Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಯುಮಾಲಿನ್ಯ ಕುರಿತ ಡಬ್ಲೂಎಚ್‌ಒ ವರದಿ...

ವಾಯುಮಾಲಿನ್ಯ ಕುರಿತ ಡಬ್ಲೂಎಚ್‌ಒ ವರದಿ ದಾರಿ ತಪ್ಪಿಸುತ್ತಿದೆ: ಸರಕಾರ

ವಾರ್ತಾಭಾರತಿವಾರ್ತಾಭಾರತಿ18 May 2016 11:19 PM IST
share

 ಹೊಸದಿಲ್ಲಿ, ಮೇ 18: ವಿಶ್ವದ ಅತ್ಯಂತ ಮಲಿನ ಕೊಳಕು ನಗರಗಳ ಪಟ್ಟಿಯಲ್ಲಿ 30ಕ್ಕೂ ಅಧಿಕ ಭಾರತೀಯ ನಗರಗಳನ್ನು ಹೆಸರಿಸಿರುವ ವಾಯುಮಾಲಿನ್ಯ ಕುರಿತ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲೂಎಚ್‌ಒ)ಯ ವರದಿಯು ದಾರಿ ತಪ್ಪಿಸುವಂಥದ್ದಾಗಿದೆ ಮತ್ತು ಅಮೆರಿಕ ಹಾಗೂ ಯುರೋಪ್‌ಗಳಲ್ಲಿಯ ಪ್ರಮುಖ ನಗರಗಳಲ್ಲಿನ ವಾಯುಮಾಲಿನ್ಯ ದತ್ತಾಂಶಗಳನ್ನು ಭಾರತವು ಶೀಘ್ರವೇ ಬಿಡುಗಡೆಗೊಳಿಸಲಿದೆ ಎಂದು ಪರಿಸರ ಸಚಿವ ಪ್ರಕಾಶ ಜಾವಡೇಕರ್ ಅವರು ಬುಧವಾರ ಇಲ್ಲಿ ಹೇಳಿದರು.

     ವಾಯುವಿನ ಗುಣಮಟ್ಟ ವಿಶ್ಲೇಷಣೆ ವೇಳೆ ಸಲ್ಫರ್ ಡಯಾಕ್ಸೈಡ್, ನೈಟ್ರೋಜನ್ ಡಯಾಕ್ಸೈಡ್ ಮತ್ತು ಬೆಂಝೀನ್‌ನಂತಹ ವಿವಿಧ ಪ್ರಮುಖ ಮಾಲಿನ್ಯ ಕಾರಕಗಳನ್ನು ಡಬ್ಲೂಎಚ್‌ಒ ವರದಿಯು ಪರಿಗಣಿಸಿಲ್ಲ ಎಂದು ಹೇಳಿದ ಅವರು, ಪಾಶ್ಚಾತ್ಯ ರಾಷ್ಟ್ರಗಳು ತಮ್ಮ ಕೊಂಕುಗಳನ್ನು ನೋಡಿಕೊಳ್ಳುವುದನ್ನು ಬಿಟ್ಟು ಭಾರತ ಮತ್ತು ಇತರ ಕೆಲವು ರಾಷ್ಟ್ರಗಳ ಮೇಲೆಯೇ ಹೆಚ್ಚಿನ ಗಮನ ಹರಿಸುವುದು ಏಕೆ ಎಂದು ಅಚ್ಚರಿ ವ್ಯಕ್ತಪಡಿಸಿದರು.
2012-13ರ ದತ್ತಾಂಶಗಳನ್ನು ಆಧರಿಸಿರುವ ಡಬ್ಲೂಎಚ್‌ಒ ವರದಿಯನ್ನು ಪಿಎಂ 10 ಮತ್ತು ಪಿಎಂ 2.5 ಕಣಪದಾರ್ಥಗಳನ್ನು ಪರಿಗಣನೆಗೆ ತೆಗೆದುಕೊಂಡು ಸಿದ್ಧಪಡಿಸಲಾಗಿದೆ ಮತ್ತು ದಿಲ್ಲಿಗೆ ವಿಶ್ವದ 11ನೇ ಅತ್ಯಂತ ಕೊಳಕು ನಗರವೆಂಬ ಪಟ್ಟ ಕಟ್ಟಲಾಗಿದೆ. ಈ ವರದಿಯ ಬಗ್ಗೆ ಎಚ್ಚರಿಸಿರುವ ಪರಿಸರವಾದಿಗಳು ಅದು ಸರಿಯಾದ ಚಿತ್ರಣವನ್ನು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

  ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಓರೆನ್,ಬೆಂಝೀನ್,ಸಲ್ಫರ್ ಡಯಾಕ್ಸೈಡ್‌ಗಳಂತಹ ಇತರ ಎಂಟು ಪ್ರಮುಖ ಮಾಲಿನ್ಯಕಾರಕಗಳಿವೆ. ಆದ್ದರಿಂದ ಪಿಎಂ 2.5 ಒಂದನ್ನೇ ಆಧರಿಸಿ ನಗರಗಳನ್ನು ಮಾಲಿನ್ಯಪೂರಿತ ಎಂದು ವರ್ಗೀಕರಿಸುವುದು ದಾರಿ ತಪ್ಪಿಸುವಂಥದ್ದಾಗಿದೆ ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ ಜಾವಡೇಕರ್,ಅಮೆರಿಕ ಮತ್ತು ಯುರೋಪ್‌ಗಳಲ್ಲಿಯ ಪ್ರಮುಖ ನಗರಗಳ ವಾಯುಮಾಲಿನ್ಯ ದತ್ತಾಂಶಗಳನ್ನು ಸರಕಾರವು ಶೀಘ್ರವೇ ಬಿಡುಗಡೆಗೊಳಿಸಲಿದೆ. ಈ ದತ್ತಾಂಶಗಳನ್ನು ಪಡೆದುಕೊಳ್ಳುವುದು ಸಮಸ್ಯೆಯೇನಲ್ಲ. ಜನರಿಗೆ ಸಮಗ್ರ ಚಿತ್ರಣ ಗೊತ್ತಾಗಬೇಕು ಎಂದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X