Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಧ್ವಿ ಪ್ರಜ್ಞಾಗೆ ಎನ್‌ಐಎ ಕ್ಲೀನ್ ಚಿಟ್...

ಸಾಧ್ವಿ ಪ್ರಜ್ಞಾಗೆ ಎನ್‌ಐಎ ಕ್ಲೀನ್ ಚಿಟ್ : ಕರ್ಕರೆ ತಂಡದ ಅಧಿಕಾರಿಗಳಿಗೆ ಸಂಶಯ

ವಾರ್ತಾಭಾರತಿವಾರ್ತಾಭಾರತಿ14 May 2016 4:33 PM IST
share
ಸಾಧ್ವಿ ಪ್ರಜ್ಞಾಗೆ ಎನ್‌ಐಎ ಕ್ಲೀನ್ ಚಿಟ್ : ಕರ್ಕರೆ ತಂಡದ ಅಧಿಕಾರಿಗಳಿಗೆ ಸಂಶಯ

ಮುಂಬೈ : ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳೇ ಆರ್‌ಡಿಎಕ್ಸ್ ಇರಿಸಿ ಮಾಲೆಗಾಂವ್ ಸ್ಫೋಟದ ಶಂಕಿತ ಆರೋಪಿಗಳ ಮೇಲೆ ತಪ್ಪು ಆರೋಪ ಬರುವಂತೆ ಮಾಡಿದ್ದಾರೆಂಬ ರಾಷ್ಟ್ರೀಯ ತನಿಖಾ ಏಜನ್ಸಿ ವಾದವನ್ನು 2008ರಲ್ಲಿ ಸಂಭವಿಸಿದ ಈ ಸ್ಫೋಟದ ತನಿಖೆಯನ್ನು ನಡೆಸಿದ್ದ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಏಜನ್ಸಿ ಈ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಗೆ ಕ್ಲೀನ್ ಚಿಟ್ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.

‘‘ಪ್ರಕರಣ ಅವರ ಕೈಯ್ಯಲ್ಲಿದೆ. ಈ ಬಗ್ಗೆ ನಾವು ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಅವರು ಹೇಳಿದ್ದು ನಿಜವಾದರೆ ಅವರೇಕೆ ಲೆ.ಕ. ಪ್ರಸಾದ್ ಪುರೋಹಿತ್ ಅವರಿಗೆ ಕ್ಲೀನ್ ಚಿಟ್ ನೀಡಿಲ್ಲ? ನಮ್ಮ ಬಾಸ್ ಹೇಮಂತ್ ಕರ್ಕರೆ ಈಗಿಲ್ಲವಾದರೂ ಅವರು ನಡೆಸಿದ ತನಿಖೆಯ ಮೇಲೆ ನಮಗೆ ವಿಶ್ವಾಸವಿದೆ’’ ಎಂದು ಎನ್‌ಐಎ ಅಧಿಕಾರಿಯೊಬ್ಬರು ಹೇಳಿದರು.

ಕರ್ಕರೆಯವರ ನೇತೃತ್ವದಲ್ಲಿ ಎಟಿಎಸ್ ಅಂದು ಪ್ರಪ್ರಥಮ ಬಾರಿಗೆ ಬಲಪಂಥೀಯ ಸಂಘಟನೆಯ ಸದಸ್ಯರನ್ನು ಬಂಧಿಸಿದ್ದು ಕೆಲ ರಾಜಕೀಯ ಪಕ್ಷಗಳಿಗೆ ಸಹಿಸಲಸಾಧ್ಯವಾಗಿತ್ತು ಎಂದು ಮೂಲಗಳು ತಿಳಿಸುತ್ತವೆ.

‘‘ಎಟಿಎಸ್ ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾಗ ನ್ಯಾಯಕ್ಕಾಗಿ ನಾವು ಆದಷ್ಟು ಶ್ರಮಿಸಿದ್ದೆವು. ಈಗ ಕರ್ಕರೆಯವರು ಇಲ್ಲದಿರುವಾಗ ಅವರು ನಡೆಸಿದ ತನಿಖೆಯನ್ನು ಸಂಶಯಿಸುವುದು ಸರಿಯಲ್ಲ,’’ಎಂದು ಈ ತನಿಖೆಯ ಭಾಗವಾಗಿದ್ದ ಎಟಿಎಸ್ ಅಧಿಕಾರಿಯೊಬ್ಬರು ಹೇಳಿದರು.

‘‘ಫೋನ್ ಸಂಭಾಷಣೆ,ಸಂಚಿನ ಸಭೆಗಳು ಮತ್ತು ಆರ್ಥಿಕ ವ್ಯವಹಾರಗಳು ಈ ಪ್ರಕರಣದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ’’ಎಂದು ಅವರು ತಿಳಿಸಿದರು.

ಈಗ ವಿಭಿನ್ನ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಅಂದು ಎಟಿಸ್ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಇತ್ತೀಚಿಗಿನ ಬೆಳವಣಿಗೆಗಳಿಂದ ಈ ಪ್ರಕರಣಕ್ಕೆ ಮತ್ತೆ ಗಮನ ಹರಿಸುವಂತಾಗಿದೆ.

ಕೆಲವುಎಟಿಎಸ್ ಅಧಿಕಾರಿಗಳು ಈ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X