Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಣಿ ಮನೆಕಳ್ಳನತ ಮಾಡಿದ್ದ ಕಳ್ಳನ ಸೆರೆ

ಸರಣಿ ಮನೆಕಳ್ಳನತ ಮಾಡಿದ್ದ ಕಳ್ಳನ ಸೆರೆ

ವಾರ್ತಾಭಾರತಿವಾರ್ತಾಭಾರತಿ22 May 2016 4:43 PM IST
share

ಪುತ್ತೂರು,ಮೇ 22: ಕಳೆದ ಹಲವು ದಿನಗಳಿಂದ ಪುತ್ತೂರು ನಗರದಲ್ಲಿ ಸರಣಿ ಕಳ್ಳತನ ನಡೆಯುತ್ತಿದ್ದು, ನಗರದ ವಿವಿಧ ಕಡೆಗಳಲ್ಲಿ 7 ಮನೆಗಳಲ್ಲಿ ಕಳ್ಳತನ ನಡೆಸಿದ್ದ ಕೇರಳ ಮೂಲದ ಕುಖ್ಯಾತ ಕಳ್ಳನನ್ನು ನಗರ ಪೊಲೀಸರು ಬಂಧಿಸಿ ಮೂಲಕ ಆತನಿಂದ ಕಳವು ನಡೆಸಿದ ಕೆಲವು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇರಳ ರಾಜ್ಯದ ಕಾಞಂಗಾಡ್ ಮುರಿಯನಾವಿ ಎಂಬಲ್ಲಿನ ನಿವಾಸಿ ಪೊನ್ನುವೇಲು ಎಂಬವರ ಪುತ್ರ ತಂಗರಾಜನ್(64) ಎಂಬಾತನೇ ಈ ಕಳ್ಳತನ ನಡೆಸಿದ ಆರೋಪಿ. ಮೇ 20ರಂದು ಪುತ್ತೂರಿನ ತೆಂಕಿಲದ ಶಿವನಗರ ಎಂಬಲ್ಲಿ ಮಧ್ಯಾಹ್ನ ಹೊತ್ತಿಗೆ ನಡೆದುಕೊಂಡು ಹೋಗುತ್ತಿದ್ದ ತಂಗರಾಜನನ್ನು ಸಂಶಯದ ಮೇರೆಗೆ ಪೊಲೀಸರು ವಿಚಾರಿಸಿದಾಗ ಸರಣಿ ಕಳ್ಳತನಗಳ ರೂವಾರಿ ಈತನೇ ಎಂಬುದು ಬೆಳಕಿಗೆ ಬಂದಿದೆ. ತಂಗರಾಜನ್ ಬಂಧನದ ಮೂಲಕ ಭಾರೀ ಪ್ರಮಾಣದ ಕಳವು ಜಾಲ ಬೆಳಕಿಗೆ ಬಂದಂತಾಗಿದೆ.
ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 8 ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ಕಳೆದ ವಾರ ನಗರದ ನ್ಯಾಯವಾದಿ ಕೆ.ಆರ್. ಆಚಾರ್ಯ ಅವರ ಮನೆಯಿಂದ ಕಳವು ಮಾಡಿದ್ದ 25,000 ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ. ಜನವರಿಯಿಂದೀಚೆಗೆ ಪುತ್ತೂರಿನಲ್ಲಿ ಏಳು ಕಳವು ಪ್ರಕರಣಗಳು ನಡೆದಿದ್ದು, ಎಲ್ಲವನ್ನೂ ತಂಗರಾಜನ್ ಏಕಾಂಗಿಯಾಗಿ ಮಾಡಿರುವುದು ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಪೈಕಿ ಬಹುತೇಕ ಕಳ್ಳತನ ಪ್ರಕರಣಗಳು ಶನಿವಾರ ರಾತ್ರಿ ಹೊತ್ತು ನಡೆದಿದ್ದು, ವಾರಾಂತ್ಯದಲ್ಲಿ ಮನೆ ಮಾಲಕರು ದೂರದ ಊರುಗಳಿಗೆ ಹೋಗುವ ಪರಿಪಾಠವನ್ನು ಅಧ್ಯಯನ ಮಾಡಿ ಅದೇ ಮನೆಗಳನ್ನು ಹುಡುಕಿ ಈತ ಕಳವು ಮಾಡುತ್ತಿದ್ದ.

ಪುತ್ತೂರಿನ ಕೃಷ್ಣ ಭಟ್, ದಿವಾಕರ ನಿಡ್ವಣ್ಣಾಯ, ಡಾ. ಸುರೇಶ್ ಪುತ್ತೂರಾಯ, ಕುಡ್ಗಿ ಪ್ರಭಾಕರ ಶೆಣೈ, ಡಾ.ಸುಬ್ರಹ್ಮಣ್ಯ ಭಟ್, ಹಾರಾಡಿಯಲ್ಲಿರುವ ಶಿಕ್ಷಕ ಚಂದ್ರಶೇಖರ ಅವರ ಮನೆ ಹೀಗೆ 7 ಮನೆಗಳಿಂದ ಈತ ಕಳವು ಮಾಡಿದ್ದ. ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿಕೊಳ್ಳುವತ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ತನ್ನ 16ನೇ ವರ್ಷ ವಯಸ್ಸಿನಲ್ಲಿ ಕಳ್ಳತನಕ್ಕಿಳಿದ ತಂಗರಾಜನ್ ವಿರುದ್ಧ ಉಡುಪಿ, ಕುಶಾಲನಗರ, ಕುಂದಾಪುರ ಮತ್ತು ಕೇರಳದಲ್ಲಿ ದೂರುಗಳು ದಾಖಲಾಗಿವೆ. 2011ರಲ್ಲಿ ಉಡುಪಿಯಲ್ಲಿ ಪೊಲೀಸ್  ಬಲೆಗೆ ಬಿದ್ದಿದ್ದ ಈತ 4 ವರ್ಷ ಜೈಲಿನಲ್ಲಿದ್ದ. ಬಳಿಕ 2015ರಲ್ಲಿ ಕೇರಳದಲ್ಲೂ ಒಮ್ಮೆ ಸಿಕ್ಕಿ ಬಿದ್ದಿದ್ದು, ಜಾಮೀನಿನಲ್ಲಿ ಬಿಡುಗಡೆ ಹೊಂದಿದ್ದ. ಕಳ್ಳತನದ 28 ಪ್ರಕರಣಗಳು ಈಗಲೂ ಈತನ ವಿರುದ್ಧ ವಿಚಾರಣೆಯಲ್ಲಿದೆ.
64 ವರ್ಷ ಪ್ರಾಯದ ತಂಗರಾಜನ್ ಮೊಬೈಲ್ ಬಳಸುವುದಿಲ್ಲ. ಇದರಿಂದಾಗಿಯೇ ಈತನನ್ನು ಹಿಡಿಯುವುದು ಪೊಲೀಸರಿಗೆ ಬಹುದೊಡ್ಡ ಸವಾಲಾಗಿತ್ತು. ಬೆರಳಚ್ಚು ಬಿದ್ದರೆ ಪೊಲೀಸರಿಗೆ ನೆರವಾಗುತ್ತದೆ ಎಂಬ ಕಾರಣಕ್ಕಾಗಿ ಬಟ್ಟೆಯಿಂದ ಕೈಯ್ಯನ್ನು ಸುತ್ತಿಕೊಳ್ಳುತ್ತಿದ್ದ ಹಾಗೂ ತಾನು ಮುಟ್ಟಿದ ಜಾಗವನ್ನು ಬಟ್ಟೆಯಿಂದ ಒರೆಸುತ್ತಿದ್ದ ಎಂಬುದು ತನಿಖೆ ವೇಳೆ ಬಹಿರಂಗಗೊಂಡಿದೆ. 
ಬಂಧನ ಕಾರ್ಯಾಚರಣೆಯಲ್ಲಿ ಪುತ್ತೂರು ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್, ಎಸ್‌ಐ ಅಬ್ದುಲ್ ಖಾದರ್, ಹೆಡ್ ಕಾನ್ ಸ್ಟೇಬಲ್‌ಗಳಾದ ಸ್ಕರಿಯ, ನಾರಾಯಣ್, ದಾಮೋದರ್, ಕಾನ್‌ಸ್ಟೇಬಲ್‌ಗಳಾದ ಶರೀಫ್, ಪ್ರಶಾಂತ್ ಶೆಟ್ಟಿ, ಉದಯ, ಕೃಷ್ಣಪ್ಪ ಮುಂತಾದವರು ಭಾಗವಹಿಸಿದ್ದರು. ನಿರಂತರ ನಗರದಲ್ಲಿ ಕಳ್ಳತನ ನಡೆಯುತ್ತಿದ್ದ ಕಾರಣ ಪೊಲೀಸರು ಪ್ರತೀ ವಾರಾಂತ್ಯದಲ್ಲಿ ರಾತ್ರಿ ಗಸ್ತು ಬಿಗಿಗೊಳಿಸಿದ್ದರು. ಇದಕ್ಕಾಗಿಯೇ 9 ತಂಡ ರಚಿಸಿಕೊಂಡಿದ್ದರು.ನಗದು ಪುರಸ್ಕಾರ: ಸರಣಿ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಕಳ್ಳನನ್ನು ಹಿಡಿದ ಪುತ್ತೂರು ಪೊಲೀಸರ ಕಾರ್ಯವನ್ನು ಜಿಲ್ಲಾ ಎಸ್‌ಪಿ ಅಭಿನಂದಿಸಿದ್ದಾರೆ. ಪೊಲೀಸ್ ತಂಡಕ್ಕೆ ನಗದು ಪಾರಿತೋಷಕ ಮತ್ತು ಪ್ರಶಂಸಾ ಪತ್ರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X