Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೋಣಿ ನೋಂದಣಿ ಸಂಖ್ಯೆ ಆಧಾರ್ ಕಾರ್ಡ್‌ಗೆ...

ದೋಣಿ ನೋಂದಣಿ ಸಂಖ್ಯೆ ಆಧಾರ್ ಕಾರ್ಡ್‌ಗೆ ಜೋಡಣೆ

ವಾರ್ತಾಭಾರತಿವಾರ್ತಾಭಾರತಿ19 May 2016 10:38 PM IST
share
ದೋಣಿ ನೋಂದಣಿ ಸಂಖ್ಯೆ ಆಧಾರ್ ಕಾರ್ಡ್‌ಗೆ ಜೋಡಣೆ

ಕಾರವಾರ, ಮೇ 19: ಮೀನುಗಾರರಿಗೆ ಸರಕಾರದಿಂದ ಬಿಡುಗಡೆಯಾಗುವ ಸವಲತ್ತುಗಳನ್ನು ಸಮರ್ಪಕವಾಗಿ ಪೂರೈಕೆ ಮಾಡುವ ಉದ್ದೇಶದಿಂದ ಮೀನುಗಾರಿಕಾ ಇಲಾಖೆಯು ಸ್ಮಾರ್ಟ್‌ಕಾರ್ಡ್ ಹಾಗೂ ದೋಣಿ ನೋಂದಣಿ ಸಂಖ್ಯೆಯನ್ನು ಆಧಾರ್‌ನೊಂದಿಗೆ ಜೋಡಿಸಲು ಮುಂದಾಗಿದ್ದು, ಇದರಿಂದ ದುರುಪಯೋಗವಾಗುತ್ತಿದ್ದ ಹಲವು ಯೋಜನೆಗಳಿಗೆ ತಡೆ ಬೀಳಲಿದೆ.

ಮತ್ಸ ಕ್ಷಾಮದಿಂದ ಕಂಗಾಲಾಗಿರುವ ಮೀನುಗಾರರ ಜೀವನೋಪಾಯಕ್ಕಾಗಿ ಹಾಗೂ ಮೀನು ಸಂತತಿಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ಆದರೆ ಇದು ಸಮರ್ಪಕವಾಗಿ ಮೀನುಗಾರರನ್ನು ತಲುಪುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಯೋಜನೆಗಳ ಮಾಹಿತಿ ಹಾಗೂ ಸೌಲಭ್ಯಗಳು ನೇರವಾಗಿ ಮೀನುಗಾರರ ಕೈ ಸೇರಲು ಈ ಕ್ರಮ ಕೈಗೊಂಡಿದೆ. ಮೀನುಗಾರಿಕೆ ಉತ್ತೇಜನಕ್ಕಾಗಿ ಸರಕಾರ ಹಲವು ಸವಲತ್ತುಗಳನ್ನು ಒದಗಿಸುತ್ತಿದೆ. ಯಾಂತ್ರೀಕೃತ ದೋಣಿಗಳಿಗೆ ಡೀಸೆಲ್ ಸಬ್ಸಿಡಿ, ಸಾಂಪ್ರದಾಯಿಕ ದೋಣಿಗೆ ಇಂಜಿನ್ ಅಳವಡಿಕೆಗೆ ಸಹಾಯಧನ, ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಜೀವನೋಪಾಯ ಪರಿಹಾರ, ಸಬ್ಸಿಡಿ ದರದಲ್ಲಿ ಸೀಮೆಎಣ್ಣೆ ವಿತರಣೆ ಹೀಗೆ ಹತ್ತಾರು ಸೌಲಭ್ಯಗಳು ಮೀನುಗಾರರಿಗೆ ಸಿಗುತ್ತಿವೆ. ಇವುಗಳಲ್ಲಿನ ದುರುಪಯೋಗ ಹಾಗೂ ಅಕ್ರಮ ತಡೆಗೆ ಆಧಾರ್ ಜೋಡಣೆ ನೆರವಾಗಲಿದೆ ಎನ್ನುತ್ತಾರೆ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಎಂ.ಎಲ್.ದೊಡ್ಮನಿ.

                  

ದೇಶದ ಆಂತರಿಕ ಭದ್ರತೆಯ ದೃಷ್ಟಿಯಿಂದ ಮೀನುಗಾರಿಕೆ ದೋಣಿಗಳಿಗೆ ಕಲರ್ ಕೋಡಿಂಗ್ ಅಳವಡಿಸುವುದು ಹಾಗೂ ಮೀನುಗಾರರು ಬಯೋಮೆಟ್ರಿಕ್ ಕಾರ್ಡ್ ಹೊಂದಿರುವುದು ಕೇಂದ್ರ ಗೃಹ ಇಲಾಖೆಯು ಕಡ್ಡಾಯಗೊಳಿಸಿದೆ. ಮರದ ದೋಣಿಗಳ ತಳಭಾಗ (ಹಲ್) ಬಿಳಿ, ಸ್ಟೀಲ್ ದೋಣಿಯಾದರೆ ತಿಳಿಕೆಂಪು (ರೆಡ್ ಆಕ್ಸೈಡ್), ಫೆಂಡರ್ ಭಾಗ ಕಪ್ಪು ಹಾಗೂ ಕ್ಯಾಬಿನ್ ಭಾಗದ ಕೆಳ ಅರ್ಧ ನೀಲಿ ಮತ್ತು ಮೇಲಿನ ಅರ್ಧ ಬಿಳಿ ಬಣ್ಣದಿಂದ ಕೂಡಿರಬೇಕು. ಕಲರ್ ಕೋಡಿಂಗ್ ಅಳವಡಿಸಲು ಜುಲೈ 30ರವರೆಗೆ ಗಡುವು ನೀಡಲಾಗಿದೆ. ಈ ನಿಯಮ ಪಾಲಿಸದ ದೋಣಿಗಳಿಗೆ ಆಗಸ್ಟ್ ತಿಂಗಳಿಂದ ಡೀಸೆಲ್ ವಿತರಣೆಯನ್ನು ಸ್ಥಗಿತಗೊಳಿಸುವ ಬಗ್ಗೆ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೆ, 20 ಮೀಟರ್‌ಗಿಂತ ಹೆಚ್ಚಿನ ಉದ್ದದ ಎಲ್ಲ ದೋಣಿಗಳು ಇನ್ನು ಮುಂದೆ ಕಡ್ಡಾಯವಾಗಿ ‘ಟ್ರಾನ್ಸ್ ಫಂಡರ್ಸ್’ ಸಲಕರಣೆ ಅಳವಡಿಸಬೇಕು. ಇದು ಟ್ರಾನ್ಸ್ಮಿಟ್ ರೀತಿ ಕಾರ್ಯನಿರ್ವಹಿಸಲಿದ್ದು, ಕಡಲಿನಲ್ಲಿ ಅಪಾಯಕ್ಕೆ ಸಿಲುಕುವ ದೋಣಿಗಳನ್ನು ಸುಲಭವಾಗಿ ತಿಳಿಯಬಹುದು ಎಂದು ಅವರು ಮಾಹಿತಿ ನೀಡಿದರು. ಮೀನುಗಾರರ ಸ್ಮಾರ್ಟ್ ಕಾರ್ಡ್ ಹಾಗೂ ದೋಣಿ ನೋಂದಣಿ ಸಂಖ್ಯೆಯನ್ನು ಆಧಾರ್‌ಗೆ ಜೋಡಿಸುವ ಪ್ರಕ್ರಿಯೆ ಶೀಘ್ರದಲ್ಲಿಯೇ ಆರಂಭಿಸಲಾಗುವುದು. ಮೀನುಗಾರರು ಬಯೋಮೆಟ್ರಿಕ್ ಕಾರ್ಡ್ ಅನ್ನು ಲ್ಯಾಮಿನೇಟ್ ಮಾಡುತ್ತಿರುವುದರಿಂದ ಅಥವಾ ನಕಲು ಪ್ರತಿಯನ್ನು ಕೊಂಡೊಯ್ಯುವುದರಿಂದ ಭದ್ರತಾ ಪಡೆಗಳಿಗೆ ತಪಾಸಣೆ ಸಮಯದಲ್ಲಿ ಕಾರ್ಡ್ ರೀಡರ್‌ಗಳಿಗೆ ಓದಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮೀನುಗಾರಿಕೆಗೆ ತೆರಳುವಾಗ ಎಲ್ಲ ಮೀನುಗಾರರು ಮೂಲ ಬಯೋಮೆಟ್ರಿಕ್ ಕಾರ್ಡ್ ಕೊಂಡೊಯ್ಯಬೇಕು. -ಎಂ.ಎಲ್. ದೊಡ್ಮನಿ, ಉಪನಿರ್ದೇಶಕರು, ಮೀನುಗಾರಿಕಾ ಇಲಾಖೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X