Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಾಪರ್ಟಿ ಕಾರ್ಡ್, ಅಭಿವೃದ್ಧಿ ಶುಲ್ಕದ...

ಪ್ರಾಪರ್ಟಿ ಕಾರ್ಡ್, ಅಭಿವೃದ್ಧಿ ಶುಲ್ಕದ ವಿರುದ್ಧ ಪ್ರತಿಧ್ವನಿ: ಸೂಡಾದ ವಿರುದ್ಧ ಆಕ್ರೋಶ!

ಶಿವಮೊಗ್ಗ: ಪಾಲಿಕೆ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ21 May 2016 10:15 PM IST
share

ಶಿವಮೊಗ್ಗ, ಮೇ 21: ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶನಿವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಾಪರ್ಟಿ ಕಾರ್ಡ್ (ಪಿ.ಆರ್.) ಹಾಗೂ ಕೆರೆ ಅಭಿವೃದ್ದಿ ಶುಲ್ಕ ಸಂಗ್ರಹ ವಿಷಯ ಪ್ರತಿಧ್ವನಿಸಿ ಬಿಸಿ ಬಿಸಿ ಚರ್ಚೆ ನಡೆಯಿತು. ಸದಸ್ಯರು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ)ದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಸರಿಯಲ್ಲ: ನಗರ ಯೋಜನಾ ಸ್ಥಾಯಿ ಸಮಿತಿಯ ಅಧ್ಯಕ್ಷ ನಾಗರಾಜ್ ಕಂಕಾರಿಯವರು ಪ್ರಾಪರ್ಟಿ ಕಾರ್ಡ್ ವಿಷಯ ಪ್ರಸ್ತಾಪಿಸಿ ಮಾತನಾಡಿ, ಪಿ.ಆರ್.ಕಾರ್ಡ್‌ನಿಂದ ನಾಗರಿಕರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಈ ಹಿಂದಿನ ಪಾಲಿಕೆ ಸಭೆಯಲ್ಲಿ ಚರ್ಚಿಸಲಾಗಿತ್ತು. ಅಸಮರ್ಪಕ ಅನುಷ್ಠಾನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಆದರೆ, ಸೂಡಾ ಮನೀಶ್ ವೌದ್ಗಿಲ್‌ರವರು ಸದಸ್ಯರ ಈ ಅಭಿಪ್ರಾಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಸದಸ್ಯರನ್ನು ದಲ್ಲಾಳಿಗಳು ಎಂದು ಟೀಕಿಸಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

 ಈ ಹಿಂದಿನ ಸರಕಾರದ ಅವಧಿಯಲ್ಲಿ ಮೈಸೂರು ಮತ್ತು ಶಿವಮೊಗ್ಗದಲ್ಲಿ ಪ್ರಾಪರ್ಟಿ ಕಾರ್ಡ್ ಯೋಜನೆ ಅನುಷ್ಠಾನ ಮಾಡಲಾಗಿತ್ತು. ಆದರೆ 6 ತಿಂಗಳ ಹಿಂದೆ ಮೈಸೂರನ್ನು ಕೈಬಿಡಲಾಗಿದೆ. ನಗರದಲ್ಲಿಯೂ ಈ ಯೋಜನೆ ಕೈಬಿಡಬೇಕೆಂಬ ಆಗ್ರಹ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಯೋಜನೆ ಸ್ಥಗಿತಗೊಳಿಸಲಾಗಿತ್ತು ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸಭೆಗೆ ಮಾಹಿತಿ ನೀಡಿದರು. ಇದೀಗ ಮತ್ತೆ ಕಡ್ಡಾಯಗೊಳಿಸಲಾಗಿದೆ. ಶಿವಮೊಗ್ಗದಲ್ಲಿ ಪ್ರಾಪರ್ಟಿ ಕಾರ್ಡ್ ನಿಂದ ತೊಂದರೆ ಹೆಚ್ಚಾಗುತ್ತಿರುವ ಬಗ್ಗೆ ಚರ್ಚೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವರು ಸದ್ಯಕ್ಕೆ ಕಡ್ಡಾಯ ಆದೇಶ ಮುಂದೂಡುವ ಬಗ್ಗೆ ಹೇಳಿದ್ದಾರೆ.ತಾನೂ ಸಹ ಕಡ್ಡಾಯದಿಂದ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದೇನೆ. ಶೇ. 90 ರಷ್ಟಾದರೂ ಆಸ್ತಿ ನೋಂದಣಿಯಾದಲ್ಲಿ ಈ ವ್ಯವಸ್ಥೆಯನ್ನು ಕಡ್ಡಾಯ ಮಾಡಬಹುದು ಎಂದರು.

ಆಕ್ರೋಶ: ಕಟ್ಟಡ ಪರವಾನಿಗೆ ನೀಡುವ ವೇಳೆ ಸೂಡಾ ಆಡಳಿತವು ಕೆರೆ ಅಭಿವೃದ್ಧಿ ಸಂಗ್ರಹ ವಿಷಯ ಮತ್ತೆ ಚರ್ಚೆಗೆ ಬಂದಿತು. ಕಾಂಗ್ರೆಸ್ ಸದಸ್ಯ ಎಸ್. ರಾಜಶೇಖರ್ ವಿಷಯ ಪ್ರಸ್ತಾಪಿಸಿ ಮಾತನಾಡಿದರು. ಈ ಹಿಂದೆ ಕಟ್ಟಡ ಪರವಾನಿಗೆ ಶುಲ್ಕ ಸಂಗ್ರಹದ ಬಗ್ಗೆ ಪಾಲಿಕೆಯಲ್ಲಿ ನಿರ್ಣಯ ಅಂಗೀಕರಿಸಲಾಗಿತ್ತು. ಆದಾಗ್ಯೂ ಶುಲ್ಕ ಸಂಗ್ರಹವನ್ನು ಮುಂದುವರಿಸಲಾಗಿದೆ ಎಂದು ದೂರಿದರು. ಯಾವ ಆಧಾರದ ಮೇಲೆ ದರ ವಿಧಿಸಲಾಗಿದೆ ಎಂದು ಪ್ರಶ್ನಿಸಿದ ಸದಸ್ಯ ರಾಜಶೇಖರ್, ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸೂಡಾದ ಈ ನಿರ್ಧಾರವನ್ನು ಖಂಡಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದರು.ರಾಜಶೇಖರ್‌ರವರ ಮಾತುಗಳಿಗೆ ಆಕ್ಷೇಪ ವ್ಯಕ್ತ ಪಡಿಸಿದ ಉತ್ತರಿಸಿದ ಆಯುಕ್ತೆ, ನಿರ್ಣಯ ಕೈಗೊಳ್ಳಲು ನಿಮಗೆ ಅಧಿಕಾರವಿದೆ. ಆದರೆ ಅದನ್ನು ಒಪ್ಪಲೇಬೇಕೆಂದು ಕಾನೂನಿನಲ್ಲಿ ಇಲ್ಲ. ಸರಕಾರದ ಸ್ಪಷ್ಟೀಕರಣಕ್ಕೆ ಪತ್ರ ಬರೆಯಲಾಗಿದೆ ಎಂದರು. ಈ ಸಂಬಂದ ಮಾತನಾಡಿದ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಈ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಆಯುಕ್ತರ ಜೊತೆ ಚರ್ಚೆ ನಡೆಸಲಾಗಿದೆ. ಒಂದು ಎಕರೆ ಜಾಗಕ್ಕೆ 1 ಲಕ್ಷ ರೂಪಾಯಿ ವಿಧಿಸಲಾಗುತ್ತಿತ್ತು. ಇದು ನಾಗರಿಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನೂ ಕೈಬಿಡಲು ಕೋರಲಾಗಿದೆ. ಸದ್ಯದಲ್ಲೇ ಈ ಬಗ್ಗೆ ತೀರ್ಮಾನಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X