ರಸ್ತೆ ದುರಸ್ತಿಗೆ ಆಗ್ರಹಿಸಿ ಎಸ್ಡಿಪಿಐ ಧರಣಿ
ಪುತ್ತೂರು, ಮೇ 18: ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ತಾರಿಪಡ್ಪು- ಚೆನ್ನಾವರ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಎಸ್ಡಿಪಿಐ ಪಾಲ್ತಾಡಿ ಗ್ರಾಮ ಸಮಿತಿ ವತಿಯಿಂದ ಬುಧವಾರ ಧರಣಿ ನಡೆಸಲಾಯಿತು. ತಾರಿಪಡ್ಪುವಿನಿಂದ ಚೆನ್ನಾವರ ಪ್ರದೇಶಕ್ಕೆ ತೆರಳುವ ರಸ್ತೆಯನ್ನು ಡಾಂಬರೀಕರಣಗೊಳಿಸುವ ಉದ್ದೇಶದಿಂದ ಕಳೆದ ಹಲವು ವರ್ಷಗಳ ಹಿಂದೆ ಗುದ್ದಲಿ ಪೂಜೆಯನ್ನು ಮಾಡಲಾಗಿತ್ತು. ಸಂಸದರ ಅನುದಾನದಲ್ಲಿ ಈ ಕಾಮಗಾರಿ ನಡೆಸುತ್ತಿರುವುದಾಗಿ ಇಲಾಖೆಯ ಅಕಾರಿಗಳು ತಿಳಿಸಿದ್ದರು, ರಸ್ತೆ ಡಾಂಬರೀಕರಣಕ್ಕಾಗಿ ಜಲ್ಲಿಯನ್ನು ತಂದು ರಾಶಿ ಹಾಕಲಾಗಿದೆ. ಆದರೆ ಆ ಬಳಿಕ ಇಲ್ಲಿ ಕಾಮಗಾರಿ ನಡೆದಿಲ್ಲ ಎಂದು ಪ್ರತಿಭಟನಾ ನೇತೃತ್ವ ವಹಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಅಧ್ಯಕ್ಷ ಎಂ. ಎ. ರಫೀಕ್ ಆರೋಪಿಸಿದರು.
ಜಿಪಂ ಇಂಜಿನಿಯರ್ ಗೋವರ್ಧನ್ ಅವರು ಮನವಿಯನ್ನು ಸ್ವೀಕರಿಸಿ ವಿಚಾರವನ್ನು ಮೇಲಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ಮನವಿಗೆ ಸ್ಪಂದಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಎಚ್ಚರಿಸಿದರು.