Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹನಿಮೂನ್ ಮುಗಿಸಿ ಬಂದ ಪತ್ನಿ ವಿಮಾನ...

ಹನಿಮೂನ್ ಮುಗಿಸಿ ಬಂದ ಪತ್ನಿ ವಿಮಾನ ನಿಲ್ದಾಣದಲ್ಲಿ ಪ್ರಿಯತಮನೊಂದಿಗೆ ಪರಾರಿ !

ಶೌಚಾಲಯದ ಹೊರಗೆ ಕಾದು ಕಂಗಾಲಾದ ಪತಿ

ವಾರ್ತಾಭಾರತಿವಾರ್ತಾಭಾರತಿ18 May 2016 10:19 AM IST
share
ಹನಿಮೂನ್ ಮುಗಿಸಿ ಬಂದ ಪತ್ನಿ ವಿಮಾನ ನಿಲ್ದಾಣದಲ್ಲಿ ಪ್ರಿಯತಮನೊಂದಿಗೆ ಪರಾರಿ !

ನವದೆಹಲಿ, ಮೇ 18: : ರಹಸ್ಯವೊಂದನ್ನು ಕೊನೆಗಳಿಗೆ ತನಕ ಹೇಗೆ ಕಾಪಾಡಬೇಕೆನ್ನುವುದಕ್ಕೆ ಈ ಮಹಿಳೆಯೇ ಜ್ವಲಂತ ನಿರ್ದಶನವೆಂದು ಹೇಳಬಹುದೇನೋ. ಅವಳ ಕುರಿತಾದ ಆಶ್ಚರ್ಯಕರ ವಿದ್ಯಮಾನ ಇಲ್ಲಿದೆ ನೋಡಿ.

ಆಕೆ ಇತ್ತೀಚೆಗೆ ಲಕ್ನೌ ಮೂಲದ ವ್ಯಕ್ತಿಯೊಬ್ಬನನ್ನು ವಿವಾಹವಾಗಿದ್ದಳು ಹಾಗೂ ಆತನೊಂದಿಗೆ ಹಿಮಾಲಯದ ತಪ್ಪಲಲ್ಲಿರುವ ಬಗ್ದೋಗ್ರಾದಲ್ಲಿ ಹನಿಮೂನಿಗೂ ಹೋಗಿದ್ದಳು. ಆದರೆ ಎಲ್ಲವೂ ಆರಂಭವಾಗಿದ್ದು ದಂಪತಿಯ ಹನಿಮೂನಿನಿಂದ. ಉತ್ತರ ಪ್ರದೇಶದ ತಮ್ಮ ಊರಿಗೆ ಪಯಣಿಸುವ ಹಾದಿಯಲ್ಲಿ ನವದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣವನ್ನು ಸೋಮವಾರ ಸಂಜೆ ತಲುಪಿದಾಗ. ಆಕೆ ನಿಲ್ದಾಣದ ವಾಶ್ ರೂಂಗೆ ತೆರಳಿದವಳು ಹಿಂದಿರುಗಿ ಬರಲೇ ಇಲ್ಲ. ಆಕೆಯ ಪತಿರಾಯ ಆಕೆಗಾಗಿ ಹೊರಗೆ ಕಾದಿದ್ದೇ ಬಂತು.

ಸುಮಾರು ಅರ್ಧ ಗಂಟೆಯ ನಂತರ ಆತ ತನ್ನ ಪತ್ನಿ ‘ನಾಪತ್ತೆ’ಯಾಗಿದ್ದಾಳೆಂದು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ. ನಿಲ್ದಾಣದ ಸುರಕ್ಷತೆಯ ಜವಾಬ್ದಾರಿ ಹೊತ್ತಿರುವ ಸಿಐಎಸ್‌ಎಫ್ ಸಿಬ್ಬಂದಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಆತನೊಂದಿಗೆ ಪರಿಶೀಲಿಸಿದಾಗ ನೀಲಿ ಸೀರೆ ಧರಿಸಿದ್ದ ಮಹಿಳೆ ವಾಶ್ ರೂಂ ಪ್ರವೇಶಿಸಿದ್ದ ಚಿತ್ರ ಕಂಡಿತ್ತು. ಅದರೆ ವಾಶ್ ರೂಮಿನಿಂದ ಹೊರಗೆ ಬಂದವರಲ್ಲಿ ಒಬ್ಬಳು ಬುರ್ಖಾಧಾರಿ ಮಹಿಳೆಯಿದ್ದಳು. ಆ ದೃಶ್ಯವನ್ನು ಗಮನಿಸಿದ ವ್ಯಕ್ತಿ ಆಕೆಯ ಎತ್ತರ ತನ್ನ ಪತ್ನಿಯದೇ ಎತ್ತರವಾಗಿದ್ದು ಅದು ಆಕೆಯೇ ಎಂಬ ತೀರ್ಮಾನಕ್ಕೆ ಬಂದು ಬಿಟ್ಟು.

ಆ ಬುರ್ಖಾಧಾರಿ ಮಹಿಳೆ ನಿಲ್ದಾಣದ ಹೊರಗೆ ವಿಐಪಿ ಪಾರ್ಕಿಂಗ್ ಸಮೀಪ ಅಪರಿಚಿತ ವ್ಯಕ್ತಿಯೊಬ್ಬನೊಂದಿಗೆ ಮಾತನಾಡುತ್ತಿರುವ ದೃಶ್ಯವೂ ಕಂಡು ಬಂದಿದ್ದು ಅವರಿಬ್ಬರೂ ಟ್ಯಾಕ್ಸಿ ಸ್ಟ್ಯಾಂಡಿನತ್ತ ನಡೆದಾಗ ಅಲ್ಲಿ ಅವರಿಗಾಗಿ ಮತ್ತೊಬ್ಬ ವ್ಯಕ್ತಿ ಕಾದಿದ್ದ. ಮೂವರೂ ಅಲ್ಲಿನ ಜನಜಂಗುಳಿ ಹಾಗೂ ವಾಹನಗಳ ಭರಾಟೆಯಲ್ಲಿ ಮತ್ತೆ ಕಾಣದಾಗಿದ್ದರು.
ಮಹಿಳೆ ವಾಶ್ ರೂಂನೊಳಕ್ಕೆ ಹೋದಾಗ ತನ್ನ ಮೊಬೈಲ್ ಫೋನನ್ನು ಪತಿಯ ಬಳಿಯೇ ಬಿಟ್ಟಿದ್ದಳು. ಆಕೆ ತಾನಾಗಿಯೇ ಆತನನ್ನು ಬಿಟ್ಟು ಹೋಗಿರುವುದರಿಂದ ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X