Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್ಥಿಕ ಸಂಕಷ್ಟದಲ್ಲಿದ್ದ ಹೃದ್ರೋಗಿಗೆ...

ಆರ್ಥಿಕ ಸಂಕಷ್ಟದಲ್ಲಿದ್ದ ಹೃದ್ರೋಗಿಗೆ ಇಂಡಿಯಾನ ಆಸ್ಪತ್ರೆಯಲ್ಲಿ ದಾನಿಗಳ ನೆರವಿನಿಂದ ಎಐಸಿಡಿ ಜೀವರಕ್ಷಕ ಸಾಧನ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ18 May 2016 5:27 PM IST
share
ಆರ್ಥಿಕ ಸಂಕಷ್ಟದಲ್ಲಿದ್ದ ಹೃದ್ರೋಗಿಗೆ ಇಂಡಿಯಾನ ಆಸ್ಪತ್ರೆಯಲ್ಲಿ ದಾನಿಗಳ ನೆರವಿನಿಂದ ಎಐಸಿಡಿ ಜೀವರಕ್ಷಕ ಸಾಧನ ಅಳವಡಿಕೆ

        ಮಂಗಳೂರು.ಮೆ.18:ಆರ್ಥಿಕ ಸಂಕಷ್ಟದಲ್ಲಿದ್ದ ಹೃದ್ರೋಗಿಯೊಬ್ಬರಿಗೆ ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಐದು ಲಕ್ಷ ರೂ ವೆಚ್ಚದ ಜೀವ ರಕ್ಷಕ ಸಾಧನವನ್ನು ದಾನಿಗಳ ನೆರವಿನಿಂದ ಉಚಿತವಾಗಿ ಪ್ರಯೋಜಿಸಿದೆ .ಚಿಕಿತ್ಸೆ ಪಡೆದು ಭಟ್ಕಳದ ಜೈಲಾನಿ ಖರೂರಿ ಚೇತರಿಸಿಕೊಂಡಿದ್ದಾರೆ ಎಂದು ಇಂಡಿಯಾನ ಆಸ್ಪತ್ರೆಯ ಹೃದ್ರೋಗ ತಜ್ಞ ಮತ್ತು ಆಡಳಿತ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

                   ಭಟ್ಕಳದ ನ್ಯೂ ಕಾಲನಿಯ ನಿವಾಸಿ ಜೈಲಾನಿ ಖರೂರಿ ಹೃದಯ ರೋಗದ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದರು.ಜೈಲಾನಿ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದು ಇದ್ದಕ್ಕಿದ್ದಂತೆ ಹೃದಯದ ಬಡಿತ ಗರಿಷ್ಟ ಮಿತಿಯನ್ನು ದಾಟಿ ಮುಂದುವರಿಯುವ ಸಮಸ್ಯೆ ಎದುರಿಸುತ್ತಿದ್ದರು.ಇದರಿಂದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗುವ ಮತ್ತು ಸಾವಿಗೀಡಾಗುವ ಸಾಧ್ಯತೆ ಅರಿ ಇಂಡಿಯಾನ ಆಸ್ಪತ್ರೆಯ ವೈದ್ಯರು ಇದಕ್ಕಾಗಿ ಜೀವ ರಕ್ಷಕ ಸಾಧನ ಎಐಸಿಡಿಯನ್ನು ದೇಹದ ಒಳಗಡೆ ಅಳವಡಿಸಿಕೊಳ್ಳಲು ರೋಗಿಗೆ ಸಲಹೆ ನೀಡಿದರು.ಆದರೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಖರೂರಿ ಕುಟುಂಬ ಅಷ್ಟು ಹಣ ಇಲ್ಲ ಎಂದು ಕೈ ಚೆಲ್ಲಿತು.ಈ ಸಂದರ್ಭದಲ್ಲಿ ರೋಗಿಯ ಕುಟುಂಬಕ್ಕೆ ಧೈರ್ಯ ಹೇಳಿ ಇಂಡಿಯಾನ ಆಸ್ಪತ್ರೆಯ ಡಾ.ಯೂಸುಫ್ ಕುಂಬ್ಳೆ,ಡಾ.ಅಬ್ದುಲ್ ಮನ್ಸೂರ್ ಹಾಗೂ ಡಾ.ಶಿವ ಶಂಕರ್ ಹಾಗೂ ಸಂಸ್ಥೆಯ ಆಡಳಿತ ಮಂಡಳಿ,ವೈದ್ಯರ ತಂಡ ದಾನಿಗಳ ನೆರವನ್ನು ಯಾಚಿಸಿತು.ಈ ಸಂದರ್ಭದಲ್ಲಿ ಜೈಲಾನಿಯವರ ಚಿಕಿತ್ಸೆಗೆ ಉದ್ಯಮಿ ಅರ್ಶದ್ ಮೋಹ್ತೆ ಶ್ಯಾಂ ಮತ್ತು ಇಸ್ಭುಲ್ ಬಟ್ಭುಲ್ ಆರ್ಥಿಕ ಸಹಾಯ ನೀಡಲು ಮುಂದೆ ಬಂದ ಕಾರಣ ಆರ್ಥಿಕ ಸಂಕಷ್ಟದಲ್ಲಿರುವ ರೋಗಿಗೆ ಸಕಾಲದಲ್ಲಿ ಜೀವ ರಕ್ಷಕ ಸಾಧನವನ್ನು ಉಚಿತವಾಗಿ ಅಳವಡಿಸಲು ಸಾಧ್ಯವಾಯಿತು.ಅಪರೂಪದ ಈ ರೀತಿಯ ಕಾಯಿಲೆಯಿಂದ ಬಳಲುವ ರೋಗಿಗಳು ಸರಕಾರದ ವಿವಿಧ ಉಚಿತ ಆರೋಗ್ಯ ಯೋಜನಾ ಸೌಲಭ್ಯದಲ್ಲೂ ಒಳಪಡದೆ ಇರುವುದರಿಂದ ಆರ್ಥಿಕ ಸಂಕಷ್ಟದಲ್ಲಿರುವ ರೋಗಿಗಳು ಈ ಜೀವ ರಕ್ಷಕ ಸಾಧನವನ್ನು ಅಳವಡಿಸಲು ಸಾಧ್ಯವಾಗದೆ ಚಿಕಿತ್ಸೆ ಬೇಡ ಎಂದು ನಿರಾಕರಿಸುತ್ತಾರೆ.ಈ ಬಗ್ಗೆ ಜನ ಜಾಗೃತಿ ಮೂಡಿದಾಗ ಇಂತಹ ಚಿಕಿತ್ಸೆಗೆ ಸಹಾಯ ನೀಡಲು ಸರಕಾರ,ಸಂಘ ಸಂಸ್ಥೆಗಳು ಮುಂದೆ ಬಂದರೆ ಆರ್ಥಿಕ ಸಂಕಷ್ಟದಲ್ಲಿರುವ ಸಾಕಷ್ಟು ರೋಗಿಗಳಿಗೆ ಹಲವು ರೋಗಿಗಳ ಜೀವ ಉಳಿಸಬಹುದು ಎಂದು ಯೂಸುಫ್ ಕುಂಬ್ಳೆ ತಿಳಿಸಿದರು.

ಈ ಜೀವ ರಕ್ಷಕ ಸಾಧನ ದೇಹದ ಒಳಗೆ ಅಳವಡಿಸಿದ ಬಳಿಕ ಹೃದ್ರೋಗಿಯ ಹೃದಯದ ಬಡಿತ ಇದ್ದಕ್ಕಿದ್ದಂತೆ ಗರಿಷ್ಟ ಮಟ್ಟವನ್ನು ಮೀರಿದಾಗ ಸ್ವಯಂ ಚಾಲಿತವಾಗಿ ದೇಹದ ಒಳಗೆ ಹೃದಯದ ಬಡಿತವನ್ನು ನಿಯಂತ್ರಿಸುವ ವ್ಯವಸ್ಥೆ ಹೊಂದಿರುತ್ತದೆ.ಈ ಸಾಧನ ಅಮೇರಿಕಾ ಸಂಸ್ಥೆಯ ಉತ್ಪನ್ನ ವಾಗಿದ್ದು 5ಲಕ್ಷ ರೂ ಬೆಲೆ ಬಾಳುವುದರಿಂದ ಸಾಮಾನ್ಯ ರೋಗಿಗಳಿಗೆ ಆರ್ಥಿಕ ಹೊರೆಯಾಗಿದೆ ಎಂದು ಡಾ.ಯೂಸುಫ್ ಕುಂಬ್ಳೆ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಇಂಡಿಯಾನ ಆಸ್ಪತ್ರೆಯ ವೈದ್ಯರಾದ ಡಾ.ಮನ್ಸೂರ್ ,ಸಾರ್ವಜನಿಕ ಸಂಪರ್ಕ ಪ್ರತಿನಿಧಿ ಭಾಸ್ಕರ ಅರಸ್,ಎಐಸಿಡಿ ಅಳವಡಿಸಿ ಚೇತರಿಸಿಕೊಂಡಿರುವ ಜೈಲಾನಿ ಖರೂರಿ ಹಾಗೂ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X