Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಡಿಯು ಮಾಜಿ ಶಾಸಕಿಯ ಪುತ್ರನಿಂದ...

ಜೆಡಿಯು ಮಾಜಿ ಶಾಸಕಿಯ ಪುತ್ರನಿಂದ ಹತ್ಯೆಗೀಡಾದ ಆದಿತ್ಯಗೆ ಪಿಯುಸಿಯಲ್ಲಿ ಶೇ.70 ಅಂಕ

ವಾರ್ತಾಭಾರತಿವಾರ್ತಾಭಾರತಿ22 May 2016 12:43 PM IST
share
ಜೆಡಿಯು ಮಾಜಿ ಶಾಸಕಿಯ ಪುತ್ರನಿಂದ ಹತ್ಯೆಗೀಡಾದ ಆದಿತ್ಯಗೆ ಪಿಯುಸಿಯಲ್ಲಿ ಶೇ.70 ಅಂಕ

 ಗಯಾ(ಬಿಹಾರ), ಮೇ 22: ಇತ್ತೀಚೆಗೆ ಬಿಹಾರದ ರಾಜಕಾರಣಿಯ ಪುತ್ರ ರಿಕಿ ಯಾದವ್‌ರಿಂದ ಕ್ಷುಲ್ಲಕ ಕಾರಣಕ್ಕೆ ಹತ್ಯೆಗೀಡಾಗಿದ್ದ 19ರ ಹರೆಯದ ಆದಿತ್ಯ ಸಚ್‌ದೇವ್ ಪಿಯುಸಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿ ಪಾಸಾಗಿದ್ದಾರೆ.

ಜೆಡಿಯು ಮಾಜಿ ಎಂಎಲ್‌ಸಿ ಮನೋರಮಾ ದೇವಿ ಪುತ್ರ ರಿಕಿ ಯಾದವ್, ಸಚ್‌ದೇವ್‌ರನ್ನು ಗುಂಡಿಕ್ಕಿ ಸಾಯಿಸಿದ್ದ. ಮೇ 7 ರಂದು ರಾತ್ರಿ ಬಿಹಾರದ ಗಯಾ ಪಟ್ಟಣದಲ್ಲಿ ಆದಿತ್ಯ ಸಚ್‌ದೇವ್, ರಿಕಿ ಯಾದವ್ ಪ್ರಯಾಣಿಸುತ್ತಿದ್ದ ರೇಂಜ್ ರೋವರ್ ಕಾರನ್ನು ಹಿಂದಿಕ್ಕಿದ್ದಾನೆ ಎಂಬ ಕ್ಷುಲ್ಲಕ ಕಾರಣ ಆದಿತ್ಯನನ್ನು ಅಡ್ಡಗಟ್ಟಿ ವಾಗ್ವಾದ ನಡೆಸಿದ್ದಲ್ಲದೆ, ಗುಂಡಿಕ್ಕಿ ಸಾಯಿಸಿದ್ದ.

 ‘‘ನನ್ನ ಮಗ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾನೆ. ಆದರೆ, ಜೀವನದ ಪರೀಕ್ಷೆಯಲ್ಲಿ ಫೇಲಾಗಿದ್ದಾನೆ. ಅವನು ಈಗ ಬದುಕಿದ್ದರೆ ನಮಗೆ ತುಂಬಾ ಸಂತೋಷವಾಗುತ್ತಿತ್ತು...ಆದರೆ, ನಾವು ಈಗ ಏನು ಹೇಳಲು ಸಾಧ್ಯ. ನಾವು ಫಲಿತಾಂಶವನ್ನು ನೋಡಲು ಹೋಗಿಲ್ಲ. ಆದಿತ್ಯನ ಸ್ನೇಹಿತರು ಆತ ಶೇ.70ರಷ್ಟು ಅಂಕ ಗಳಿಸಿದ್ದಾನೆಂದು ಮಾಹಿತಿ ನೀಡಿದ್ದಾರೆ’’ ಎಂದು ಆದಿತ್ಯರ ತಂದೆ ಶ್ಯಾಮ್ ಸುಂದರ್ ಸಚ್‌ದೇವ್ ದುಃಖ ತೋಡಿಕೊಂಡಿದ್ದಾರೆ.

ಪಿಯುಸಿಯಲ್ಲಿ ವಾಣಿಜ್ಯ ವಿಭಾಗವನ್ನು ಆಯ್ದುಕೊಂಡಿದ್ದ ಆದಿತ್ಯ, ದಿಲ್ಲಿ ಇಲ್ಲವೇ ಮುಂಬೈನಲ್ಲಿ ಉನ್ನತ ವ್ಯಾಸಂಗ ಮಾಡುವ ಯೋಚನೆಯಲ್ಲಿದ್ದ ಎಂದು ಆದಿತ್ಯ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಆದಿತ್ಯ ಸಾವಿಗೆ ಕಾರಣವಾದ ರಿಕಿ ಯಾದವ್ ಗಯಾದ ಸೆಂಟ್ರಲ್ ಜೈಲಿನಲ್ಲಿದ್ದಾನೆ. ರಿಕಿ ಕಾರಿನೊಂದಿಗೆ ಪರಾರಿಯಾಗಲು ನೆರವು ನೀಡಿದ್ದ ಆತನ ತಂದೆ ಹಾಗೂ ಅಂಗರಕ್ಷಕನನ್ನು ಜೈಲಿಗೆ ಅಟ್ಟಲಾಗಿದೆ. ಅಮಾನತುಗೊಂಡಿರುವ ಜೆಡಿಯು ಶಾಸಕಿ ಮನೋರಮಾ ದೇವಿ ಇತ್ತೀಚೆಗೆ ಪೊಲೀಸರ ಮುಂದೆ ಶರಣಾಗಿದ್ದು, ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X