Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಚ್.ಕೆ.ಪಾಟೀಲ್, ಚಿಂಚನಸೂರ್ ರಾಜೀನಾಮೆಗೆ...

ಎಚ್.ಕೆ.ಪಾಟೀಲ್, ಚಿಂಚನಸೂರ್ ರಾಜೀನಾಮೆಗೆ ಶೆಟ್ಟರ್ ಆಗ್ರಹ

ಪೀಠೋಪಕರಣ ಖರೀದಿಯಲ್ಲಿ ಅವ್ಯವಹಾರ ಆರೋಪ

ವಾರ್ತಾಭಾರತಿವಾರ್ತಾಭಾರತಿ21 May 2016 11:56 PM IST
share
ಎಚ್.ಕೆ.ಪಾಟೀಲ್, ಚಿಂಚನಸೂರ್ ರಾಜೀನಾಮೆಗೆ ಶೆಟ್ಟರ್ ಆಗ್ರಹ

ಬೆಂಗಳೂರು, ಮೇ 21: ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆಗೆ ಪೀಠೋಪಕರಣ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ್ದು, ಸುಮಾರು 17.50 ಕೋಟಿ ರೂ.ಅಧಿಕ ಮೊತ್ತದ ಅವ್ಯವಹಾರದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
 ಶನಿವಾರ ವಿಧಾನಸೌಧದ ತನ್ನ ಕೊಠಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಂಟ್ರಲ್ ಸಪ್ಲೈಸ್ ಸರ್ವಿಸಸ್ ಹೆಸರಿನಲ್ಲಿ ಗೋವಿಂದ ರೆಡ್ಡಿ ಮತ್ತು ಆರ್.ಜೆ.ಕಾಮನ್‌ಗೌಡರ್ ಎಂಬ ತಮ್ಮ ಸಂಬಂಧಿಗಳಿಗೆ ಪೀಠೋಪಕರಣ ಪೂರೈಕೆಗೆ ಪಾರದರ್ಶಕ ಕಾಯ್ದೆಯನ್ನು ಉಲ್ಲಂಘಿಸಿ ಟೆಂಡರ್ ನೀಡಲಾಗಿದೆ. ಈ ಪ್ರಕರಣದಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟ ಎಂದು ದೂರಿದರು.
ದುಪ್ಪಟ್ಟು ಬೆಲೆ: ಪೀಠೋಪಕರಣಗಳನ್ನು ಈಗಾಗಲೇ ಪೂರೈಕೆ ಮಾಡಿದ್ದು, ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಯಲ್ಲಿ ದೊರೆಯುವ ಕುರ್ಚಿ, ಮೇಜುಗಳನ್ನು ದುಪ್ಪಟ್ಟು ಬೆಲೆ ನೀಡಿ ಖರೀದಿಸುವ ಮೂಲಕ ಸರಕಾರಕ್ಕೆ ಕೋಟ್ಯಂತರ ರೂ.ನಷ್ಟವನ್ನುಂಟು ಮಾಡಲಾಗಿದೆ ಎಂದು ಜಗದೀಶ್ ಶೆಟ್ಟರ್ ದಾಖಲೆಗಳನ್ನು ಬಹಿರಂಗಪಡಿಸಿದರು.
ಪೀಠೋಪಕರಣ ಖರೀದಿಗೆ ದರ ನಿಗದಿ ಸಂಬಂಧ ರಚಿಸಿದ್ದ ಸಮಿತಿ ಅನುಮೋದನೆ ನೀಡಿದ್ದ ದರವನ್ನು ಅನುರ್ಜಿತಗೊಳಿಸಿದ್ದು, ಹೊಸದಾಗಿ ದರ ನಿಗದಿಪಡಿಸಲಾಗಿದೆ ಎಂದು ದೂರಿದ ಅವರು, ಗ್ರಾಮೀಣ ಕುಡಿಯುವ ನೀರು ಇಲಾಖೆಗೆ ಕಂಪ್ಯೂಟರ್ ಖರೀದಿಯಲ್ಲೂ ಅವ್ಯವಹಾರ ನಡೆದಿದ್ದು, ಶೀಘ್ರದಲ್ಲೆ ದಾಖಲೆ ಬಹಿರಂಗಪಡಿಸುವೆ ಎಂದು ಎಚ್ಚರಿಸಿದರು.
ದಲಿತ ನೌಕರ ಬಲಿ: ಕುಡಿಯುವ ನೀರಿನ ಯೋಜನೆಗಳಿಗೆ ಮೀಸಲಿಟ್ಟದ್ದ 600 ಕೋಟಿ ರೂ.ಗಳಷ್ಟು ಹಣವನ್ನು ಅನಧಿಕೃತವಾಗಿ ವಿವಿಧ ಬ್ಯಾಂಕುಗಳಲ್ಲಿ ಠೇವಣಿ ಇಟ್ಟ ಪ್ರಕರಣದಲ್ಲಿ ಮಾಹಿತಿ ನೀಡದ ಕಾರಣಕ್ಕೆ ದಲಿತ ನೌಕರ ರಾಯಗೇರಿ ಎಂಬವರನ್ನು ಬಲಿಪಶು ಮಾಡಲಾಗಿದೆ.
ಆದರೆ, ಸರಕಾರದ ಹಣವನ್ನು ಬ್ಯಾಂಕುಗಳಲ್ಲಿ ಠೇವಣಿ ಇಟ್ಟು ಕೋಟ್ಯಂತರ ರೂ. ಬಡ್ಡಿ ಮೊತ್ತವನ್ನು ನುಂಗಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ‘ಅಹಿಂದ’ ಏಳ್ಗೆಗಾಗಿ ದುಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ದಲಿತರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ವಸ್ತ್ರದ ಹಣವೂ ದುರ್ಬಳಕೆ: ಜವಳಿ ಇಲಾಖೆಯ ವ್ಯಾಪ್ತಿಯಲ್ಲಿನ ಜವಳಿ ಮತ್ತು ಕೈಮಗ್ಗ ನಿಗಮದಿಂದ 2008-13ರ ‘ಸುವರ್ಣ ವಸ್ತ್ರನೀತಿ’ ಅನುಷ್ಠಾನ ಸಂಬಂಧ ಖಾಸಗಿ ಸಂಸ್ಥೆಯೊಂದಿಗಿನ ಒಡಂಬಡಿಕೆ ಮಾನದಂಡ ಪರಿಶೀಲಿಸದೆ 6.17ಕೋಟಿ ರೂ.ಹಣ ಪಾವತಿಸಿ ಸರಕಾರಕ್ಕೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಶೆಟ್ಟರ್ ಗಂಭೀರ ಆರೋಪ ಮಾಡಿದರು.

ಈ ಅವ್ಯವಹಾರದಲ್ಲಿ ಸಚಿವ ಬಾಬುರಾವ್ ಚಿಂಚನಸೂರ್ ಭಾಗಿಯಾಗಿದ್ದು, ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳಾದ ವಿಜಯ ಕುಮಾರ್, ಶ್ರೀನಿವಾಸಮೂರ್ತಿ, ಸುರೇಶ್ ಕುಮಾರ್, ಗಂಗಯ್ಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ಮಾಜಿ ಸಚಿವ ಗೋವಿಂದ ಎಂ.ಕಾರಜೋಳ, ಶಾಸಕ ಡಾ.ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.


 ಆರೋಪಿಗಳ ಪರ ಶೆಟ್ಟರ್ ವಕಾಲತ್ತು:

ಎಚ್.ಕೆ.ಪಾಟೀಲ್ ಬೆಂಗಳೂರು, ಮೇ 21: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ ಸಂಬಂಧಿಸಿದ 495 ಕೋಟಿ ರೂ.ಗಳನ್ನು ನಕಲಿ ಖಾತೆಗಳಲ್ಲಿ ಇಟ್ಟಿದ್ದ ಆರೋಪಿಗಳಿಗೆ ವಿರೋಧ ಪಕ್ಷದ ನಾಯಕ ಜಗದೀಶ್‌ಶೆಟ್ಟರ್ ವಕೀಲರಾಗುವುದಾದರೆ ತಮ್ಮ ಅಭ್ಯಂತರವಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರಕಾರದ ಅವಧಿಯಲ್ಲಿ ನಕಲಿ ಖಾತೆಗಳಲ್ಲಿ ಇರಿಸಿದ್ದ ಈ ಹಣವನ್ನು ನಮ್ಮ ಸರಕಾರ ಪತ್ತೆ ಮಾಡಿ ಹೊರಗೆ ತಂದಿದೆ. ಅಲ್ಲದೆ, ಆರೋಪಿಗಳ ವಿರುದ್ಧ ಕಾನೂನು ಹಾಗೂ ಆಡಳಿತಾತ್ಮಕವಾಗಿ ಕ್ರಮ ಕೈಗೊಂಡಿದೆ ಎಂದರು.
 ಸರಕಾರದ ಹಣವನ್ನು ನಕಲಿ ಖಾತೆಗಳಲ್ಲಿ ಇರಿಸಿದ್ದ ಆರೋಪಿಗಳ ವಿರುದ್ಧ ಜಗದೀಶ್ ಶೆಟ್ಟರ್ ವಕಾಲತ್ತು ವಹಿಸುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರು ವಂತಹ ವಿರೋಧ ಪಕ್ಷದ ನಾಯಕರು ಜನಸಾಮಾನ್ಯರ ಪರವೋ ಅಥವಾ ಇಂತಹ ಆರೋಪಿಗಳ ಪರವೋ ಎಂಬುದನ್ನು ಬಹಿರಂಗವಾಗಿ ಹೇಳಲಿ ಎಂದು ಅವರು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X