Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿಸಿ ಮನ್ನಾ ಭೂಮಿ ಒತ್ತುವರಿ ವಿರುದ್ಧ...

ಡಿಸಿ ಮನ್ನಾ ಭೂಮಿ ಒತ್ತುವರಿ ವಿರುದ್ಧ ಕ್ರಮ: ತಹಶೀಲ್ದಾರ್

ವಾರ್ತಾಭಾರತಿವಾರ್ತಾಭಾರತಿ20 May 2016 11:56 PM IST
share
ಡಿಸಿ ಮನ್ನಾ ಭೂಮಿ ಒತ್ತುವರಿ ವಿರುದ್ಧ ಕ್ರಮ: ತಹಶೀಲ್ದಾರ್

ಉಡುಪಿ, ಮೇ 20: ಒತ್ತುವರಿ ಮಾಡಲಾಗಿರುವ ಡಿಸಿ ಮನ್ನಾ ಭೂಮಿ ಯನ್ನು ವಶಪಡಿಸಿಕೊಳ್ಳಲು ತ್ವರಿತಗತಿಯಲ್ಲಿ ಕ್ರಮ ಜರಗಿಸಲಾಗುವುದು. ಈ ಸಂಬಂಧ ನೋಟಿಸ್ ಜಾರಿ ಮಾಡಲಾಗುವುದು. ಆಯಾ ಗ್ರಾಪಂಗಳಲ್ಲಿ ಒತ್ತುವರಿ ಮಾಡಿರುವ ಭೂಮಿಗಳ ಕುರಿತು ವರದಿ ಸಲ್ಲಿಸುವಂತೆ ಪಿಡಿಒ ಹಾಗೂ ಕಾರ್ಯದರ್ಶಿಗಳಿಗೆ ಸೂಚಿಸಲಾಗುವುದು ಎಂದು ಉಡುಪಿ ತಹಶೀಲ್ದಾರ್ ಗುರುಪ್ರಸಾದ್ ತಿಳಿಸಿದ್ದಾರೆ.

ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ನಡೆದ ಉಡುಪಿ ತಾಲೂಕು ದಲಿತರ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ತಾಲೂಕಿನ ಎಂಟು ಗ್ರಾಮಗಳಲ್ಲಿ ಡಿಸಿ ಮನ್ನಾ ಭೂಮಿ ಖಾಲಿ ಉಳಿದಿದ್ದು, ಇದನ್ನು ನಿವೇಶನವನ್ನಾಗಿಸಿ ತಲಾ ಐದು ಸೆಂಟ್ಸ್ ಜಾಗವನ್ನು ಎಸ್ಸಿ/ಎಸ್ಟಿ ಸಮುದಾಯದವರಿಗೆ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಾವಂಜೆ ಗ್ರಾಪಂನಲ್ಲಿ 6 ಎಕರೆ ಜಾಗವನ್ನು ಈಗಾಗಲೇ ನಿವೇಶನವನ್ನಾಗಿ ಮಾಡಲಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಹಂಚಲು ಕ್ರಮ ತೆಗೆದು ಕೊಳ್ಳಲಾಗುವುದು ಎಂದರು.

ತೆಂಕನಿಡಿಯೂರಿನಲ್ಲಿರುವ ಆರು ಎಕರೆ ಡಿಸಿ ಮನ್ನಾ ಭೂಮಿಯನ್ನು ಮಾರಾಟ ಮಾಡಲಾಗಿದ್ದು, ಇದರ ವಿರುದ್ಧ ಕ್ರಮ ಜರಗಿಸುವಂತೆ ದಲಿತ ಮುಖಂಡ ರಮೇಶ್ ಕೋಟ್ಯಾನ್ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್, ಡಿಸಿ ಮನ್ನಾ ಭೂಮಿಯನ್ನು ಪರಭಾರೆ ಮಾಡಲು ಕಾನೂನಿನಲ್ಲಿ ಯಾರಿಗೂ ಅವಕಾಶ ಇಲ್ಲ. ಪರಭಾರೆ ಮಾಡಿದ್ದರೂ ಅದನ್ನು ವಾಪಸ್ ಸರಕಾರ ವಶಕ್ಕೆ ತೆಗೆದುಕೊಳ್ಳಲು ಅವಕಾಶ ಇದೆ. ಈ ಭೂಮಿಯನ್ನು ಮಾರಾಟ ಮಾಡಿ ನೋಂದಾವಣೆ ಮಾಡಿರುವ ಕುರಿತು ಹಿರಿಯ ನೋಂದಾವಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಈ ವಿವಾದಾಸ್ಪದ ಪ್ರಕರಣವು ಇದೀಗ ತಹಶೀಲ್ದಾರ್ ಕೋರ್ಟ್‌ನಲ್ಲಿದೆ. ಈ ಭೂಮಿಯನ್ನು ಉಳಿಸಿಕೊಳ್ಳಲು ಅಗತ್ಯ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಡುಪಿ ತಾಪಂ ಇಒ ಶೇಷಪ್ಪ, ಬ್ರಹ್ಮಾವರ ವಿಶೇಷ ತಹಶೀಲ್ದಾರ್ ತಿಪ್ಪೆಸ್ವಾಮಿ, ಉಡುಪಿ ವೃತ್ತ ನಿರೀಕ್ಷಕ ಶ್ರೀಕಾಂತ್, ದಲಿತ ಮುಖಂಡರಾದ ವಿಶ್ವನಾಥ ಪೇತ್ರಿ, ಸುಂದರ ಮಾಸ್ತರ್, ಶಂಕರ್‌ದಾಸ್, ಮಂಜುನಾಥ್ ಗಿಳಿಯಾರು, ಸುಂದರ ಕಪ್ಪೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ಪ್ರಾಕೃತಿಕ ವಿಕೋಪ ನಷ್ಟಕ್ಕೆ ಪರಿಹಾರ: ಪ್ರಾಕೃತಿಕ ವಿಕೋಪದಿಂದ ಒಂದು ವಾರದಲ್ಲಿ ಉಡುಪಿ ತಾಲೂಕಿನಲ್ಲಿ 82 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು ಐದು ಮನೆಗಳು ಸಂಪೂರ್ಣ ಕುಸಿದು ಬಿದ್ದಿವೆ. ಇದರಲ್ಲಿ ಭಾಗಶಃ ಹಾನಿಯಾಗಿರುವ 12 ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮನೆಗಳಿಗೆ ತಲಾ 5,200ರೂ. ತಾತ್ಕಾ ಲಿಕ ಪರಿಹಾರವನ್ನು ಬಿಡುಗಡೆ ಮಾಡಲಾಗಿದ್ದು, ಎರಡು ದಿನಗಳಲ್ಲಿ ಆಯಾ ಕುಟುಂಬಗಳಿಗೆ ಹಸ್ತಾಂತರ ಮಾಡಲಾಗುವುದು. ಕೋಟದಲ್ಲಿ ಸಂಪೂರ್ಣವಾಗಿ ಕುಸಿದ ಕೊರಗ ಸಮುದಾಯದ ಮನೆಗೆ 1 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಪಾಯದ ಅಂಚಿನಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಮರ ತೆರವುಗೊಳಿಸುವಂತೆ ಗ್ರಾಪಂಗಳಿಗೆ ಬಂದ ಅರ್ಜಿಗೆ ಕೂಡಲೇ ಪರವಾನಿಗೆ ನೀಡುವಂತೆ ತಾಪಂ ಇಒಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಗುರುಪ್ರಸಾದ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X