Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವದ ಸವಾಲುಗಳನ್ನು ಎದುರಿಸಲು ಬುದ್ಧನ...

ವಿಶ್ವದ ಸವಾಲುಗಳನ್ನು ಎದುರಿಸಲು ಬುದ್ಧನ ಬೋಧನೆ ಸಹಕಾರಿ: ಬಾನ್ ಕೀ ಮೂನ್

ವಾರ್ತಾಭಾರತಿವಾರ್ತಾಭಾರತಿ21 May 2016 11:56 PM IST
share

ವಿಶ್ವಸಂಸ್ಥೆ,ಮೇ 21: ಸಮುದಾಯಗಳನ್ನು ವಿಭಜಿಸುವ ಹಾಗೂ ಹಿಂಸಾತ್ಮಕ ಸಂಘರ್ಷಗಳನ್ನು ಪ್ರಚೋದಿಸುವ ದ್ವೇಷಪೂರಿತ ಭಾಷಣಗಳು ವಿಜೃಂಭಿಸುತ್ತಿರುವ ಇತ್ತೀಚಿನ ದಿನಗಳಲ್ಲಿ ಅನುಕಂಪ ಹಾಗೂ ಅಹಿಂಸೆಯ ಕುರಿತಾದ ಬೌದ್ಧ ಧರ್ಮದ ಬೋಧನೆಗಳು ಅಂತಾರಾಷ್ಟ್ರೀಯ ಸಮುದಾಯಕ್ಕೆ ಗಂಭೀರ ಸವಾಲುಗಳನ್ನು ಎದುರಿಸಲು ನೆರವಾಗಬಲ್ಲದು ಎಂದು ವಿಶ್ವಸಂಸ್ಥೆಯ ವರಿಷ್ಠ ಬಾನ್ ಕಿ ಮೂನ್ ತಿಳಿಸಿದ್ದಾರೆ.

ಬುದ್ಧಪೂರ್ಣಿಮೆಯ ಅಂಗವಾಗಿ ಅವರು ಶುಕ್ರವಾರ ನೀಡಿದ ಸಂದೇಶವೊಂದರಲ್ಲಿ ಭಗವಾನ್ ಬುದ್ಧನ ಬೋಧನೆಗಳು, ‘ಜ್ಞಾನದ ಮಹಾನ್ ಭಂಡಾರವಾಗಿದೆ’ ಎಂದರು. ತನ್ನ ತಾಯಿಯು ಶ್ರದ್ಧಾವಂತ ಬೌದ್ಧ ಧರ್ಮಾನುಯಾಗಿದ್ದರಿಂದ ಅವುಗಳನ್ನು ಕುಟುಂಬದ ಮೂಲಕವೇ ಕಲಿಯಲು ತನಗೆ ಸಾಧ್ಯವಾಯಿತೆಂದು ಅವರು ಹೇಳಿದ್ದಾರೆ.

 ‘‘ಸಾಮೂಹಿಕ ಚಳವಳಿಗಳು, ಹಿಂಸಾತ್ಮಕ ಸಂಘರ್ಷಗಳು,ದೌರ್ಜನ್ಯಗಳು, ಮಾನವಹಕ್ಕುಗಳ ಉಲ್ಲಂಘನೆ ಹಾಗೂ ಸಮುದಾಯಗಳನ್ನು ವಿಭಜಿಸುವ ದ್ವೇಷಪೂರಿತ ಮಾತುಗಾರಿಕೆಗಳ ಈ ಸಮಯದಲ್ಲಿ, ಬುದ್ಧಪೂರ್ಣಿಮೆಯು ವಿಶ್ವಸಮುದಾಯಕ್ಕೆ ಸವಾಲನ್ನು ಎದುರಿಸಲು ಅಮೂಲ್ಯ ಅವಕಾಶವೊಂದನ್ನು ತಂದುಕೊಟ್ಟಿದೆ’’ಎಂದು ಬಾನ್ ತಿಳಿಸಿದರು. ಬುದ್ಧಪೂರ್ಣಿಮೆಯ ಮುನ್ನಾ ದಿನವಾದ ಶುಕ್ರವಾರ ವಿಶ್ವಸಂಸ್ಥೆಯ ಮಹಾಸಭೆಯ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಹಾಗೂ ಇತರ 13 ದೇಶಗಳ ಬೌದ್ಧಧರ್ಮಗುರುಗಳು ಹಾಗೂ ರಾಜತಾಂತ್ರಿಕರು ಪಾಲ್ಗೊಂಡಿದ್ದರು.

ಎಲ್ಲಾ ಜನರು ಪರಸ್ಪರ ನಂಟನ್ನು ಹೊಂದಿದ್ದಾರೆಂದು ಬೌದ್ಧ ಧರ್ಮ ಬೋಧಿಸುತ್ತದೆ.ಬಡತನ, ನಿರ್ವಸತೀಕರಣ, ವಿಕೋಪಗಳು,ರೋಗರುಜಿನಗಳು, ಸಂಘರ್ಷ ಹಾಗೂ ಹವಾಮಾನ ಬದಲಾವಣೆ ಸೇರಿದಂತೆ ಎಲ್ಲಾ ಸರಹದ್ದುಗಳನ್ನು ಮೀರಿದ ಮತ್ತಿತರ ಜಾಗತಿಕ ಸಮಸ್ಯೆಗಳನ್ನು ಜೊತೆಯಾಗಿ ಎದುರಿಸಬೇಕಾಗಿದೆಯೆಂದು ಮೂನ್ ಕರೆ ನೀಡಿದರು.

ಬುದ್ಧಪೂರ್ಣಿಮೆಯ ಈ ಸುಸಂದರ್ಭವನ್ನು ಅಂತಾರಾಷ್ಟ್ರೀಯ ಸಮುದಾಯವು ಸಮಾನವಾದ ಭವಿಷ್ಯದ ಹಿತದೃಷ್ಟಿಯಿಂದ ಭಿನ್ನಾಭಿಪ್ರಾಯಗಳ ನಿವಾರಣೆ,ಸಹಬಾಳ್ವೆಯ ಪ್ರಜ್ಞೆ ಬೆಳೆಸಲು ಹಾಗೂ ಜೀವದಯೆಯನ್ನು ಪ್ರದರ್ಶಿಸಲು ಬಳಸಿಕೊಳ್ಳಬೇಕೆಂದು ಮೂನ್ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X