Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಶಸ್ವಿಯಾದ ನೂರ್ ಜಹಾನ್ ಜಾಗೃತಿ ಅಭಿಯಾನ:...

ಯಶಸ್ವಿಯಾದ ನೂರ್ ಜಹಾನ್ ಜಾಗೃತಿ ಅಭಿಯಾನ: ಗ್ರಾಮದ ಎಲ್ಲ ಮನೆಗೆ ಶೌಚಾಲಯ ಬಂತು

ವಾರ್ತಾಭಾರತಿವಾರ್ತಾಭಾರತಿ14 May 2016 10:00 PM IST
share
ಯಶಸ್ವಿಯಾದ ನೂರ್ ಜಹಾನ್ ಜಾಗೃತಿ ಅಭಿಯಾನ: ಗ್ರಾಮದ ಎಲ್ಲ ಮನೆಗೆ ಶೌಚಾಲಯ ಬಂತು

ಲಕ್ನೋ, ಮೇ 15: ಮುಂದಿನ ಎರಡು ವಾರಗಳಲ್ಲಿ ಇಲ್ಲಿನ ಹೊರವಲಯದ ಪಪ್ನ ಮುಆ ಗ್ರಾಮ ಸಂಪೂರ್ಣ ಬಹಿರಂಗ ಬಹಿರ್ದೆಸೆ ಮುಕ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಮೊದಲು ತನ್ನ ಮನೆಯಲ್ಲಿ ನಂತರ ಗ್ರಾಮದ ಎಲ್ಲ 418 ಮನೆಗಳಲ್ಲಿ ಶೌಚಾಲಯ ನಿರ್ಮಾಣ ಆಗುವಂತೆ ಮಾಡಿದ ಕೀರ್ತಿ ಗ್ರಾಮದ ಸಾಮಾನ್ಯ ಗ್ರಹಿಕೆ ನೂರ್ ಜಹಾನ್ ಹಾಗೂ ಆಕೆಯ 11ರ ಹರೆಯದ ಪುತ್ರಿ ನರ್ಗೀಸ್ ಗೆ ಸಲ್ಲುತ್ತದೆ.

ಕಳೆದ 6 ತಿಂಗಳಲ್ಲಿ ನೂರ್ ಜಹಾನ್ ತನ್ನ ಪುತ್ರಿಯ ಸಹಕಾರ ಪಡೆದು ನಡೆಸಿದ ನಿರಂತರ ಜಾಗೃತಿ ಅಭಿಯಾನ ಈಗ ಫಲ ನೀಡಿದೆ. ಆದರೆ ಇದು ಸುಲಭವಾಗಿರಲಿಲ್ಲ. ಪತಿ ಹಾಗೂ ತನ್ನ ಇಬ್ಬರು ಮಕ್ಕಳೊಂದಿಗೆ ಇರುವ ನೂರ್ ಜಹಾನ್ ಪ್ರಾರಂಭದಲ್ಲಿ ತೀವ್ರ ವಿರೋಧವನ್ನು ಎದುರಿಸಬೇಕಾಯಿತು. ಆಕೆಯ ಪತಿ ಕೂಡಾ ಆಕೆಯ ಈ ಜಾಗೃತಿ ಅಭಿಯಾನವನ್ನು ವಿರೋಧಿಸಿ ಸ್ವಲ್ಪ ಸಮಯ ಆಕೆಯನ್ನು ಬಿಟ್ಟೇ ಹೋಗಿದ್ದ. ಆಕೆ ಜನರ ಬಳಿ ಹೋಗಿ ಶೌಚಾಲಯದ ಮಹತ್ವ ಹೇಳುವಾಗ ನಮ್ಮ ಮನೆಯೊಳಗಿನ ವಿಷಯಕ್ಕೆ ನೀನು ತಲೆ ಹಾಕಬೇಡ ಎಂದು ಮನೆಯಿಂದ ದೂಡಿ ಬಿಡುತ್ತಿದ್ದರು. ಆದರೆ ನೂರ್ ಜಹಾನ್ ತನ್ನ ಗ್ರಾಮದ ಎಲ್ಲ ಮನೆಗಳಲ್ಲಿ ಶೌಚಾಲಯ ಇರಲೇಬೇಕು ಎಂದು ದೃಢ ಸಂಕಲ್ಪ ಮಾಡಿದ್ದರು.

ಬಹಿರಂಗ ಬಹಿರ್ದೆಸೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅದು ಯುವತಿಯರಿಗೆ ತಂದೊಡ್ಡುವ ಅಪಾಯ್ಗಳ ಬಗ್ಗೆ ಅವರು ಗ್ರಾಮಸ್ಥರಿಗೆ ಹೇಳುತ್ತಲೇ ಹೋದರು. ಶೌಚಾಲಯ ಕಟ್ಟಿಸಲು ಸಾಮರ್ಥ್ಯ ಇಲ್ಲದವರಿಗೆ ಸರಕಾರದಿಂದ ಸಿಗುವ ಆರ್ಥಿಕ ನೆರವಿನ ಬಗ್ಗೆ ಕೂಡಾ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನೂರ್‌ಜಹಾನ್‌ರ ಪುತ್ರಿ ನರ್ಗೀಸ್ ತನ್ನ ಸಹಪಾಠಿಗಳಿಗೆ ಶೌಚಾಲಯದ ಮಹತ್ವವನ್ನು ತಿಳಿಸಿಕೊಡುತ್ತಿದ್ದರು. ಅದರ ಜೊತೆಗೆ ಸ್ವಚ್ಛತೆ ಕಾಪಾಡುವ ಕುರಿತೂ ಆಕೆ ತನ್ನ ಸ್ನೇಹಿತರಿಗೆ ತಿಳಿಸಿದ್ದಳು. ಈ ಎಲ್ಲಾ ಪ್ರಯತ್ನಗಳ ಫಲವಾಗಿ ಇಂದು ನೂರ್‌ಜಹಾನ್‌ರ ಗ್ರಾಮದ 300 ಮನೆಗಳಲ್ಲಿ ಶೌಚಾಲಯ ನಿರ್ಮಾಣವಾಗಿದೆ. ಉಳಿದ ಮನೆಗಳಲ್ಲೂ ನಿರ್ಮಾಣದ ಕೆಲಸ ಪ್ರಗತಿಯಲ್ಲಿದೆ.

ಇದೆಲ್ಲಾ ಪ್ರಾರಂಭವಾಗಿದ್ದು ಅಂಗನವಾಡಿ ಕಾರ್ಯಾಗಾರವೊಂದರಿಂದ. ಅಲ್ಲಿ ಶೌಚಾಲಯದ ಮಹತ್ವ ತಿಳಿದುಕೊಂಡ ನೂರ್‌ಜಹಾನ್ ಅದೇದಿನ ತನ್ನ ಮನೆಗೆ ಬಂದು ಮನೆಯ ಹಿಂದಿದ್ದ ಜಾಗದಲ್ಲಿ ಶೌಚಾಲಯ ನಿರ್ಮಾಣ ಮಾಡಲು ಪ್ರಾರಂಭಿಸಿದರು. ಸ್ವತಃ ತಾವೇ ಕಟ್ಟಿ, ಶೌಚಾಲಯ ನಿರ್ಮಾಣವನ್ನು ಪೂರ್ಣಗೊಳಿಸಿದರು. ಇದು ಆ ಗ್ರಾಮದ ಪ್ರಪ್ರಥಮ ಶೌಚಾಲಯವಾಗಿತ್ತು. ಇಂದು ಆ ಗ್ರಾಮದ ಎಲ್ಲಾ ಮನೆಗಳು ಶೌಚಾಲಯ ಹೊಂದುವ ಹಂತಕ್ಕೆ ಬಂದಿವೆ.

ತನ್ನ ವಿಶಿಷ್ಟ ಸಾಮಾಜಿಕ ಜಾಗೃತಿಯ ಅಭಿಯಾನಕ್ಕಾಗಿ ನೂರ್‌ಜಹಾನ್‌ರನ್ನು ಜಿಲ್ಲಾಧಿಕಾರಿ ರಾಜ್‌ಶೇಖರ್ ಅವರು ಅಭಿನಂದಿಸಿ, 2,000 ರೂ. ನಗದು ಬಹುಮಾನವನ್ನು ನೀಡಿದ್ದರು.

ಕೃಪೆ:timesofindia

share
ವಾರ್ತಾಭಾರತಿ
ವಾರ್ತಾಭಾರತಿ
Next Story
X