Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ...

ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸುಶ್ರುತ್‌ಗೆ ಐಎಎಸ್/ವೈದ್ಯಕೀಯ ನಿದೇಶಕನಾಗುವಾಸೆ

ವಾರ್ತಾಭಾರತಿವಾರ್ತಾಭಾರತಿ16 May 2016 9:39 PM IST
share
ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸುಶ್ರುತ್‌ಗೆ ಐಎಎಸ್/ವೈದ್ಯಕೀಯ ನಿದೇಶಕನಾಗುವಾಸೆ

ಉಜಿರೆ, ಮೇ 16: ಭಾರತೀಯ ಲೋಕ ಸೇವಾ ಆಯೋಗದಲ್ಲಿ (ಐಎಎಸ್) ಅಥವಾ ವೈದ್ಯಕೀಯ ನಿರ್ದೇಶಕನಾಗಿ (ಮೆಡಿಕಲ್ ಡೈರೆಕ್ಟರ್) ಆಗಿ ಸೇವೆ ಸಲ್ಲಿಸಬೇಕೆಂಬ ಮಹದಾಸೆ ನನ್ನದು. ಆ ದಿಕ್ಕಿನಲ್ಲಿ ಮುಂದಿನ ವಿದ್ಯಾಭ್ಯಾಸವನ್ನು ಮಾಡುವೆ. ಇದು ಈ ಬಾರಿಯ ಹತ್ತನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೆ ಸ್ಥಾನ ಪಡೆದಿರುವ ಬೆಳ್ತಂಗಡಿ ತಾಲೂಕಿನ ಸುಶ್ರುತ್‌ಯು.ಕೆ.ಯ ಗುರಿ.

ಪತ್ರಿಕೆ ಸೋಮವಾರ ಬೆಳ್ತಂಗಡಿ ಪೇಟೆ ಸನಿಹದ ಲಾಯಿಲ ಗ್ರಾಮದ ಕಕ್ಕೇನ ಎಂಬಲ್ಲಿರುವ ಪ್ರಣೀತ್ ಹೆಸರಿನ ಮನೆಗೆ ಭೇಟಿ ನೀಡಿ ಸುಶ್ರುತನಲ್ಲಿ ಮಾತುಕತೆಗಿಳಿಯಿತು.

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುವ ಸುಶ್ರುತ್ ಈ ಬಾರಿ ಒಟ್ಟು ಅಂಕ 625 ರಲ್ಲಿ 624 ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾನೆ.

ಕನ್ನಡ, ಇಂಗ್ಲೀಷ್, ಹಿಂದಿ, ಸಮಾಜ ಹಾಗು ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆದರೆ ವಿಜ್ಞಾನದಲ್ಲಿ 99 ಅಂಕ ಪಡೆದಿದ್ದಾನೆ. 620 ಅಂಕ ಬರಬಹುದೆಂದು ಆತನ ನಿರೀಕ್ಷೆಯಾಗಿತ್ತು.

ಪ್ರತಿದಿನ ಏಳೆಂಟು ಗಂಟೆ ಅಧ್ಯಯನ ಮಾಡುತ್ತಿದ್ದ ಯಾವುದೇ ಕೋಚಿಂಗ್ ಸೆಂಟರ್‌ನ ತರಬೇತಿ ಪಡೆಯದೆ ಸುಶ್ರುತ್ ಪಠ್ಯಪುಸ್ತಕವನ್ನಷ್ಟೇ ಓದುತ್ತಿದ್ದ. ಬೆಳಗ್ಗೆ 5 ಗಂಟೆಗೆ ಎದ್ದರೆ ರಾತ್ರಿ 11 ಗಂಟೆಗೆ ವಿಶ್ರಾಂತಿ. ಕೇವಲ ಶಾಲೆಯ ಓದಿನಲ್ಲಿ ಮುಂದಿರುವುದಷ್ಟೇ ಅಲ್ಲ. ಯಕ್ಷಗಾನ, ಭಾಗವತಿಕೆ, ಕೊಳಲು, ವಯಲಿನ್, ಭರತ ನೃತ್ಯದಲ್ಲೂ ಮುಂದು. ಈ ಪಠ್ಯೇತರ ಚಟುವಟಿಕೆ ಆತನ ಅಂಕಗಳಿಕೆಗೆ ಪೂರಕವಾಗಿತ್ತೆನ್ನುವುದು ವಿಶೇಷ.

ತಂದೆ ಕಿಶೋರ್ ಕುಮಾರ್ ಯು.ಬಿ. ಬಂಟ್ವಾಳದಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸುಪರಿಟೆಂಡೆಂಟ್, ಯಕ್ಷಗಾನ ಪ್ರೇಮಿ ತಾಯಿ ಸುರೇಖಾ ಗುರುವಾಯನಕರೆ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕಿ. 5 ನೆ ತರಗತಿಯವರೆಗೆ ಮಡಿಕೇರಿಯಲ್ಲಿ ಶಿಕ್ಷಣ ಬಳಿಕ ಲಾಯಿಲದ ಸೈಂಟ್ ಮೇರಿ ಶಾಲೆಯಲ್ಲಿ. ಅಪ್ಪ ಅಮ್ಮನ ಹಾಗೂ ಶಾಲಾ ಅಧ್ಯಾಪಕ ವೃಂದದವರ ಬೆಂಬಲವೇ ನನ್ನ ಸಾಧನೆಗೆ ಕಾರಣ ಎಂದೆನ್ನುವ ಸುಶ್ರುತ್ ಐಎಎಸ್ ಅಥವಾ ಮೆಡಿಕಲ್ ಡೈರಕ್ಟರ್ ಆಗುವ ಹೆಬ್ಬಯಕೆಯನ್ನು ವ್ಯಕ್ತಪಡಿಸುತ್ತಾನೆ.

ನನ್ನ ಮಗ ಸಮಾಜ ಸೇವೆ ಮಾಡಬೇಕು. ಹೀಗಾಗಿ ಆತ ಐಎಎಸ್ ಪಾಸ್ ಆಗಲಿ ಎನ್ನುವ ಆಸೆ ನನ್ನದು. ನಾನು ನನ್ನ ಶಾಲೆಯಲ್ಲಿ ವಿದ್ಯಾರ್ಥಿಗಳ ಏಳಿಗೆಗೆ ವಹಿಸಿದ ಶ್ರಮ ನನಗೆ ನನ್ನ ಮಗನ ಸಾಧನೆಯ ಮೂಲಕ ಪ್ರತಿಫಲ ನೀಡಿದೆ.

ಸುರೇಖಾ, ತಾಯಿ

ನನ್ನ ಸಂಗೀತ ಸಾಧನೆ ನನ್ನ ಓದಿಗೆ ಸಹಾಯ ಮಾಡಿದೆ. ಓದುವ ಧಾವಂತದಲ್ಲಿ ಒತ್ತಡ ಬಂದರೆ ಕೊಳಲು ನುಡಿಸುತ್ತಾ ಕೂರುತ್ತೇನೆ. ಅದು ನನ್ನ ಮನಸ್ಸನ್ನು ಹಗುರವಾಗಿಸುತ್ತದಲ್ಲದೆ ನನಗೆ ಓದಲು ಇನ್ನಷ್ಟು ಸ್ಪೂರ್ತಿಯನ್ನು ನೀಡುತ್ತದೆ.- ಸುಶ್ರುತ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X