Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರೀ ಗಾಳಿ,ಮಳೆಗೆ 60 ಲಕ್ಷ ರೂ.ಬೆಳೆ...

ಭಾರೀ ಗಾಳಿ,ಮಳೆಗೆ 60 ಲಕ್ಷ ರೂ.ಬೆಳೆ ಹಾನಿ

ವಾರ್ತಾಭಾರತಿವಾರ್ತಾಭಾರತಿ15 May 2016 9:19 PM IST
share
ಭಾರೀ ಗಾಳಿ,ಮಳೆಗೆ 60 ಲಕ್ಷ ರೂ.ಬೆಳೆ ಹಾನಿ

ದಾವಣಗೆರೆ,ಮೇ15: ಜಿಲ್ಲೆಯಲ್ಲಿ ಶನಿವಾರ ಸಂಜೆ ಸುರಿದ ಭಾರೀ ಮಳೆ ಗಾಳಿಗೆ ತಾಲೂಕಿನ ಲೋಕಿಕೆರೆ ಹೋಬಳಿಯ ಹೂವಿನಮಡು ಗ್ರಾಮದ ಮನೆಗಳ ಹೆಂಚು ಹಾರಿ, ಫಲಕ್ಕೆ ಬಂದ ತೆಂಗು, ಅಡಿಕೆ, ಬಾಳೆ, ಭತ್ತ ಸಂಪೂರ್ಣ ನಾಶಗೊಂಡು ಬರೋಬ್ಬರಿ 60 ಲಕ್ಷ ರೂ.ಗಳಿಗೂ ಅಧಿಕ ಹಾನಿಯಾಗಿದೆ.

ಹೂವಿನಮಡು ಗ್ರಾಮದ ಚಿಕ್ಕಜ್ಜರ ಹನುಮಂತಪ್ಪ ಅವರ 4 ಎಕರೆ ಅಡಿಕೆ, ತೆಂಗಿನ ತೋಟ ನೆಲಕಚ್ಚಿದ್ದು, ಕುಟುಂಬಕ್ಕೆ ಸೇರಿದ್ದ 35 ವರ್ಷದ ತೆಂಗು, 15 ವರ್ಷದ ಅಡಿಕೆಯಲ್ಲಿ ಫಲಕ್ಕೆ ಬಂದಿದ್ದ 450 ಅಡಿಕೆ, 800 ತೆಂಗು ವಾಯುದೇವನ ಕೋಪಕ್ಕೆ ಧರೆಗುರುಳಿವೆ. ಲೋಕಿಕೆರೆ ವ್ಯಾಪ್ತಿಯ ಹೂವಿನಮಡು, ಶ್ಯಾಗಲೆ, ಕಂದಕಲ್ಲು, ಗಿಡ್ಡನಹಳ್ಳಿ ಗ್ರಾಮಗಳಲ್ಲಿ ಶನಿವಾರ ಸಂಜೆ ಭಾರೀ ಗಾಳಿಯೊಂದಿಗೆ ಆರಂಭವಾದ ಮಳೆ ಕ್ಷಣಾರ್ಧದಲ್ಲಿ ಎಲ್ಲಾ ಬೆಳೆಯನ್ನು ನಾಶಮಾಡಿದೆ. ಗಿಡ್ಡನಹಳ್ಳಿಯಲ್ಲಿ 14 ಮನೆ, ಶ್ಯಾಗಲೆ ಕ್ಯಾಂಪ್‌ನಲ್ಲಿ 15 ಮನೆ, ಹೂವಿನ ಮಡು ಗ್ರಾಮದಲ್ಲಿ 12 ಮನೆಗಳ ಹೆಂಚುಗಳು ಗಾಳಿಗೆ ಹಾರಿಹೋಗಿದ್ದು, ಮನೆ ಕಳೆದುಕೊಂಡವರು ತಲೆಮೇಲೆ ಕೈಹೊತ್ತು ಕುಳಿತದ್ದು ಎಂತಹವರಿಗೆ ಮರುಕ ಹುಟ್ಟಿಸುವಂತಿತ್ತು. ಈ ಮೂರ್ನಾಲ್ಕು ಗ್ರಾಮಗಳಲ್ಲಿ ಒಟ್ಟು 20 ಎಕರೆ ಭತ್ತ, 15 ಎಕರೆ ಬಾಳೆ, 3 ಸಾವಿರ ಅಡಕೆ ಮರ, 500 ತೆಂಗಿನ ಗಿಡಗಳು ಸೇರಿದಂತೆ ರಸ್ತೆ ಬದಿಯ ದೊಡ್ಡ ದೊಡ್ಡ ಮರಗಳೆಲ್ಲಾ ಧರೆಗುರುಳಿವೆ. ನೂರಾರು ಮನೆಗಳ ಹೆಂಚು, ಗೋಡೆಗಳು ಕುಸಿದಿವೆ. ಕೃಷಿಯಿಂದಲೇ ಜೀವನ ನಡೆಸುತ್ತಿರುವ ಹೂವಿನಮಡು ಗ್ರಾಮದ ಚಿಕ್ಕಜ್ಜರ ಹನುಮಂತಪ್ಪ ಅವರ ಕುಟುಂಬದ ನಾಲ್ಕು ಎಕರೆ ಫಲಕ್ಕೆ ಬಂದಿದ್ದ ತೋಟಕ್ಕೆ ಸಂಪೂರ್ಣ ಹಾನಿಯಾಗಿದೆ. ಹನುಮಂತಪ್ಪ ಸೇರಿ ನಾಲ್ವರು ಅಣ್ಣತಮ್ಮಂದಿರು ಕಷ್ಟಪಟ್ಟು ತೋಟ ಬೆಳೆಸಿದ್ದರು. ಪರಿಣಾಮ ಹನುಮಂತಪ್ಪ ಮಡದಿ ಚಂದ್ರಮ್ಮ, ಸೊಸೆ ಲೀಲಾ ಸೇರಿದಂತೆ ಕುಟುಂಬಸ್ಥರು ಮನೆ, ಮಕ್ಕಳ ಭವಿಷ್ಯ ನೆನೆದು ಹೊಲದಲ್ಲಿಯೇ ಬಿಕ್ಕಿಬಿಕ್ಕಿ ಅತ್ತರು. ಕುಟುಂಬದವರ ರೋದನ ಮುಗಿಲುಮುಟ್ಟಿತ್ತು. ಗಾಳಿಯ ರಭಸಕ್ಕೆ ಅನೇಕ ಮನೆಗಳ ಹೆಂಚುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಹತ್ತಿಪ್ಪತ್ತು ಅಡಿ ದೂರಕ್ಕೆ ಹಾರಿಬಿದ್ದಿದ್ದು, ಶ್ಯಾಗಲಿ ಕ್ಯಾಂಪ್‌ನ ಮನೆಯೊಳಗಿದ್ದ ಗಂಗಮ್ಮ ಎಂಬವರ ಕೈಗೆ ಹೆಂಚು ಬಿದ್ದ ಪರಿಣಾಮ ನಗರದ ಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಿಡ್ಡನಹಳ್ಳಿ ಗ್ರಾಮದಲ್ಲೂ ವೃದ್ಧರೋರ್ವರ ಮೇಲೆ ಹೆಂಚು ಬಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಪಂ ಸದಸ್ಯ ಕೆ.ಎಚ್. ಓಬಳೇಶ್, ಕಂದಾಯ ಅಧಿಕಾರಿ ಆರ್.ಬಿ. ಮಂಜುನಾಥ್, ಉಪತಹಶೀಲ್ದಾರ್ ರಾಮಸ್ವಾಮಿ ಮತ್ತಿತರರು ಭೇಟಿ ನೀಡಿ, ಪರಿಹಾರ ದೊರಕಿಸುವ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X