Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬರವಣಿಗೆಯ ಬಗ್ಗೆ ನಿರಾಸಕ್ತಿ ಸಲ್ಲದು:...

ಬರವಣಿಗೆಯ ಬಗ್ಗೆ ನಿರಾಸಕ್ತಿ ಸಲ್ಲದು: ಪ್ರೊ.ತ್ಯಾಗರಾಜ್

‘ಕನ್ನಡ ಲಿಪಿ ಉಗಮ ಮತ್ತು ವಿಕಾಸ’ ಕುರಿತ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ21 May 2016 10:14 PM IST
share
ಬರವಣಿಗೆಯ ಬಗ್ಗೆ ನಿರಾಸಕ್ತಿ ಸಲ್ಲದು: ಪ್ರೊ.ತ್ಯಾಗರಾಜ್

ಸಾಗರ, ಮೇ 21: ಬರವಣಿಗೆ ಶಕ್ತಿ ಅಪಾರವಾದದ್ದು. ಬರವಣಿಗೆ ಬಗ್ಗೆ ನಿರಾಸಕ್ತಿ ಸರಿಯಲ್ಲ. ನಮ್ಮ ಪ್ರಾಚೀನ ಲಿಪಿಕಾರರು ಬರೆದಿರುವ ಒಂದೊಂದು ಲಿಪಿಯಲ್ಲೂ ವಿಶೇಷವಾದ ಶಕ್ತಿ ಮತ್ತು ಅರ್ಥವಿದೆ ಎಂದು ಕುವೆಂಪು ವಿ.ವಿ. ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಪ್ರೊ ಸಿ.ಎಂ.ತ್ಯಾಗರಾಜ್ ಹೇಳಿದರು.

ತಾಲೂಕಿನ ಕೆಳದಿ ವಸ್ತು ಸಂಗ್ರಹಾಲಯದ ಸಭಾಂಗಣದಲ್ಲಿ ಶನಿವಾರ ಕುವೆಂಪು ವಿಶ್ವವಿದ್ಯಾನಿಲಯ, ಕೆಳದಿ ವಸ್ತು ಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರ, ಕರ್ನಾಟಕ ರಾಜ್ಯ ಪತ್ರಗಾರ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ಲಿಪಿ ಉಗಮ ಮತ್ತು ವಿಕಾಸ’ ಕುರಿತ ವಿಚಾರ ಸಂಕಿರಣ ಕಾರ್ಯಾಗಾರವನ್ನು ಅವರು 1637ರ ಹಸ್ತಪ್ರತಿ ಪ್ರದರ್ಶಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಬರವಣಿಗೆಗೆ ಸಂಬಂಧಪಟ್ಟ ಆಧುನಿಕ ಸೌಲಭ್ಯಗಳು ಇಲ್ಲದ ಕಾಲದಲ್ಲಿ ನಮ್ಮ ಲಿಪಿಕಾರರು ಒಂದೊಂದು ಅಕ್ಷರವನ್ನು ಕೆತ್ತಲು ಪಟ್ಟಿರುವ ಶ್ರಮ ಅವರ ಬರವಣಿಗೆಯ ಹಿಂದೆ ಕಾಣುತ್ತದೆ. ಹಿಂದಿನವರ ಸಾಹಿತ್ಯ, ವ್ಯವಹಾರ ಜ್ಞಾನ, ಭಾಷಾ, ಶ್ರೀಮಂತಿಕೆ, ನಮ್ಮ ಆಚಾರ ವಿಚಾರ, ಹಬ್ಬಹರಿದಿನ ಎಲ್ಲವನ್ನೂ ನಾವು ಪ್ರಾಚೀನ ಲಿಪಿಯಲ್ಲಿ ಕಾಣುತ್ತೇವೆ ಎಂದು ತಿಳಿಸಿದರು.

ನಮ್ಮ ಭಾಷೆಗೆ ಜೀವಂತಿಕೆಯನ್ನು ಇಂತಹ ಲಿಪಿ ಸಂಗ್ರಹ ತಂದು ಕೊಡುತ್ತದೆ. ಕನ್ನಡ ಲಿಪಿ ಉಗಮವಾದ ಇತಿಹಾಸವನ್ನು ನಾವು ಮೋಡಿ ಲಿಪಿ, ತಾಳೆಗರಿಗಳಿಂದ ತಿಳಿದು ಕೊಳ್ಳಬಹುದು. ನಮ್ಮ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಹಿರಿಯರು ದಾಖಲಿಸಿಟ್ಟಿರುವ ಲಿಪಿ ಸಂಗ್ರಹವನ್ನು ನಾವು ಓದಿ ಅರ್ಥ ಮಾಡಿಕೊಳ್ಳುವಂತೆ ಆಗಬೇಕು. ಅಂತಹ ಗ್ರಂಥಗಳಲ್ಲಿ ಜೀವನ ವಿಕಾಸದ ಜೊತೆಗೆ ಭಾಷೆಯ ವಿಕಾಸ ಕುರಿತಮಾಹಿತಿಗಳೂ ಸಿಗುತ್ತವೆ ಎಂದರು.

ಬದಲಾದ ದಿನಮಾನಗಳಲ್ಲಿ ಬರೆಯುವುದು ಕಡಿಮೆಯಾಗುತ್ತಿದೆ. ಮೊಬೈಲ್, ಕಂಪ್ಯೂಟರ್‌ಗಳಂತಹ ಯಂತ್ರಗಳು ನಮ್ಮ ಜೀವಂತಿಕೆಯ ಸಾಧನವಾಗಿ ಮಾರ್ಪಟ್ಟಿರುವುದು ದುರದೃಷ್ಟಕರ. ಇಂಗ್ಲಿಷ್ ಭಾಷೆಗೆ 600-700 ವರ್ಷಗಳ ಇತಿಹಾಸವಿದ್ದು, ಅದು ಜಗತ್ತಿನ ಭಾಷೆಯಾಗಿ ಮಾರ್ಪಟ್ಟಿದೆ. ಆದರೆ 2 ಸಾವಿರ ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆ ಬಗ್ಗೆ ಮಾತ್ರ ನಮ್ಮಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿದರು.

ಪ್ರತಿಯೊಬ್ಬರು ಓದುವ ಜೊತೆಗೆ ಬರೆಯುವುದರಲ್ಲಿ ನಿರಂತರತೆ ಕಾಪಾಡಿಕೊಳ್ಳಬೇಕು. ಇದರಿಂದ ಕನ್ನಡ ಭಾಷೆ ಉಳಿಸಿ, ಬೆಳೆಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ನಟರಾಜ ಭಾಗವತ್ ಮಾತನಾಡಿ, ಮೋಡಿ ಲಿಪಿಯು 1650 ರಿಂದ 1950ರವರೆಗೆ ಚಾಲ್ತಿಯಲ್ಲಿತ್ತು. ನಮ್ಮ ಜನಜೀವನದ ಆಗುಹೋಗುಗಳನ್ನು ಅಕ್ಷರ ರೂಪದಲ್ಲಿ ಹಿಡಿದಿಟ್ಟುಕೊಂಡಿರುವ ಮೋಡಿಲಿಪಿಯನ್ನು ಓದಿ, ಅರ್ಥೈಸಿಕೊಳ್ಳುವ ಸಂಸ್ಕೃತಿ ಬೆಳೆಸಬೇಕು. ನಮ್ಮ ಹಿಂದಿನ ಆಸ್ತಿ ವಿಲೇವಾರಿ ಪತ್ರ, ನ್ಯಾಯಾಲಯ ದಾಖಲೆಗಳು, ಕಂದಾಯ ಇಲಾಖೆ ಕಡತಗಳು ಮೋಡಿ ಲಿಪಿಯಲ್ಲಿದ್ದು ಅದನ್ನು ಓದುವವರು ಸಿಗುವುದು ವಿರಳ. ಕೆಳದಿ ವಸ್ತು ಸಂಗ್ರಹಾಲಯ ಮೋಡಿ ಲಿಪಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ತಿಳಿಸಿದರು. ವೇದಿಕೆಯಲ್ಲಿ ರಾಜ್ಯ ಪತ್ರಕಾರ ಇಲಾಖೆಯ ಸದಾನಂದ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X