Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವೇಗೌಡರು ಶೋಷಿತರ ಧ್ವನಿ: ರಮೇಶ್‌ಬಾಬು

ದೇವೇಗೌಡರು ಶೋಷಿತರ ಧ್ವನಿ: ರಮೇಶ್‌ಬಾಬು

ದಾವಣಗೆರೆ: ಎಚ್.ಡಿ. ದೇವೇಗೌಡ ಪ್ರತಿಷ್ಠಾನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ22 May 2016 10:23 PM IST
share
ದೇವೇಗೌಡರು ಶೋಷಿತರ ಧ್ವನಿ: ರಮೇಶ್‌ಬಾಬು

ದಾವಣಗೆರೆ, ಮೇ 22: ಪ್ರಧಾನಿಯಾಗಿ ಕೇವಲ ಹತ್ತು ತಿಂಗಳ ಅವಧಿಯಲ್ಲಿ ಯಾರು ಮಾಡಲಾಗದ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಬಡವರ, ಶೋಷಿತರ ಧ್ವನಿಯಾದವರು ಮಣ್ಣಿನ ಮಗ ದೇವೇಗೌಡರು ಎಂದು ಜೆಡಿಎಸ್ ರಾಜ್ಯ ವಕ್ತಾರ ರಮೇಶ್‌ಬಾಬು ತಿಳಿಸಿದರು.

ನಗರದ ಅಭಿನವ ರೇಣುಕಮಂದಿರದಲ್ಲಿ ರವಿವಾರ ನಡೆದ ಎಚ್.ಡಿ. ದೇವೇಗೌಡ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ರೈತನ ಮಗನಾಗಿ ಹುಟ್ಟಿ 1996ರಲ್ಲಿ ದೇಶದ ಪ್ರಧಾನಿಯಾಗಿ ಸುದೀರ್ಘ ರಾಜಕಾರಣ ಮಾಡಿದ ಏಕೈಕ ವ್ಯಕ್ತಿ ದೇವೇಗೌಡರು ಮಾತ್ರ. ಮಹಿಳೆಯರಿಗೆ ಮೀಸಲಾತಿ, ರಸಗೊಬ್ಬರಕ್ಕೆ ಸಬ್ಸಿಡಿ, ದಿಲ್ಲಿಗೆ ಮೆಟ್ರೋ ಜಾರಿ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ಕೇವಲ ಹತ್ತು ತಿಂಗಳಲ್ಲಿ ಅನುಷ್ಠಾನಕ್ಕೆ ತಂದ ದೇವೇಗೌಡರು ದೇಶಕಂಡ ಅದ್ಬುತ ರೈತನಾಯಕ ಎಂದರು.

ಹಿತ್ತಲ ಗಿಡ ಮದ್ದಲ್ಲ ಎಂಬಂತೆ ನಮ್ಮಲ್ಲಿಯೇ ಹುಟ್ಟಿ ಬೆಳೆದು ದೇಶದ ಪ್ರಧಾನಿಯಾದ ದೇವೇಗೌಡರ ಮಹತ್ವ ಅನೇಕರಿಗೆ ತಿಳಿದಿಲ್ಲ. ಈ ನಿಟ್ಟಿನಲ್ಲಿ ದಾವಣಗೆರೆಯಲ್ಲಿ ದೇವೇಗೌಡರ ಅಧ್ಯಯನ ಪೀಠವೊಂದನ್ನು ತೆರೆಯಬೇಕು ಎಂದು ಅವರು ತಿಳಿಸಿದರು.

ನಂತರ ವಿರಕ್ತಮಠದ ಶ್ರೀ ಬಸವಪ್ರಭುಶ್ರೀ ಮಾತನಾಡಿ, ದೇವೇಗೌಡರ ಹೆಸರಿನಲ್ಲಿ ಆರಂಭಗೊಳ್ಳುತ್ತಿರುವ ಪ್ರತಿಷ್ಠಾನ ಸಮಾಜಮುಖಿಯಾಗಿ ಶೋಷಿತರ, ಬಡವರ, ನೊಂದವರ, ದಲಿತರ ಪರವಾಗಿ ಕೆಲಸ ನಿರ್ವಹಿಸಬೇಕು. ಚಿತ್ರದುರ್ಗದ ಮುರುಘಾಮಠದಂತೆ ದೇವೇಗೌಡ ಪ್ರತಿಷ್ಠಾನವು ಜಾತ್ಯತೀತ ಪಕ್ಷಾತೀತವಾಗಿ ಕೆಲಸ ಮಾಡಲಿ ಎಂದು ಹಾರೈಸಿದರು.

ಕಾಗಿನೆಲೆ ಗುರುಪೀಠದ ನಿರಂಜನಾನಂದ ಪುರಿ ಶ್ರೀ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡರ ಹೆಸರಿನಲ್ಲಿ ಪ್ರತಿಷ್ಠಾನ ಆರಂಭಗೊಂಡಿರುವುದು ಸಂತಸದ ವಿಚಾರ. ಈ ಪ್ರತಿಷ್ಠಾನದಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಸಹಾಯ ಮಾಡುವ ಮೂಲಕ ಉತ್ತಮ ಹೆಸರು ಗಳಿಸಲಿ ಎಂದು ಆಶಿಸಿದರು.

 ಸಮಾರಂಭ ಚಿತ್ರದುರ್ಗ ಮಾಚಿದೇವ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ, ಸಂತಸೇವಾಲಾಲ ಶ್ರೀ ಸಾನ್ನಿಧ್ಯ ವಹಿಸಿದ್ದರು. ಶಾಸಕ ಟಿ.ಎ. ಶರವಣ, ಮಾಜಿ ಶಾಸಕ ಕೆ. ಮಲ್ಲಪ್ಪ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ, ಚನ್ನಗಿರಿ ರಾಜ್ಯ ಜನತಾದಳದ ಪ. ಪಂಗಡದ ಅಧ್ಯಕ್ಷ ಹೊದಿಗೆರೆ ರಮೇಶ್, ಬಿ. ನಾಗೇಶ್ವರರಾವ್, ಶೀಲಾನಾಯ್ಕಿ, ಟಿ. ದಾಸಕರಿಯಪ್ಪ, ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ, ಕೆ.ಎಸ್. ಬಸವರಾಜ್, ಎಸ್.ಕೆ. ಚಂದ್ರಶೇಖರ್, ಸಣ್ಣಫಕ್ಕಿರಪ್ಪ, ಎಂ. ಪರಮೇಶ್ವರಪ್ಪ, ಎಸ್.ಎಚ್. ಪ್ರಕಾಶ್, ಅಮಾನುಲ್ಲಾಖಾನ್, ವನಜಾಕ್ಷಮ್ಮ, ಕೆ.ಆರ್. ತಿಪ್ಪೇಸ್ವಾಮಿ, ಬಿ. ದಾದಾಪೀರ್, ಎಸ್. ಹೊನ್ನಮ್ಮ, ಮಲ್ಲಾಪುರ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.

ಸಮಿತಿಯ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ ಪ್ರಾಸ್ತಾವಿಕ ಮಾತನಾಡಿದರು. ಬಾತಿ ಶಂಕರ ಸ್ವಾಗತಿಸಿದರು. ಲಾವಣ್ಯಾ ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X