Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ಕರೆ ನೆನಪಿಗೆ ಅವಮಾನ: ಮಾಜಿ ಪೊಲೀಸ್...

ಕರ್ಕರೆ ನೆನಪಿಗೆ ಅವಮಾನ: ಮಾಜಿ ಪೊಲೀಸ್ ಕಮಿಷನರ್ ಕಿಡಿ

ಮಾಲೆಗಾಂವ್ ಸ್ಫೋಟ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ18 May 2016 11:55 PM IST
share
ಕರ್ಕರೆ ನೆನಪಿಗೆ ಅವಮಾನ: ಮಾಜಿ ಪೊಲೀಸ್ ಕಮಿಷನರ್ ಕಿಡಿ

ಮುಂಬೈ, ಮೇ 18: ಮಾಲೆಗಾಂವ್‌ನಲ್ಲಿ 2008ರಲ್ಲಿ ನಡೆದ ಬಾಂಬ್‌ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಠಾಕೂರ್ ಹಾಗೂ ಇತರರ ವಿರುದ್ಧದ ಆರೋಪವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕೈಬಿಡಲು ನಿರ್ಧರಿಸಿದ ಬಳಿಕ, ಈ ಪ್ರಕರಣದ ತನಿಖೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದ ಹೇಮಂತ್ ಕರ್ಕರೆ ಅವರು ನಿರ್ವಹಿಸಿದ ಪಾತ್ರದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿರುವುದು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೆರಳಿಸಿದೆ.

ಹೇಮಂತ್ ಕರ್ಕರೆ ನವೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿ ವೇಳೆ ಮೃತಪಟ್ಟಿದ್ದರು. ಇದೀಗ ಠಾಕೂರ್ ಹಾಗೂ ಇತರರ ವಿರುದ್ಧದ ಆರೋಪವನ್ನು ಕೈಬಿಡಲು ನಿರ್ಧರಿಸಿರುವುದು ಅವರ ಸ್ಮರಣೆಗೆ ಮಾಡುವ ಅವಮಾನ ಎಂದು ಮುಂಬೈನ ನಿವೃತ್ತ ಪೊಲೀಸ್ ಕಮಿಷನರ್ ಜ್ಯೂಲಿಯೊ ರಿಬೆರಿಯೊ ಕಿಡಿ ಕಾರಿದ್ದಾರೆ.

ಎನ್‌ಡಿಟಿವಿಯ ‘ವಾಕ್ ದ ಟಾಕ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ಕರೆ ಅವರು ಪ್ರಜ್ಞಾ ಠಾಕೂರ್ ಹಾಗೂ ಕರ್ನಲ್ ಶ್ರೀಕಾಂತ್ ಪುರೋಹಿತ್ ವಿರುದ್ಧ ಕೆಲ ಪುರಾವೆಗಳನ್ನು ಹುಟ್ಟುಹಾಕಿದ್ದಾರೆ ಹಾಗೂ ಸುಳ್ಳು ವರದಿ ನೀಡಿದ್ದಾರೆ ಎಂದು ಕೆಲವರು ಆರೋಪಿಸುತ್ತಿರುವುದು ಖಂಡನೀಯ ಎಂದು ಹೇಳಿದರು.

ಏಕೆಂದರೆ ತಮ್ಮನ್ನು ಸಮರ್ಥಿಸಿಕೊಳ್ಳಲು ಇಂದು ಕರ್ಕರೆ ಇಲ್ಲ. ಅವರನ್ನು ನಾವು ಸಮರ್ಥಿಸುತ್ತೇವೆ ಎಂದು ಪಂಜಾಬ್ ಹಾಗೂ ಗುಜರಾತ್‌ನಲ್ಲೂ ದಶಕಗಳ ಕಾಲ ಸೇವೆ ಸಲ್ಲಿಸಿದ ಅವರು ಭಾವುಕರಾಗಿ ನುಡಿದರು.

ಕರ್ಕರೆ ವಿರುದ್ಧದ ಆರೋಪ ಮುಂಬೈ ಪೊಲೀಸರನ್ನು ಕಂಗೆಡಿಸಿದೆ. ಅವರು ಕರ್ಕರೆ ಅವರನ್ನು ಚೆನ್ನಾಗಿ ತಿಳಿದುಕೊಂಡಿದ್ದಾರೆ. ಅವರು ಮೃತಪಟ್ಟ ಬಳಿಕ ಕೂಡಾ ಈ ಎಲ್ಲರೂ ಕರ್ಕರೆ ಜತೆ ಭಾವನಾತ್ಮಕವಾಗಿ ಇದ್ದಾರೆ ಎಂದು ಬಣ್ಣಿಸಿದರು.

ಮಾಲೆಗಾಂವ್ ಸ್ಫೋಟದ ತನಿಖೆ ನಡೆಸಿದ್ದ ಕರ್ಕರೆ ನವೆಂಬರ್ 26ರ ಭಯೋತ್ಪಾದಕ ದಾಳಿಯಲ್ಲಿ ಹತರಾಗಿದ್ದರು. ಮಹಾರಾಷ್ಟ್ರ ಭಯೋತ್ಪಾದಕ ವಿರೋಧಿ ಪಡೆಯ ಮುಖ್ಯಸ್ಥರಾಗಿದ್ದ ಕರ್ಕರೆ, ಮೊಟ್ಟಮೊದಲ ಬಾರಿಗೆ 2008ರ ಸೆಪ್ಟಂಬರ್ 29ರಂದು ನಡೆದ ಸ್ಫೋಟದ ಬಗ್ಗೆ ತನಿಖೆ ಕೈಗೊಂಡರು. ಈ ಘಟನೆಯಲ್ಲಿ ಆರು ಮಂದಿ ಮೃತಪಟ್ಟು, 101 ಮಂದಿ ಗಾಯಗೊಂಡಿದ್ದರು.


ಹಿಂದೂ ಪರ ಸಂಘಟನೆ ಅಭಿನವ್ ಭಾರತ್ ಜತೆ ಕೈಜೋಡಿಸಿದ್ಧ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್, ಸಾಧ್ವಿ ಪ್ರಜ್ಞಾ ಹಾಗೂ ಇತರರನ್ನು ಈ ಘಟನೆ ಸಂಬಂಧ ಬಂಧಿಸಲಾಗಿತ್ತು.

ಕರ್ಕರೆ ಅವರು ಸಾಧ್ವಿ ಪ್ರಜ್ಞಾ ಹಾಗೂ ಕರ್ನಲ್ ಶ್ರೀಕಾಂತ್ ಪುರೋಹಿತ್ ವಿರುದ್ಧ ಕೆಲ ಪುರಾವೆಗಳನ್ನುಹುಟ್ಟುಹಾಕಿದ್ದಾರೆ ಹಾಗೂ ಸುಳ್ಳು ವರದಿ ನೀಡಿದ್ದಾರೆ ಎಂದು ಕೆಲವರು ಆರೋಪಿಸುತ್ತಿ ರುವುದು ಖಂಡನೀಯ. ಏಕೆಂದರೆ ತಮ್ಮನ್ನು ಸಮರ್ಥಿಸಿಕೊಳ್ಳಲು ಇಂದು ಕರ್ಕರೆ ಇಲ್ಲ. ಅವರನ್ನು ನಾವು ಸಮರ್ಥಿಸುತ್ತೇವೆ.
- ಜ್ಯೂಲಿಯೊ ರಿಬೆರಿಯೊ, ಮುಂಬೈನ ನಿವೃತ್ತ ಪೊಲೀಸ್ ಕಮಿಷನರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X