Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಅಂತರಿಕ್ಷ ನೌಕೆಯ ಕನಸಿಗೆ...

ಭಾರತದ ಅಂತರಿಕ್ಷ ನೌಕೆಯ ಕನಸಿಗೆ ರೆಕ್ಕೆಗಳಾದ ಇಬ್ಬರು ಮಹಿಳೆಯರು!

ವಾರ್ತಾಭಾರತಿವಾರ್ತಾಭಾರತಿ22 May 2016 9:46 PM IST
share
ಭಾರತದ ಅಂತರಿಕ್ಷ ನೌಕೆಯ ಕನಸಿಗೆ ರೆಕ್ಕೆಗಳಾದ ಇಬ್ಬರು ಮಹಿಳೆಯರು!

ಹೊಸದಿಲ್ಲಿ, ಮೇ 22: ಭಾರತವು ಸೋಮವಾರ ತನ್ನ ಚೊಚ್ಚಲ ಪ್ರಾಯೋಗಿಕ ಮರುಬಳಸಬಹುದಾದ ಉಡಾವಕ ವಾಹನ ಅಥವಾ ಆರ್‌ಎವಿಯ ಮಾದರಿಯನ್ನು ಅಂತರಿಕ್ಷಕ್ಕೆ ಕಳುಹಿಸಲು ಸಜ್ಜಾಗಿದೆ. ಈ ಯೋಜನೆಗೆ ಮೊದಲು, ಅದರ ಅಮೆರಿಕನ್ ಬೇರಿನೊಂದಿಗೆ ಎರಡು ಪ್ರಮುಖ ಸಂಬಂಧ ಹೊಂದಿದ್ದವರು ಭಾರತದ ಇಬ್ಬರು ಪುತ್ರಿಯರು. ಭಾರತೀಯ ಮೂಲದ ಅಮೆರಿಕನ್ ಖಗೋಳಜ್ಞೆ ಸುನೀತಾ ವಿಲಿಯಂಸ್ ಅಮೆರಿಕದ ಬಾಹ್ಯಾಕಾಶ ನೌಕೆಯಲ್ಲಿ ಹಾರಾಟ ನಡೆಸಿದವರಲ್ಲಿ ಅಗ್ರಗಣ್ಯರಾಗಿದ್ದಾರೆ. ಅವರು, ಎರಡು ಬಾರಿ ಅಂತರಿಕ್ಷ ಯಾನ ಮಾಡಿದ್ದಾರೆ. ಸುನೀತಾ ಅತಿ ಹೆಚ್ಚು ಸಲ ಅಂತರಿಕ್ಷ ನಡಿಗೆ ಮಾಡಿದ ಮಹಿಳೆಯೆನಿಸಿದ್ದಾರೆ. ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಮೇಲೆ 7 ಬಾರಿ ನಡೆದಾಡಿದ್ದಾರೆ ಹಾಗೂ 321 ದಿನಗಳನ್ನು ಅಂತರಿಕ್ಷದಲ್ಲೇ ಕಳೆದಿದ್ದಾರೆ. ಸುನೀತಾ ಈಗ, ನಾಸಾ ಅಂತರಿಕ್ಷಕ್ಕೆ ಪುನಃ ಹಾರಿಸಲಿರುವ ತನ್ನದೇ ಆದ ಹೊಸ ರಾಕೆಟ್‌ಗಳ ಒಬ್ಬರು ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ.

ಸುನೀತಾ ವಿಲಿಯಂಸ್, ಅತಿ ಹೆಚ್ಚು ಅಂತರಿಕ್ಷ ನಡಿಗೆ ನಡೆಸಿರುವ ಮಹಿಳೆಯೆಂಬ ದಾಖಲೆ ಸ್ಥಾಪಿಸಿದ್ದಾರೆ.

‘‘ದಾಖಲೆಗಳನ್ನು ಮಾಡುವುದು ಬೇರೆ ಯಾರಾದರೂ ಮುರಿಯಕ್ಕೆಂಬುದು ನನ್ನ ಭಾವನೆಯಾಗಿದೆ. ಅದು ಮುಂದಿನ ಜನಾಂಗಕ್ಕೆ ದಾಖಲೆಗಳನ್ನು ಮುರಿಯುವ ಸ್ಫೂರ್ತಿಗೆ ಗುರಿಯನ್ನೊದರಿಸುತ್ತದೆ. ಅಂತಹ ದಾಖಲೆಗಳನ್ನು ಸ್ಥಾಪಿಸಲು ನಾನು ಸರಿಯಾದ ಸಮಯದಲ್ಲಿ ಸರಿಯಾದ ಜಾಗದಲ್ಲಿದುದೇ ಕಾರಣ’’ ಎಂದವರು ಹೇಳಿದ್ದಾರೆ. 2003ರಲ್ಲಿ ಭಾರತೀಯ ಸಂಜಾತೆ ಅಮೆರಿಕನ್ ಗಗನ ಯಾನಿ ಕಲ್ಪನಾ ಚಾವ್ಲಾ, ಕೊಲಂಬಿಯ ಅಂತರಿಕ್ಷ ನೌಕೆ ಭೂಮಿಗೆ ಮರು ಪ್ರವೇಶಿಸುವ ವೇಳೆ, ಅಪಘಾತಕ್ಕೊಳಗಾಗಿ ಮರಣ ಹೊಂದಿದ್ದರು. ಆ ಬಳಿಕ ಅನೇಕ ವರ್ಷ ಅಮೆರಿಕದ ಬಾಹ್ಯಾಕಾಶ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಭಾರತವು ಚಾವ್ಲಾರ ಸ್ಮರಣಾರ್ಥ ತನ್ನೊಂದು ಉಪಗ್ರಹಕ್ಕೆ ಅವರ ಹೆಸರನ್ನಿರಿಸಿತ್ತು.

ಸುನೀತಾ, ಕಲ್ಪನಾರೊಂದಿಗಿನ ತನ್ನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ.

‘‘ನಾವು ಆರಂಭದಿಂದಲೇ ಒಳ್ಳೆಯ ಸ್ನೇಹಿತೆಯರಾಗಿದ್ದೆವು. ನಾನು ನಾಸಾಕ್ಕೆ ಸೇರಿದ ಬಳಿಕ ಕಲ್ಪನಾರನ್ನು ಮೊದಲ ಬಾರಿ ಭೇಟಿಯಾದಾಗ, ಅವರು ಅಲ್ಲಿ ಸೇರಿ ಒಂದೆರಡು ವರ್ಷಗಳಾಗಿದ್ದವು. ನಾವು ತಕ್ಷಣವೇ ಒಬ್ಬರನೊಬ್ಬರು ಕಂಡುಕೊಂಡುದು ಕುತೂಹಲಕಾರಿ ಸಂಗತಿಯಾಗಿದೆ. ನಾವು ಒಟ್ಟಿಗೆ ಕೆಲಸ ಮಾಡಿದ್ದೆವು. ಅವರದು ಆಕರ್ಷಕ ವ್ಯಕ್ತಿತ್ವವಾಗಿತ್ತು. ಭಾರತೀಯ ಹೆತ್ತವರನ್ನು ಹೊಂದಿರುವ ನಮ್ಮ ಸಮಾನ ಹಿನ್ನೆಲೆ ಆತ್ಮೀಯತೆಯನ್ನು ಇನ್ನೂ ಹೆಚ್ಚಿಸಿತ್ತು’’ ಎಂದವರು ಹೇಳಿದ್ದಾರೆ.

ಭಾರತೀಯ ಅಂತರಿಕ್ಷ ನೌಕೆಯ ಕುರಿತು ಹೆಮ್ಮೆಯಿಂದ ಮಾತನಾಡಿದ ಸುನೀತಾ, ‘‘ಅದು ರೋಮಾಂಚಕಾರಿ. ಅದು ಮುಂದೆ ಬರಲಿರುವುದರ ಸ್ವರೂಪ’’ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X