Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಕೀರ್ಣ ಜೀವದ ಉಗಮ 150 ಕೋಟಿ ವರ್ಷಗಳ...

ಸಂಕೀರ್ಣ ಜೀವದ ಉಗಮ 150 ಕೋಟಿ ವರ್ಷಗಳ ಹಿಂದೆಯೇ ಆಗಿತ್ತು: ನೂತನ ಸಂಶೋಧನೆ

ವಾರ್ತಾಭಾರತಿವಾರ್ತಾಭಾರತಿ18 May 2016 11:51 PM IST
share

ಪ್ಯಾರಿಸ್, ಮೇ 18: ಭೂಮಿಯಲ್ಲಿ ಸಂಕೀರ್ಣ ಜೀವ 150 ಕೋಟಿ ವರ್ಷಗಳಿಗೂ ಹಿಂದೆ ಆರಂಭವಾಯಿತು ಎನ್ನುವುದನ್ನು ತೋರಿಸುವ ಪಳೆಯುಳಿಕೆಗಳನ್ನು ತಾವು ಪತ್ತೆಹಚ್ಚಿರುವುದಾಗಿ ಸಂಶೋಧಕರು ಹೇಳಿದ್ದಾರೆ. ಅವರ ಲೆಕ್ಕಾಚಾರ ಸರಿಯಾದರೆ, ಈಗ ಭಾವಿಸಿರುವುದಕ್ಕಿಂತಲೂ ಸುಮಾರು 100 ಕೋಟಿ ವರ್ಷಗಳ ಹಿಂದೆಯೇ ಭೂಮಿಯಲ್ಲಿ ಜೀವದ ಉಗಮವಾಗಿದೆ.
ಈ ಕುರಿತ ಪ್ರಬಂಧವೊಂದು ‘ನೇಚರ್ ಕಮ್ಯುನಿಕೇಶನ್ಸ್’ನಲ್ಲಿ ಪ್ರಕಟಗೊಂಡಿದೆ.
ಆದರೆ, ಇದು ಪ್ರಕಟಗೊಂಡ ಕೂಡಲೇ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಈ ಪಳೆಯುಳಿಕೆ ಬಂಡೆಗಲ್ಲಿನ ಒಂದು ತುಂಡು ಎಂಬುದಾಗಿ ಕೆಲವು ವಿಜ್ಞಾನಿಗಳು ಹೇಳಿದರೆ, ಈ ವಿವರಣೆಯಿಂದ ತಮಗೆ ಒಂದಿನಿತೂ ತೃಪ್ತಿಯಾಗಿಲ್ಲ ಎಂದು ಇತರರು ಹೇಳಿದ್ದಾರೆ.
 ಆರಂಭದಲ್ಲಿ ‘ಪ್ರೈಮೋರ್ಡಿಯಲ್ ಸೂಪ್’ (ಸಾವಯವ ಸಂಯುಕ್ತಗಳನ್ನು ಒಳಗೊಂಡ ಹಾಗೂ ಜೀವದ ಉಗಮ ಹಾಗೂ ಬೆಳವಣಿಗೆಗೆ ಪೂರಕ ಪರಿಸ್ಥಿತಿಗಳನ್ನು ಒಳಗೊಂಡ ದ್ರವ. ಭೂಮಿಯಲ್ಲಿ ಜೀವ ಇದರಿಂದಲೇ ಉಗಮಗೊಂಡಿದೆ ಎಂದು ಭಾವಿಸಲಾಗಿದೆ)ನಿಂದ ಉಗಮಗೊಂಡ ಬಳಿಕ ಜೀವ ನೂರಾರು ಕೋಟಿ ವರ್ಷಗಳವರೆಗೆ ಏಕಕೋಶವಾಗಿಯೇ ಉಳಿಯಿತು. ಆದರೆ, ಕೆಲವು ಕೋಶಗಳು ಬಳಿಕ ಸಂಗಮಗೊಂಡಿತು. ಈ ಅವಧಿಯನ್ನು ವಿಜ್ಞಾನಿಗಳು ‘ಜಡ ಬಿಲಿಯನ್’ ಎಂಬುದಾಗಿಯೂ ಕರೆದಿದ್ದಾರೆ. ಯಾಕೆಂದರೆ ಈ ಅವಧಿಯಲ್ಲಿ ವಿಕಾಸ ಸ್ಥಗಿತಗೊಂಡಂತೆ ಕಂಡುಬಂದಿತ್ತು. ಆದರೆ, ಒಂದು ಹಂತದಲ್ಲಿ ಒಂದು ಬೃಹತ್ ಬೆಳವಣಿಗೆಯೊಂದು ಕಂಡುಬಂತು. ಈ ಅವಧಿಯಲ್ಲಿ ಸಂಕೀರ್ಣ ಜೀವಕೋಶಗಳು ರೂಪುಗೊಂಡವು.
ಈ ಬೆಳವಣಿಗೆಯ ಕಾರಣದಿಂದಾಗಿಯೇ ಬಳಿಕ ಸಸ್ಯಗಳು ಹಾಗೂ ಪ್ರಾಣಿಗಳು ರೂಪುಗೊಂಡವು. ನ್ಯೂಕ್ಲಿಯಸ್ ಹೊಂದಿದ ಬಹು ಕೋಶಗಳ ಯೂಕರಯೋಟ್‌ಗಳು ಯಾವಾಗ ರೂಪುಗೊಂಡವು ಎಂಬ ಬಗ್ಗೆ ವಿಜ್ಞಾನಿಗಳ ನಡುವೆ ದಶಕಗಳಿಂದ ಬಿಸಿ ಬಿಸಿ ಚರ್ಚೆ ನಡೆಯುತ್ತಾ ಬಂದಿದೆ. ‘‘ಬಹುಕೋಶಗಳ ಯೂಕರಯೋಟ್‌ಗಳ ಉಗಮವನ್ನು ನಮ್ಮ ಸಂಶೋಧನೆ ಸುಮಾರು 100 ಕೋಟಿ ವರ್ಷಗಳಷ್ಟು ಹಿಂದಕ್ಕೆ ತಳ್ಳುತ್ತದೆ’’ ಎಂದು ನನ್‌ಜಿಂಗ್ ಇನ್‌ಸ್ಟಿಟ್ಯೂಟ್ ಆಫ್ ಜಿಯಾಲಜಿ ಆ್ಯಂಡ್ ಪ್ಯಾಲಿಓಂಟೋಲಜಿಯಲ್ಲಿ ಪ್ರೊಫೆಸರ್ ಆಗಿರುವ ಮವೊಯನ್ ಝೂ ಹೇಳುತ್ತಾರೆ. ಪಳೆಯುಳಿಕೆಗಳನ್ನು ಚೀನಾದ ಹಬೇಯ್ ಪ್ರಾಂತದ ಯನ್ಶನ್‌ನಲ್ಲಿ ಪತ್ತೆ ಹಚ್ಚಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X