Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವಟ್ ಪರಂಬು ಹೆಸರಿನಲ್ಲಿ ವಿನಾಕಾರಣ...

ದೇವಟ್ ಪರಂಬು ಹೆಸರಿನಲ್ಲಿ ವಿನಾಕಾರಣ ವಿವಾದ: ಆರೋಪ

ವಾರ್ತಾಭಾರತಿವಾರ್ತಾಭಾರತಿ18 May 2016 11:07 PM IST
share

ಮಡಿಕೇರಿ ಮೇ 18: ಆಧಾರವಿಲ್ಲದ ಟಿಪ್ಪುವಿನ ಇತಿಹಾಸದ ಘಟನಾವಳಿಯನ್ನು ಮುಂದಿಟ್ಟುಕೊಂಡು ಹುತಾತ್ಮರ ಹೆಸರಿನಲ್ಲಿ ಕಂದಾಯ ದಾಖಲೆಗಳಲ್ಲಿ ಇಲ್ಲದ ದೇವಟ್ ಪರಂಬು ಹೆಸರಿನಲ್ಲಿ ವಿನಾಕಾರಣ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಅಯ್ಯಂಗೇರಿ ಮತ್ತು ಸಣ್ಣಪುಲಿಕೋಟು ಗ್ರಾಮಸ್ಥರು ಆರೋಪಿಸಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಯ್ಯಂಗೇರಿ ಗ್ರಾಪಂ ಸದಸ್ಯರಾದ ಮನೋಜ್ ಕೃಷ್ಣಪ್ಪ ಅಯ್ಯಂಗೇರಿ ವ್ಯಾಪ್ತಿಯಲ್ಲಿ ಗೌಡ, ಕೊಡವ, ಮುಸ್ಲಿಂ ಸೇರಿದಂತೆ ವಿವಿಧ ಜಾತಿ ಜನಾಂಗ ಬಾಂಧವರು ಸೌಹಾರ್ದಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಸ್ಮಾರಕದ ಹೆಸರಿನಲ್ಲಿ ಗ್ರಾಮೀಣ ಪ್ರದೇಶವನ್ನು ಸಂಘರ್ಷದ ಸ್ಥಳವನ್ನಾಗಿ ಮಾಡುತ್ತಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣ ಮಾಡುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.

ಸ್ಮಾರಕಕ್ಕೆಂದು ಕಲ್ಲಿನ ಕಂಬಗಳನ್ನು ಅಳವಡಿಸಲಾದ ಜಾಗ ಅರಣ್ಯ ಇಲಾಖೆಗೆ ಸೇರಿದ್ದಾಗಿದ್ದು, ಈ ಪ್ರದೇಶವನ್ನು 1952ರಲ್ಲಿ ಅಂದಿನ ಕೂರ್ಗ್ ಕಮೀಷನರ್ ಮೀಸಲು ಅರಣ್ಯವೆಂದು ನಿಗದಿಪಡಿಸಿದ್ದಾರೆ. ದೇವಟ್ ಪರಂಬು ಎನ್ನುವುದು ಸತ್ಯಕ್ಕೆ ದೂರವಾದ ವಿಚಾರವಾಗಿದೆ. ಈ ಪ್ರದೇಶವನ್ನು ಕಲ್ಲು ಕಟ್ಟಡದ ಪರಂಬು ಹಾಗೂ ಕಣಿಯಂಗೋಟು ಪರಂಬು ಎಂದು ಕರೆಯುತ್ತಾರೆ ಎಂದು ಮನೋಜ್ ಕೃಷ್ಣಪ್ಪ ತಿಳಿಸಿದರು.

ಸಿಎನ್‌ಸಿ ಸಂಘಟನೆ ಹುತಾತ್ಮರ ಸ್ಮರಣೆಗೆಂದು ಅಳವಡಿಸಿದ್ದ ಕಲ್ಲು ಕಂಬಗಳನ್ನು ಅರಣ್ಯ ಇಲಾಖೆಯೇ ಧ್ವಂಸ ಮಾಡಿರುವ ಸಾಧ್ಯತೆಗಳಿದೆ. ಅನಗತ್ಯವಾಗಿ ಗ್ರಾಮಸ್ಥರ ಮೇಲೆ ಆರೋಪ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಹಿಂದೆ ಸಿಎನ್‌ಸಿ ಸಂಘಟನೆ ಮೀಸಲು ಅರಣ್ಯದ ಬೇರೊಂದು ಸ್ಥಳದಲ್ಲಿ ದೇವಟ್ ಪರಂಬು ಎಂದು ಸ್ಮಾರಕ ನಿರ್ಮಿಸಲು ಮುಂದಾದಾಗ ಅರಣ್ಯ ಅಧಿಕಾರಿಗಳು ಕಾನೂನು ಬಾಹಿರ ಕೆಲಸಕ್ಕೆ ಸಹಕರಿಸಿದ್ದಾರೆ. ಆ ಸಂದರ್ಭ ಕೆಲವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ಯಾರನ್ನೂ ಬಂಧಿಸಿಲ್ಲ. ಬಳಸಲಾಗಿದ್ದ ವಾಹನ, ಜೆಸಿಬಿ, ಕ್ರೇನ್‌ಗಳನ್ನು ವಶಪಡಿಸಿಕೊಂಡಿಲ್ಲ.

ಇದೀಗ ಬೀಳಿಸಲ್ಪಟ್ಟಿರುವ ಕಲ್ಲು ಕಂಬಗಳಿಗೆ ಸಂಬಂಧಿಸಿದಂತೆ ಗ್ರಾಮದ ಕೆಲವರ ವಿರುದ್ಧ ದೂರು ದಾಖಲಾಗಿದೆ. ಅನಗತ್ಯವಾಗಿ ಪೊಲೀಸರು ಅಮಾಯಕ ಗ್ರಾಮಸ್ಥರನ್ನು ಬಂಧಿಸುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ವಿವಾದಿತ ಸ್ಥಳದ ಕಲ್ಲನ್ನು ಅರಣ್ಯ ಇಲಾಖೆ ತಕ್ಷಣ ತನ್ನ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದ ಮನೋಜ್ ಕೃಷ್ಣಪ್ಪ ತಪ್ಪಿದ್ದಲ್ಲಿ ತೀವ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ಗ್ರಾಮಸ್ಥರಾದ ಕೆ.ಕೆ.ಪೂರ್ಣಯ್ಯ ಮಾತನಾಡಿ, ಶತಮಾನಗಳ ಹಿಂದಿನ ಘಟನೆಯನ್ನು ಆಧರಿಸಿ ಇಂದು ಕಂದಾಯ ದಾಖಲೆಯಲ್ಲಿ ಇಲ್ಲದ ಅಯ್ಯಂಗೇರಿಯ ಅರಣ್ಯ ಪ್ರದೇಶದಲ್ಲಿ ಸ್ಮಾರಕ ರಚನೆ ಸರಿಯಾದ ಕ್ರಮವಲ್ಲವೆಂದರು. ಸ್ಮಾರಕಕ್ಕೆ ವರ್ಷಕ್ಕೆ ಒಂದು ಬಾರಿ ಪೂಜೆ ಸಲ್ಲಿಸುವುದು ವಾಡಿಕೆ, ಆದರೆ ಇಲ್ಲಿ ತಿಂಗಳಿಗೆ ನಾಲ್ಕು ಬಾರಿ ಪೂಜೆ ನಡೆಸಲಾಗುತ್ತಿದೆ. ಪೂಜೆ ಹೆಸರಿನಲ್ಲಿ ಮೋಜು ಮಸ್ತಿ ನಡೆಯುತ್ತಿರುವುದಾಗಿ ಆರೋಪಿಸಿದರು

ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ಕೆ.ವಸಂತ್, ಅನೂಪ್, ಪೊನ್ನಪ್ಪ, ಲವ ಹಾಗೂ ಇಸ್ಮಾಯೀಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X