Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾರ್ಖಂಡ್ ಬಂದ್ ವೇಳೆ ಭಾರೀ ಹಿಂಸಾಚಾರ:...

ಜಾರ್ಖಂಡ್ ಬಂದ್ ವೇಳೆ ಭಾರೀ ಹಿಂಸಾಚಾರ: 550ಕ್ಕೂ ಹೆಚ್ಚು ಬಂಧನ

ವಾರ್ತಾಭಾರತಿವಾರ್ತಾಭಾರತಿ14 May 2016 11:43 PM IST
share
ಜಾರ್ಖಂಡ್ ಬಂದ್ ವೇಳೆ ಭಾರೀ ಹಿಂಸಾಚಾರ: 550ಕ್ಕೂ ಹೆಚ್ಚು ಬಂಧನ

ರಾಂಚಿ, ಮೇ 14: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕರೆ ನೀಡಿದ್ದ 24 ತಾಸುಗಳ ಬಂದ್‌ನ ವೇಳೆ, ಒಬ್ಬ ಶಾಸಕನ ಸಹಿತ 550ಕ್ಕೂ ಹೆಚ್ಚು ಮಂದಿ ರಾಜ್ಯಾದ್ಯಂತ ಬಂಧಿಸಲ್ಪಟ್ಟಿದ್ದಾರೆ. ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಇತರ ಹಲವು ವಾಹನಗಳನ್ನು ಹಾನಿಗೊಳಿಸಲಾಗಿದೆ.

ಜಮ್ಶೆಡ್‌ಪುರದಲ್ಲಿ ನಸುಕಿನ ವೇಳೆ, ಟಾಟಾ ಮೋಟರ್ಸ್ ಉದ್ಯೋಗಿಗಳನ್ನು ಸಾಗಿಸುವ ಬಸ್ಸೊಂದಕ್ಕೆ ಬಂದ್ ಬೆಂಗಲಿಗರು ಬೆಂಕಿ ಹಚ್ಚಿದ್ದಾರೆ. ಇತರ ಕೆಲವು ವಾಹನಗಳ ಗಾಜನ್ನು ಪುಡಿ ಮಾಡಿದ್ದಾರೆ ಹಾಗೂ ಕೊಲ್ಹನ್ ಪ್ರದೇಶದಲ್ಲಿ ರಸ್ತೆ ತಡೆ ನಿರ್ಮಿಸಿದ್ದರೆಂದು ಜಮ್ಶೆಡ್‌ಪುರ ಮುಖ್ಯಾಲಯ-1ರ ಪೊಲೀಸ್ ಉಪಾಧೀಕ್ಷಕ ಕೆ.ಎನ್. ಮಿಶ್ರಾ ತಿಳಿಸಿದ್ದಾರೆ. ಪೂರ್ವ ಸಿಂಗಭೂಮ್ ಜಿಲ್ಲೆಯ ಧಂಗಾದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ಕೊಂದಕ್ಕೆ ಬೆಂಕಿ ಹಚ್ಚಲಾಗಿದೆಯೆಂದು ಡಿಎಸ್ಪಿ ಅಮಿತ್‌ಕುಮಾರ್ ಹೇಳಿದ್ದಾರೆ.

ರಾಜ್ಯಾದ್ಯಂತ ಬಂದ್ ಹೇರಿಕೆಗೆ ಯತ್ನಿಸುತ್ತಿದ್ದ 550ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ 450 ಜನರನ್ನು ಸೆರಾಯ್ಲೇಲಾ-ಖರ್ಸ್ವಾನ್ ಜಿಲ್ಲೆಯೊಂದರಿಂದಲೇ ಸೆರೆಹಿಡಿಯಲಾಗಿದೆ. ಇಂದು ಮುಂಜಾನೆ ಖರ್ಸ್ವಾನ್ ಪ್ರದೇಶದಲ್ಲಿ 50 ಮಂದಿ ಬೆಂಬಲಿಗರೊಂದಿಗೆ ಜೆಎಂಎಂ ಶಾಸಕ ದಶರಥ ಗಾಗ್ರಾಯಿ ಯವರನ್ನು ಬಂಧಿಸಲಾಗಿದೆಯೆಂದು ಎಸ್ಪಿ ಇಂದ್ರಜಿತ್ ಮಹತಾ ತಿಳಿಸಿದ್ದಾರೆ.

ಬಂದ್ ಯಶಸ್ವಿಯಾಗಿದ್ದು, ಚಾರಿತ್ರಿಕವಾಗಿದೆಯೆಂದು ಶಾಸಕ ಹಾಗೂ ಜೆಎಂಎಂನ ಹಿರಿಯ ಉಪಾಧ್ಯಕ್ಷ ಚಂಪೈ ಸೊರೇನ್ ಬಣ್ಣಿಸಿದ್ದಾರೆ. ಆದರೆ, ಬಂದ್‌ನ ಪರಿಣಾಮ ಭಾಗಶಃ ಆಗಿತ್ತೆಂದು ಪೊಲೀಸರು ಹೇಳಿದ್ದಾರೆ.

ಆರ್‌ಜೆಡಿ, ಸಿಪಿಐ ಹಾಗೂ ಜಾರ್ಖಂಡ್ ವಿಕಾಸ್ ಮೋರ್ಚಾ ಬಂದ್‌ಗೆ ಬೆಂಬಲ ನೀಡಿವೆ. ಜಾರ್ಖಂಡ್‌ನಲ್ಲಿ ವ್ಯಾಪಾರ, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ 30 ಅಥವಾ ಹೆಚ್ಚು ವರ್ಷಗಳಿಂದ ನೆಲೆಸಿದ್ದು, ಸ್ಥಿರಾಸ್ತಿ ಹೊಂದಿದವರನ್ನು ರಾಜ್ಯದ ನಿವಾಸಿಗಳೆಂದು ಪರಿಗಣಿಸಲಾಗುವುದು ಇತ್ಯಾದಿ ಮಾನದಂಡಗಳಿರುವ, ಇತ್ತೀಚೆಗೆ ರಾಜ್ಯ ಸರಕಾರ ಘೋಷಿಸಿರುವ ಸ್ಥಳೀಯ ನೀತಿಯನ್ನು ವಿರೋಧಿಸಿ ಜೆಎಂಎಂ ಈ ಬಂದ್‌ಗೆ ಕರೆ ನೀಡಿದೆ.

ರಾಜ್ಯದ ನಿವಾಸಿಯೆನಿಸಲು 1932 ಸರ್ವೇಯನ್ನು ಕನಿಷ್ಠ ಅರ್ಹತಾ ಮಿತಿಯನ್ನಾಗಿಸಬೇಕೆಂಬುದು ಅದರ ಬೇಡಿಕೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X