರ್ಶನ ನೀಡಲು ಯತ್ನಿಸುತ್ತಿದ್ದಾರೆ. ಆದರೆ, ಅವರಿಗೆ ಮತ್ತೊಂದು ಕಡೆಯಿಂದ ಬೆಂಬಲ ಸಿಗುತ್ತಿಲ್ಲ.

ಡೇವಿಡ್ ಮಿಲ್ಲರ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಫಾರ್ಮ್ ಕಳವಳಕಾರಿಯಾಗಿದೆ. ಮ್ಯಾಕ್ಸ್‌ವಲ್ ಪಂದ್ಯದಲ್ಲಿ ಆಡಿರಲಿಲ್ಲ. ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಪಂಜಾಬ್‌ನ ಬೌಲಿಂಗ್ ವಿಭಾಗದಲ್ಲಿ ಸಂದೀಪ್ ಶರ್ಮ, ಮೋಹಿತ್ ಶರ್ಮ, ಅಕ್ಷರ್ ಪಟೇಲ್ ಹಾಗೂ ಸ್ಟೋನಿಸ್ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ.

ಪಂದ್ಯದ ಸಮಯ: ರಾತ್ರಿ 8:00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X