Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲೆ ಬಿಟ್ಟು 8 ವರ್ಷದ ಬಳಿಕ ಎಸೆಸೆಲ್ಸಿ...

ಶಾಲೆ ಬಿಟ್ಟು 8 ವರ್ಷದ ಬಳಿಕ ಎಸೆಸೆಲ್ಸಿ ಪಾಸಾದ ಯುವಕ

ವಾರ್ತಾಭಾರತಿವಾರ್ತಾಭಾರತಿ20 May 2016 4:41 PM IST
share
ಶಾಲೆ ಬಿಟ್ಟು 8 ವರ್ಷದ ಬಳಿಕ ಎಸೆಸೆಲ್ಸಿ ಪಾಸಾದ ಯುವಕ

ಸುಳ್ಯ, ಮೇ 20: ಆತ ಕಲಿತದ್ದು 6ನೇ ತರಗತಿಯವರೆಗೆ ಮಾತ್ರ. ಸಣ್ಣ ಪ್ರಾಯದಲ್ಲೇ ಅಪ್ಪಮನೆ ಬಿಟ್ಟು ಹೋದ ಬಳಿಕ 6ನೆ ತರಗತಿಯಲ್ಲಿ ಓದು ನಿಲ್ಲಿಸಿದ ಆತ ಆರಿಸಿಕೊಂಡದ್ದು ಕಲ್ಲು ಹೊರುವ ಕೂಲಿ ಕೆಲಸ. ಆದರೆ 8 ವರ್ಷಗಳ ಬಳಿಕ ಕಲಿಕೆಯಲ್ಲಿ ಆಸಕ್ತಿ ತೋರಿದ ಆತ ಎಸೆಸೆಲ್ಸಿಯನ್ನು ಒಂದೇ ಪ್ರಯತ್ನದಲ್ಲಿ ಪಾಸ್ ಮಾಡಿದ್ದಾನೆ.

ಕಲ್ಮಡ್ಕ ನಿವಾಸಿ ಬಾಬು ಮತ್ತು ಲಕ್ಷ್ಮೀ ದಂಪತಿಯ ಪುತ್ರ ಈಶ್ವರ ಕಲ್ಮಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೆ ತರಗತಿ ಉತ್ತೀರ್ಣಗೊಂಡು 7ನೆ ತರಗತಿಗೆ ತೇರ್ಗಡೆ ಹೊಂದಿದ್ದ. ಆದರೆ ಕಾರ್ಮಿಕ ಕುಟುಂಬವಾದ ತನ್ನ ಮನೆಯಲ್ಲಿ ಎಳೆಯ ಪ್ರಾಯದಲ್ಲೇ ಅಪ್ಪ ಮನೆ ಬಿಟ್ಟು ಹೋದ ಕಾರಣ ಅಮ್ಮನ ಆರೈಕೆಯಲ್ಲಿ ಬೆಳೆದ ಈತ 7 ತರಗತಿಯಲ್ಲಿ ಶಾಲೆಯ ಆಸಕ್ತಿಯನ್ನು ಕಳೆದುಕೊಂಡು ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ.

8 ವರ್ಷದ ಬಳಿಕ ಮತ್ತೆ ಓದಿನಲ್ಲಿ ಆಸಕ್ತಿ ತೋರಿದ ಈಶ್ವರ ಕೂಲಿ ಮಾಡಿ ದುಡಿದ ಹಣದಲ್ಲೇ ಎಸೆಸೆಲ್ಸಿ ಪಾಸ್ ಮಾಡುವುದಕ್ಕಾಗಿ ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯಲ್ಲಿ ಸೇರಿ ಖಾಸಗಿಯಾಗಿಯಾಗಿ ಪರೀಕ್ಷೆ ಬರೆಯಲು ತರಗತಿಗಳನ್ನು ಪಡೆದಿದ್ದ. ಈ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಈತ ಪ್ರಥಮ ಪ್ರಯತ್ನದಲ್ಲೇ ತೃತೀಯ ದರ್ಜೆಯಲ್ಲಿ ಉತ್ತೀರ್ಣನಾಗಿದ್ದಾನೆ.

ದೇಶ ಸೇವೆ ಮಾಡುವಾಸೆ

ಸಣ್ಣ ಪ್ರಾಯದಲ್ಲೇ ಅಪ್ಪ ಮನೆ ಬಿಟ್ಟು ಹೋದ ಬಳಿಕ ಈಶ್ವರ ಮತ್ತು ಆತನ ತಾಯಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವಾಸಿಸಲು ಸಣ್ಣ ಮನೆಯೊಂದನ್ನು ಬಿಟ್ಟರೆ ಇವರಿಗೆ ಬೇರಾವುದೇ ಆದಾಯದ ಮೂಲವಿಲ್ಲ. ಈಶ್ವರನ ತಮ್ಮನೂ 7ನೆ ತರಗತಿಯವರೆಗೆ ಓದಿದ್ದು ಮನೆಯಲ್ಲೇ ಇದ್ದಾನೆ. ಆದರೂ 8 ವರ್ಷದ ಬಳಿಕ ಓದಿನಲ್ಲಿ ಆಸಕ್ತಿ ತೋರಿದ ಈತ ಇನ್ನು ಪಿಯುಸಿ ಮಾಡಿ ಸೈನಿಕನಾಗುವ ಆಸಕ್ತಿ ಹೊಂದಿದ್ದಾನೆ. ಎಸೆಸೆಲ್ಸಿ ಪಾಸ್ ಮಾಡಿದ ಖುಷಿಯಲ್ಲಿರುವ ಈತನಿಗೆ ಪಿಯುಸಿ ವಿದ್ಯಾಭ್ಯಾಸ ಮಾಡುವ ಹಂಬಲವಿದ್ದರೂ ಕೂಲಿ ಕೆಲಸ ಮಾಡಿ ಜೀವನ ಸಾಗಿಸಬೇಕಾದ್ದರಿಂದ ಅಗತ್ಯ ನೆರವಿನ ಸಹಕಾರವೂ ಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X