Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಸಿಲ ಬೇಗೆಗೆ ಕುದಿಯುತ್ತಿದೆಉತ್ತರ-ಮಧ್ಯ...

ಬಿಸಿಲ ಬೇಗೆಗೆ ಕುದಿಯುತ್ತಿದೆಉತ್ತರ-ಮಧ್ಯ ಭಾರತ

ವಾರ್ತಾಭಾರತಿವಾರ್ತಾಭಾರತಿ20 May 2016 11:55 PM IST
share

ಹೊಸದಿಲ್ಲಿ, ಮೇ 20: ದೇಶಾದ್ಯಂತ ಹಲವು ರಾಜ್ಯಗಳು ಬಿಸಿಲ ಬೇಗೆಯಿಂದ ಕುದಿಯುತ್ತಿವೆ. ತಾಪಮಾನವು ದಾಖಲೆ ಎತ್ತರಕ್ಕೆ ತಲುಪಿದೆ. ಇದು ತಕ್ಷಣಕ್ಕೆ ಪರಿಹಾರವಾಗುವ ಲಕ್ಷಣ ಕಾಣಿಸುತ್ತಿಲ್ಲ. ಏರುತ್ತಿರುವ ಉಷ್ಣತೆಯ ಉತ್ತರ ಹಾಗೂ ಮಧ್ಯ ಭಾರತದ ಹಲವು ಭಾಗಗಳಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ.

ರಾಜಸ್ಥಾನದ ಜೋಧ್‌ಪುರದ ಫಲೋಡಿಯಲ್ಲಿ ಗುರುವಾರ ತಾಪಮಾನ 51 ಡಿಗ್ರಿ ಸೆಂಟಿಗ್ರೇಡ್‌ಗೇರಿತ್ತು. 1956ರ ಬಳಿಕ ದೇಶದಲ್ಲೇ ಇದು ದಾಖಲೆಯ ಗರಿಷ್ಠ ಉಷ್ಣತೆಯಾಗಿದೆ.
ಚುರುವಿನಲ್ಲಿ 52.2, ಬಿಕಾನೇಕ ಹಾಗೂ ಬಾರ್ಮೇರ್‌ಗಳಲ್ಲಿ 49.5, ಗಂಗಾ ನಗರದಲ್ಲಿ 49.1, ಜೈಸಲ್ಮೇರ್‌ನಲ್ಲಿ 49, ಕೊಟಾದಲ್ಲಿ 48.2 ಹಾಗೂ ಜೈಪುರದಲ್ಲಿ 46.5 ಡಿಗ್ರಿ ಸೆಲಿಶಿಯಸ್ ಉಷ್ಣಾಂಶ ದಾಖಲಾಗಿದೆ.
ಅಹ್ಮದಾಬಾದ್‌ನಲ್ಲಿ ಭಾರೀ ತಾಪಮಾನವು 100 ವರ್ಷಗಳ ದಾಖಲೆಯನ್ನು ಮುರಿದಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 48 ಡಿಗ್ರಿ ಸೆಂಟಿಗ್ರೇಡ್‌ಗೆ ತಲುಪಿದೆ.
ಉತ್ತರಪ್ರದೇಶವು ಒಣಹವೆ ಹಾಗೂ ತೀವ್ರ ಉಷ್ಣ ಮಾರುತದಿಂದಾಗಿ ಕಾದ ಕಾವಲಿಯಂತಾಗಿದೆ. ರಾಜ್ಯದಲ್ಲಿ ಬಂಡಾ, ಗರಿಷ್ಠ 47.2 ಡಿಗ್ರಿ ಸೆಂಟಿಗ್ರೇಡ್ ಉಷ್ಣಾಂಶ ದಾಖಲಿಸುವುದರೊಂದಿಗೆ ಸತತ ಮೂರನೆ ದಿನವೂ ಅತ್ಯಂತ ಬಿಸಿಯಾದ ಸ್ಥಳವೆನಿಸಿದೆ. ಅಲಹಾಬಾದ್‌ನಲ್ಲಿ 46.7, ಝಾನ್ಸಿಯಲ್ಲಿ 46.4 ಹಾಗೂ ಒರಾಯಿಯಲ್ಲಿ 46 ಡಿಗ್ರಿ ಸೆಲಿಶಿಯಸ್ ಉಷ್ಣತೆ ದಾಖಲಾಗಿದೆ.
ಗುರುವಾರ 44.4 ಡಿಗ್ರಿ ಸೆಲಿಶಿಯಸ್ ಉಷ್ಣತೆ ದಾಖಲಾಗಿದ್ದ ಲಕ್ನೊದಲ್ಲಿ ಮೇ 23ರಿಂದ ಬೇಸಗೆಯ ರಜೆಯನ್ನು ಘೋಷಿಸುವಂತೆ ಶಾಲೆಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ದಿಲ್ಲಿಯ ನಿವಾಸಿಗಳೂ ಸೆಕೆಯಿಂದ ಬಳಲುತ್ತಿದ್ದಾರೆ. ಆಗಾಗ ವಿದ್ಯುತ್ ವೈಫಲ್ಯವು ಇದಕ್ಕೆ ಇನ್ನಷ್ಟು ಇಂಧನ ಸುರಿಯುತ್ತಿದೆ.
ಗುರುವಾರ ದಿಲ್ಲಿಯಲ್ಲಿ ವಿದ್ಯುತ್ ಬೇಡಿಕೆಯು ಮೊದಲ ಬಾರಿಗೆ 6 ಸಾವಿರ ಮೆ.ವಾ.ಗಿಂತಲೂ ಅಧಿಕವಾಗಿ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದಿದೆ.
ಹರ್ಯಾಣ ಹಾಗೂ ಪಂಜಾಬ್‌ಗಳೂ ಉಷ್ಣ ಮಾರುತದ ಸುಳಿಯಲ್ಲಿ ಸಿಲುಕಿವೆ. ಈ ಎರಡು ರಾಜ್ಯಗಳಲ್ಲಿ ಗುರುವಾರ ಹಂಗಾಮಿನಲ್ಲೇ ಅತ್ಯಂತ ಉಷ್ಣತೆಯ ದಿನವಾಗಿತ್ತು.
ಹರ್ಯಾಣದ ಹಿಸಾರ್‌ನಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 5 ಡಿಗ್ರಿ ಹೆಚ್ಚಾಗಿ 46.8 ಡಿಗ್ರಿ ಸೆಂಟಿಗ್ರೇಡ್‌ಗೆ ತಲುಪಿತ್ತು.
ಗುಜರಾತ್, ಪೂರ್ವ ಹಾಗೂ ಪಶ್ಚಿಮ ರಾಜಸ್ಥಾನ, ಪಶ್ಚಿಮ ಹಾಗೂ ಪೂರ್ವ ಉತ್ತರಪ್ರದೇಶ ವಿದರ್ಭ. ಪಶ್ಚಿಮ ಹಾಗೂ ಪೂರ್ವ ಮಧ್ಯಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಉಷ್ಣ ಮಾರುತ ಬೀಸಲಿದೆಯೆಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಮುನ್ನೆಚ್ಚರಿಕೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X