Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಕ್ರಿಕೆಟ್ ಸಮಿತಿ ಮುಖ್ಯಸ್ಥರಾಗಿ...

ಐಸಿಸಿ ಕ್ರಿಕೆಟ್ ಸಮಿತಿ ಮುಖ್ಯಸ್ಥರಾಗಿ ಅನಿಲ್ ಕುಂಬ್ಳೆ ಮರು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ13 May 2016 11:42 PM IST
share
ಐಸಿಸಿ ಕ್ರಿಕೆಟ್ ಸಮಿತಿ ಮುಖ್ಯಸ್ಥರಾಗಿ ಅನಿಲ್ ಕುಂಬ್ಳೆ ಮರು ಆಯ್ಕೆ

ರಾಹುಲ್ ದ್ರಾವಿಡ್ ಉನ್ನತ ಸಮಿತಿಯ ಸದಸ್ಯ

 ದುಬೈ, ಮೇ 13: ಭಾರತದ ಮಾಜಿ ನಾಯಕ ಅನಿಲ್ ಕುಂಬ್ಳೆ ಐಸಿಸಿ ಕ್ರಿಕೆಟ್ ಸಮಿತಿಯ ಮುಖ್ಯಸ್ಥರಾಗಿ ಎರಡನೆ ಅವಧಿಗೆ ಮರು ಆಯ್ಕೆಯಾಗಿದ್ದಾರೆ. ಕುಂಬ್ಳೆಯವರ ಒಂದುಕಾಲದ ಸಹ ಆಟಗಾರ ಹಾಗೂ ಮಹಾಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಉನ್ನತ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಭಾರತದ ಪರ ಗರಿಷ್ಠ ವಿಕೆಟ್ ಉರುಳಿಸಿ ಸಾರ್ವಕಾಲಿಕ ಶ್ರೇಷ್ಠ ಬೌಲರ್ ಆಗಿರುವ ಕುಂಬ್ಳೆ 2012ರಲ್ಲಿ ಮೊದಲ ಬಾರಿ ಐಸಿಸಿ ಕ್ರಿಕೆಟ್ ಸಮಿತಿಗೆ ಚೇರ್‌ಮನ್ ಆಗಿ ಆಯ್ಕೆಯಾಗಿದ್ದರು. ಶುಕ್ರವಾರ ಮರು ಆಯ್ಕೆಯಾಗಿರುವ ಕುಂಬ್ಳೆ 2018ರ ತನಕ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಇದೇ ವೇಳೆ, ಭಾರತದ ಮಾಜಿ ನಾಯಕ ದ್ರಾವಿಡ್ ಹಾಗೂ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಐಸಿಸಿ ಕ್ರಿಕೆಟ್ ಸಮಿತಿಗೆ ಆಯ್ಕೆಯಾಗಿದ್ದಾರೆ. ದ್ರಾವಿಡ್ ಹಾಗೂ ಜಯವರ್ಧನೆ 1996 ರಿಂದ 2015ರ ತನಕ 1,161 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಇಬ್ಬರು ಮೂರು ವರ್ಷದ ಅವಧಿಗೆ ಐಸಿಸಿ ಕ್ರಿಕೆಟ್ ಸಮಿತಿಯ ಉನ್ನತ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಸ್ಕಾಟ್ಲೆಂಡ್‌ನಲ್ಲಿ ಐಸಿಸಿ ವಾರ್ಷಿಕ ಸಮ್ಮೇಳನ ನಡೆಯುವ ಮೂರು ವಾರಗಳ ಮುಂಚಿತವಾಗಿ ಮೇ 31 ಹಾಗೂ ಜೂ.1 ರಂದು ಲಾರ್ಡ್ಸ್‌ನಲ್ಲಿ ನಡೆಯಲಿರುವ ಮೊದಲಸಭೆಯಲ್ಲಿ ದ್ರಾವಿಡ್, ಜಯವರ್ಧನೆ ಹಾಜರಾಗಲಿದ್ದಾರೆ.

ದ್ರಾವಿಡ್ ಅವರು ಶ್ರೀಲಂಕಾ ಮಾಜಿ ನಾಯಕ ಕುಮಾರ ಸಂಗಕ್ಕರ ಅವರಿಂದ ತೆರವಾದ ಸ್ಥಾನವನ್ನು ತುಂಬಿದರೆ, ಜಯವರ್ಧನೆ ಆಸ್ಟ್ರೇಲಿಯದ ಮಾಜಿ ನಾಯಕ ಮಾರ್ಕ್ ಟೇಲರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಸಂಗಕ್ಕರ ಹಾಗೂ ಟೇಲರ್ ಮೂರು ವರ್ಷಗಳ ಅಧಿಕಾರವಧಿಯನ್ನು ಪೂರೈಸಿದ್ದಾರೆ.
ರಾಹುಲ್ ದ್ರಾವಿಡ್‌ರ ಬಾಕಿ ವೇತನ ಪಾವತಿಸಿದ ಬಿಸಿಸಿಐ

ಹೊಸದಿಲ್ಲಿ, ಮೇ 13: ಭಾರತದ ಅಂಡರ್-19 ಹಾಗೂ ‘ಎ’ ತಂಡದ ಕೋಚ್ ಆಗಿದ್ದ ಮಾಜಿ ನಾಯಕ ರಾಹುಲ್ ದ್ರಾವಿಡ್‌ಗೆ ನೀಡಬೇಕಾಗಿದ್ದ ವೇತನ ಬಾಕಿ 1.30 ಕೋಟಿ ರೂ. ಪಾವತಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಕೋಚ್ ಆಗಿ ಕಾರ್ಯನಿರ್ವಹಿಸಿರುವ ದ್ರಾವಿಡ್‌ಗೆ 2.61 ಕೋಟಿ ರೂ. ಪಾವತಿಸಬೇಕಾಗಿತ್ತು. ಮಾರ್ಚ್‌ನಲ್ಲಿ ಮೊದಲ ಕಂತಿನ ವೇತನವನ್ನು ನೀಡಲಾಗಿದ್ದು, ಇದೀಗ ಪೂರ್ಣ ವೇತನವನ್ನು ನೀಡಲಾಗಿದೆ. ಮಾಜಿ ನಾಯಕ ಸುನೀಲ್ ಗವಾಸ್ಕರ್‌ಗೆ ವೀಕ್ಷಕವಿವರಣೆಗಾಗಿ ಜನವರಿ-ಮಾರ್ಚ್‌ನಲ್ಲಿ ನೀಡಬೇಕಾದ 89.75 ಲಕ್ಷ ರೂ., ಎಲ್. ಶಿವರಾಮಕೃಷ್ಣನ್‌ಗೆ 26.12 ಲಕ್ಷ ರೂ. ಪಾವತಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ. ದೇಶೀಯ ಟೂರ್ನಿಗಳನ್ನು, ಶಿಬಿರಗಳನ್ನು ಆಯೋಜಿಸಿದ್ದ ವಿವಿಧ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೂ ಬಿಸಿಸಿಐ ಹಣ ಬಿಡುಗಡೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X