Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಕಾಫಿಗೆ ಪ್ರತಿಕೂಲ ಹವಾಮಾನ: 2...

ಭಾರತ ಕಾಫಿಗೆ ಪ್ರತಿಕೂಲ ಹವಾಮಾನ: 2 ದಶಕದಲ್ಲೇ ಕನಿಷ್ಠ ಉತ್ಪಾದನೆ

ವಾರ್ತಾಭಾರತಿವಾರ್ತಾಭಾರತಿ17 May 2016 11:39 PM IST
share

ಮುಂಬೈ, ಮೇ 17: ಮುಂದಿನ ಬೆಳೆ ಹಂಗಾಮಿನಲ್ಲಿ ದೇಶದ ಕಾಫಿ ಉತ್ಪಾದನೆ ಶೇ.25ರಷ್ಟು ಕುಸಿಯುವ ಸಾಧ್ಯತೆ ಇದ್ದು, ಎರಡು ದಶಕಗಳಲ್ಲೇ ಕನಿಷ್ಠ ಪ್ರಮಾಣದ ಕಾಫಿ ಉತ್ಪಾದನೆಯಾಗುವ ಸಾಧ್ಯತೆ ಇದೆ. ಕಾಫಿ ಹೂ ಬಿಡುವ ಹಂತದಲ್ಲಿ ಮಳೆ ಅಭಾವ ಹಾಗೂ ಅಧಿಕ ಉಷ್ಣಾಂಶದ ಕಾರಣದಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಕಾಫಿ ಉದ್ಯಮ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದಾರೆ.
ಜಾಗತಿಕ ಮಟ್ಟದಲ್ಲಿ ಕಾಫಿ ಉತ್ಪಾದನೆಯಲ್ಲಿ ಬ್ರೆಜಿಲ್ ಹಾಗೂ ವಿಯೆಟ್ನಾಂಗಿಂತ ತೀರಾ ಹಿಂದಿರುವ ಭಾರತ, ವಿಶ್ವದಲ್ಲಿ ಆರನೆ ಸ್ಥಾನದಲ್ಲಿದೆ. ಭಾರತದಲ್ಲಿ ಉತ್ಪಾದನೆ ಕುಸಿತದಿಂದಾಗಿ ಜಾಗತಿಕ ಮಟ್ಟದಲ್ಲಿ ಕಾಫಿ ಬೆಲೆ ಏರಿಕೆಗೆ ಕಾರಣವಾಗಲಿದೆ. ಈಗಾಗಲೇ ಅಗ್ರಗಣ್ಯ ಕಾಫಿ ಉತ್ಪಾದಕ ದೇಶವಾದ ಬ್ರೆಜಿಲ್‌ನಲ್ಲಿ ಉತ್ಪಾದನೆ ಕುಸಿತದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಗಗನಮುಖಿಯಾಗಿದೆ.
ಮಹತ್ವದ ಕಾಫಿ ಹೂ ಬಿಡುವ ಹಂತದಲ್ಲಿ ಒಣ ಹವೆ ಬಹುತೇಕ ಬೆಳೆಗಾರರಿಗೆ ಮಾರಕವಾಗಿ ಪರಿಣಮಿಸಿದೆ. ತೀರಾ ಕಠಿಣ ಅಂದಾಜಿನ ಪ್ರಕಾರ ಕೂಡಾ ಶೇ.25ರಷ್ಟು ಉತ್ಪಾದನೆ ಕುಸಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ಪ್ಲಾಂಟರ್ಸ್‌ ಅಸೋಸಿಯೇಶನ್ ಅಧ್ಯಕ್ಷ ಬಾಬಾ ಪಿ.ಎಸ್.ಬೇಡಿ ರಾಯ್ಟರ್ಸ್‌ ಸುದ್ದಿಸಂಸ್ಥೆ ಜತೆ ಮಾತನಾಡುತ್ತಾ ಸ್ಪಷ್ಟಪಡಿಸಿದ್ದಾರೆ.
ಭಾರತದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ.70ರಷ್ಟಿದೆ. ಈ ವರ್ಷದ ಸೆಪ್ಟಂಬರ್ 30ರಂದು ಅಂತ್ಯವಾಗುವ ಕಾಫಿ ಋತುವಿನಲ್ಲಿ ಭಾರತ ಸುಮಾರು 3.5 ಲಕ್ಷ ಟನ್ ಕಾಫಿ ಉತ್ಪಾದಿಸುವ ಅಂದಾಜು ಇದೆ ಎಂದು ಕಾಫಿ ಬೋರ್ಡ್ ಹೇಳಿದೆ. ಆದರೆ ಕರ್ನಾಟಕದ ಉತ್ಪಾದನೆಯಲ್ಲಿ ಶೇ.25ರಷ್ಟು ಕುಸಿತವಾಗುವ ಹಿನ್ನೆಲೆಯಲ್ಲಿ, 2016-17ನೆ ಬೆಳೆ ವರ್ಷದಲ್ಲಿ ಇದು 2.63 ಲಕ್ಷ ಟನ್‌ಗೆ ಕುಸಿಯುವ ನಿರೀಕ್ಷೆ ಇದೆ. ಇದು 1988-89ರ ಬಳಿಕ ಕನಿಷ್ಠ ಉತ್ಪಾದನೆಯಾಗಿದೆ.
ಕಾಫಿ ಬೋರ್ಡ್ 2016-17ನೆ ಸಾಲಿನ ಕಾಫಿ ಬೆಳೆ ಅಂದಾಜಿನ ಮೊದಲ ವರದಿಯನ್ನು ಜೂನ್ ಮಧ್ಯಭಾಗದಲ್ಲಿ ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಮಂಡಳಿಯಲ್ಲಿ ಕೃಷಿ ಅರ್ಥಶಾಸ್ತ್ರಜ್ಞರಾಗಿರುವ ಡಿ.ಆರ್.ಬಾಬು ರೆಡ್ಡಿ ಪ್ರಕಟಿಸಿದ್ದಾರೆ. ಕಳ್ಳಸಾಗಣೆೆ ಮೂಲಕ ತಂದ ಏಳು ಗಿಡಗಳೊಂದಿಗೆ 1670ರಲ್ಲಿ ಕಾಫಿ ಬೆಳೆ ಆರಂಭಿಸಿದ ಭಾರತದಲ್ಲಿ ಪ್ರಮುಖವಾಗಿ ರೊಬಸ್ಟಾವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಇದನ್ನು ಇನ್‌ಸ್ಟಂಟ್ ಕಾಫಿಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ.
ಮೇಲಿಂದ ಮೇಲೆ ಬರ ಪರಿಸ್ಥಿತಿ ಬಂದ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಕೆಳಕ್ಕೆ ಹೋಗಿದೆ. ಕಳೆದ ಬರ ವರ್ಷದ ಮಾರ್ಚ್ ತಿಂಗಳಲ್ಲಿ ಮಳೆ ಕಡಿಮೆ ಬಿದ್ದಿರುವುದು ಇಳುವರಿ ಕುಂಠಿತವಾಗಲು ಕಾರಣ ಎಂದು ಅವರು ವಿವರಿಸುತ್ತಾರೆ.

ದಕ್ಷಿಣ ಭಾರತದ ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಮಾರ್ಚ್‌ನಿಂದ ಮೇ ಮಧ್ಯಭಾಗದವರೆಗೆ ಬೀಳುವ ವಾಡಿಕೆ ಮಳೆಯ ಪೈಕಿ ಶೇ.70ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ಹೇಳಿವೆ. ನೀರಿನ ಕೊರತೆಯ ಜತೆಗೆ ಸಾಮಾನ್ಯಕ್ಕಿಂತ ಅಧಿಕವಾಗಿದ್ದ ಬೇಸಿಗೆ ಉಷ್ಣಾಂಶ ಪ್ರಮಾಣ ಕೂಡಾ ಉತ್ಪಾದನೆ ಕುಂಠಿತವಾಗಲು ಕಾರಣ. ಇದರಿಂದಾಗಿ ಕಾಫಿ ಹೂವುಗಳು ಕಾಳುಕಟ್ಟುವ ಮಹತ್ವದ ಹಂತದಲ್ಲಿ ಇವುಗಳನ್ನು ರಕ್ಷಿಸಿಕೊಳ್ಳುವುದು ಸಾಧ್ಯವಾಗಿಲ್ಲ ಎಂದು ದೊಡ್ಡ ಕಾಫಿ ಬೆಳೆಗಾರ ಅನಿಲ್ ಕುಮಾರ್ ಭಂಡಾರಿ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X