Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಚಾರಕ್ಕಾಗಿ ನನ್ನ ವಿರುದ್ಧ ಆಧಾರರಹಿತ...

ಪ್ರಚಾರಕ್ಕಾಗಿ ನನ್ನ ವಿರುದ್ಧ ಆಧಾರರಹಿತ ಆರೋಪ: ಸಚಿವ ಯು.ಟಿ. ಖಾದರ್

ಆರೋಪ ಮಾಡಿದವರಿಗೆ ನಿಮ್ಹಾನ್ಸ್, ಕಂಕನಾಡಿಯಲ್ಲಿ ಚಿಕಿತ್ಸೆ ನೀಡಿ ಗುಣಪಡಿಸುತ್ತೇನೆ

ವಾರ್ತಾಭಾರತಿವಾರ್ತಾಭಾರತಿ21 May 2016 5:03 PM IST
share
ಪ್ರಚಾರಕ್ಕಾಗಿ ನನ್ನ ವಿರುದ್ಧ ಆಧಾರರಹಿತ ಆರೋಪ: ಸಚಿವ ಯು.ಟಿ. ಖಾದರ್

ಬೆಂಗಳೂರು, ಮೇ 21: ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್‌ಎಚ್‌ಎಂ)ದ ಅಡಿ ಬಡವರಿಗೆ ಉಚಿತ ಔಷಧ ಮತ್ತು ಚಿಕಿತ್ಸೆಗೆ ಕೇಂದ್ರ ಬಿಡುಗಡೆ ಮಾಡಿದ್ದ ಅನುದಾನ ದುರ್ಬಳಕೆ ಆರೋಪ ಆಧಾರರಹಿತ. ಆ ಹಿನ್ನೆಲೆಯಲ್ಲಿ ರಾಜಕೀಯಪ್ರೇರಿತ ಆರೋಪಗೈದ ಪಾಲಿಕೆ ಮಾಜಿ ಸದಸ್ಯ ಎನ್.ಆರ್.ರಮೇಶ್ ವಿರುದ್ಧ ಮೊಕದ್ದಮೆ ಹೂಡಲು ಚಿಂತನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಎಚ್‌ಎಂ ಯೋಜನೆಯಡಿ ಪ್ರಸಕ್ತ ಸಾಲಿಗೆ 1,247.99 ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ. ಆ ಪೈಕಿ ರಾಜ್ಯಾದ್ಯಂತ ಔಷಧ ಮತ್ತು ಉಪಕರಣಗಳ ಖರೀದಿಗೆ 43 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಆ ಪೈಕಿ ಔಷಧಿ ಖರೀದಿಗೆ 15.79 ಕೋಟಿ ರೂ.ಇರಿಸಲಾಗಿದೆ.

ಬಿಬಿಎಂಪಿ 8 ಕೋಟಿ ರೂ.ಗಳನ್ನು ಔಷಧಿ ಖರೀದಿಗೆ ಒದಗಿಸಿದ್ದು, ಆ ಪೈಕಿ ಕೇವಲ 1.87 ಕೋಟಿ ರೂ. ಮೊತ್ತದ ಔಷಧಗಳನ್ನು ಪಾರದರ್ಶಕ ಕಾಯ್ದೆಯನ್ವಯ ಡ್ರಗ್ಸ್ ಲಾಗಿಸ್ಟಿಕ್ ಆ್ಯಂಡ್ ವೇರ್ ಹೌಸಿಂಗ್‌ನಿಂದ ಖರೀದಿಸಿ ಪೂರೈಕೆ ಮಾಡಲಾಗಿದೆ. ವಾಸ್ತವ ಸತ್ಯ ಹೀಗಿರುವಾಗ ಎನ್.ಆರ್.ರಮೇಶ್ 1,463 ಕೋಟಿ ರೂ.ಅವ್ಯವಹಾರ ನಡೆದಿದೆ ಎಂದು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ಗೊಂದಲ ನಿವಾರಣೆಗೆ ಗೋಷ್ಠಿ

ಆರೋಪಕ್ಕೆ ಉತ್ತರ ನೀಡಲು ತಾನು ಸುದ್ದಿಗೋಷ್ಠಿ ಕರೆದಿಲ್ಲ. ಬದಲಿಗೆ ರಾಜ್ಯದ ಜನತೆಯಲ್ಲಿ ಗೊಂದಲ ನಿವಾರಣೆ ಉದ್ದೇಶಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದೇನೆ ಎಂದು ಸ್ಪಷ್ಟನೆ ನೀಡಿದ ಅವರು, ಈ ಪ್ರಕರಣದಲ್ಲಿ ಯಾವುದೇ ತನಿಖೆಗೂ ತಾನು ಸಿದ್ಧ ಎಂದು ಪುನರುಚ್ಚರಿಸಿದರು.

 ಸರಕಾರಿ ಆಸ್ಪತ್ರೆಗಳಿಗೆ ಪೂರೈಸಿರುವ ಔಷಧಿಗಳನ್ನು ಹತ್ತರಿಂದ ಹದಿನೈದು ಪಟ್ಟು ದುಪ್ಪಟ್ಟು ಬೆಲೆಗೆ ಖರೀದಿಸಲಾಗಿದೆ ಎಂಬುದು ಸುಳ್ಳು. ಮಾರುಕಟ್ಟೆ ದರಕ್ಕಿಂತಲೂ ಕಡಿಮೆ, ಸಗಟು ಬೆಲೆಗೆ ಔಷಧಗಳನ್ನು ಖರೀದಿಸಲಾಗಿದೆ. ಅಮೊಕ್ಸೊಲಿನ್ 500 ಎಂಜಿ ಮಾತ್ರೆಯನ್ನು 266.99 ರೂ.ಗೆ ಖರೀದಿಸಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ವಾಸ್ತವದಲ್ಲಿ ಆ ಕ್ಯಾಪ್ಸೂಲ್‌ನ್ನು ಕೇವಲ 2.66 ರೂ.ಗೆ ಖರೀದಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಪ್ರತಿಷ್ಠಿತ ಸಂಸ್ಥೆಗಳಿಂದಲೇ ಔಷಧಗಳನ್ನು ಇ-ಪ್ರೊಕ್ಯೂರ್‌ಮೆಂಟ್ ಮುಖಾಂತರ ಟೆಂಡರ್ ಆಹ್ವಾನಿಸಿ ಅತ್ಯುತ್ತಮ ಔಷಧ ಗುಣಮಟ್ಟವನ್ನು ನಾಲ್ಕೈದು ಹಂತದ ಪರಿಶೀಲನೆ ಬಳಿಕ ಖರೀದಿಸಲಾಗುತ್ತಿದೆ ಎಂದ ಅವರು, ತಜ್ಞ ವೈದ್ಯರ ಪ್ರಮಾಣ ಪತ್ರವಿಲ್ಲದ ಯಾವುದೇ ಔಷಧಗಳನ್ನು ಖರೀದಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಈ ಸಂಬಂಧ ಆರೋಗ್ಯ ಇಲಾಖೆಯೇತರ ಅಧಿಕಾರಿಗಳಿಂದ ಸೂಕ್ತ ತನಿಖೆ ನಡೆಸಲಾಗುವುದು. ಅಲ್ಲದೆ, ತಪ್ಪಿತಸ್ಥರೆಂದು ಕಂಡಬಂದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಔಷಧ ಖರೀದಿ ಹಾಗೂ ಎನ್‌ಎಚ್‌ಎಂ ಯೋಜನೆಯ ಹಣ ಸದ್ಬಳಕೆ ಸಂಬಂಧ ಶೀಘ್ರದಲ್ಲೇ ಶ್ವೇತಪತ್ರ ಹೊರಡಿಸಲಾಗುವುದು. ಬಿಬಿಎಂಪಿಯ ಆರೋಗ್ಯ ವಿಭಾಗಕ್ಕೂ ಮತ್ತು ರಾಜ್ಯ ಆರೋಗ್ಯ ಇಲಾಖೆಗೂ ಸಂಬಂಧವಿಲ್ಲ. ಆದರೂ, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮೇಯರ್‌ಗೆ ಮನವಿ ಮಾಡಲಾಗುವುದು. ಆರೋಗ್ಯ ಇಲಾಖೆಯಲ್ಲಿ ಅವ್ಯವಹಾರಕ್ಕೆ ಅವಕಾಶವಿಲ್ಲ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮುಜಾಹಿದ್ ಪಾಷ ಸೇರಿದಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

‘ಕೆಲವರಿಗೆ ದೇಹ ಬೆಳೆದಿರುತ್ತದೆಯೇ ಹೊರತು, ಮೆದುಳು ಬೆಳವಣಿಗೆ ಆಗಿರುವುದಿಲ್ಲ. ಇಂತಹವರ ಆರೋಗ್ಯ ಸುಧಾರಣೆಗಾಗಿ ರಾಜ್ಯ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿನ ನಿಮ್ಹಾನ್ಸ್ ಅಥವಾ ದಕ್ಷಿಣ ಕನ್ನಡದ ಕಂಕನಾಡಿಯ ಆಸ್ಪತ್ರೆಗೆ ಸೇರಿಸಿ ಅವರ ಕಾಯಿಲೆಯನ್ನು ಗುಣ ಪಡಿಸುವ ಕೆಲಸ ಮಾಡುತ್ತೇವೆ’.

ಯು.ಟಿ.ಖಾದರ್ ,ಆರೋಗ್ಯ ಸಚಿವರು,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X