Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಂಗ್ಲಭಾಷೆಗೆ ಮಾರುಹೋಗುತ್ತಿರುವ...

ಆಂಗ್ಲಭಾಷೆಗೆ ಮಾರುಹೋಗುತ್ತಿರುವ ಕನ್ನಡಿಗರು

ಶಿಕಾರಿಪುರ: ಸಾಹಿತ್ಯ ಸಂಜೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 May 2016 10:25 PM IST
share
ಆಂಗ್ಲಭಾಷೆಗೆ ಮಾರುಹೋಗುತ್ತಿರುವ ಕನ್ನಡಿಗರು

ಶಿಕಾರಿಪುರ, ಮೇ 22: ಕನ್ನಡ ನಾಡಿನಲ್ಲಿ ಜನಿಸಿ ಕನ್ನಡ ಭಾಷೆ, ನಾಡು, ನುಡಿ, ನೆಲ. ಜಲದಿಂದ ಉನ್ನತ ಹುದ್ದೆಗೇರಿದ ಕನ್ನಡಿಗರು ಕನ್ನಡದ ಋಣ ತೀರಿಸುವ ಬದಲು ಆಂಗ್ಲಭಾಷೆಗೆ ಮಾರು ಹೋಗುತ್ತಿದ್ದಾರೆ ಎಂದು ಇಲ್ಲಿನ ಪುರಸಭಾ ಸದಸ್ಯ ರವಿ ದೂಪದಹಳ್ಳಿ ವಿಷಾಧಿಸಿದರು.

ಪಟ್ಟಣದ ಚನ್ನಕೇಶವನಗರದಲ್ಲಿ ಶನಿವಾರ ಸಂಜೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಾಹಿತ್ಯ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶತಶತಮಾನಗಳ ಇತಿಹಾಸದ ಕನ್ನಡ ಭಾಷೆ, ಸಾಹಿತ್ಯ ಅತ್ಯಂತ ಶ್ರೀಮಂತವಾದುದು. ಭಾಷೆಯನ್ನು ನಿತ್ಯ ಬಳಸುವ ಮೂಲಕ ನಶಿಸದಂತೆ ಕಾಪಾಡಬಹುದಾಗಿದೆ. ಆಂಗ್ಲಭಾಷೆಯ ವ್ಯಾಮೋಹಕ್ಕೆ ಬಲಿಯಾಗಿರುವ ಕನ್ನಡಿಗರು ಜನ್ಮ ನೀಡಿದ ತಾಯಿ, ಆಶ್ರಯ ನೀಡಿದ ನಾಡನ್ನು ಮರೆಯಬಾರದು ಎಂದರು. ಕನ್ನಡ ಭಾಷೆಯ ಬಗೆಗಿನ ಕೀಳರಿಮೆಯಿಂದಾಗಿ ಆಂಗ್ಲಭಾಷೆಯ ವ್ಯಾಮೋಹ ಹೆಚ್ಚಾಗುತ್ತಿದೆ. ಕನ್ನಡ ಭಾಷೆಯ ಮೇಲೆ ಅಭಿಮಾನವನ್ನು ಯುವಪೀಳಿಗೆಯಲ್ಲಿ ಮೂಡಿಸದಿದ್ದಲ್ಲಿ ಭಾಷೆಯ ಮೂಲಕ ಸಂಸ್ಕೃತಿ, ಇತಿಹಾಸ, ಪರಂಪರೆಯ ಅವನತಿಗೆ ಪರೋಕ್ಷವಾಗಿ ಸರ್ವರೂ ಕಾ ರಣಕರ್ತರಾಗಲಿದ್ದೇವೆ ಎಂದು ಎಚ್ಚರಿಸಿದರು. ಕೃಷಿ ಇಲಾಖೆಯ ನಿವೃತ್ತ ನಿರ್ದೇಶಕ ಸಿದ್ದಯ್ಯ ಹಿರೇಮಠ ಮಾತನಾಡಿ, ಕನ್ನಡ ಭಾಷೆಯನ್ನು ನಿತ್ಯ ಮನೆಯಲ್ಲಿ ಬಳಸುವ ಮೂಲಕ ಮಾತೃಭಾಷೆ ಉಳಿಸಬೇಕಿದೆ ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಪಾಪಯ್ಯ ಮಾತನಾಡಿ, ಕನ್ನಡ ಭಾಷೆಯ ಅಭಿವೃದ್ಧಿ ಏಳಿಗೆ ಕೇವಲ ಕನ್ನಡ ಸಾಹಿತ್ಯ ಪರಿಷತ್‌ಗೆ ಮಾತ್ರ ಸೀಮಿತ ಎಂದು ಭಾವಿಸದೆ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂಬುದನ್ನು ಅರಿಯಬೇಕಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಕಾನೂರು, ಸಾಹಿತ್ಯ ಸಂಜೆ ಮೂಲಕ ಮನಸ್ಸುಗಳಲ್ಲಿ ಕನ್ನಡದ ಸಾಹಿತ್ಯ ಭಾಷೆಯ ಬಗೆಯ ಜಾಗೃತಿ ಮೂಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ ಭಾಷೆಯ ಕಿಚ್ಚು ಹೆಚ್ಚಿಸುವ ಕಾರ್ಯಕ್ಕೆ ಕಸಾಪ ಶ್ರಮಿಸುತ್ತಿದೆ ಎಂದರು. ಉಪನ್ಯಾಸಕ ನಾಗಾನಾಯ್ಕ ಅವರಿಂದ ಕನ್ನಡ ಭಾಷೆಯ ಬಗ್ಗೆ ಉಪನ್ಯಾಸ ನಡೆಯಿತು. ವೇದಿಕೆಯಲ್ಲಿ ನಿವೃತ್ತ ಪ್ರಾಚಾರ್ಯ ಪುಟ್ಟಪ್ಪಗೌಡ, ಮಂಜಾಚಾರ್, ಸುವರ್ಣಮ್ಮ, ಸಿ.ಪಿ ಹೆಗಡೆ, ಹನುಮಂತಪ್ಪ, ರಾಜ ಶೇಖರ್, ಪ್ರಕಾಶ್ ಕೋನಾಪುರ ಮತ್ತಿತರರು ಉಪಸ್ಥಿ ತರಿದ್ದರು. ನೇಹ ದಿವ್ಯಾ ಪ್ರಾರ್ಥಿಸಿದರು. ಶಿಕ್ಷಕ ನಾಗರಾಜ್ ಸ್ವಾಗತಿಸಿ,ಉಳ್ಳಿ ಕರಿಬಸಪ್ಪ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X