Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೌರವದಿಂದ ಬದುಕಲು ಮಾನವ ಹಕ್ಕು...

ಗೌರವದಿಂದ ಬದುಕಲು ಮಾನವ ಹಕ್ಕು ಅಗತ್ಯ:ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ

ವಾರ್ತಾಭಾರತಿವಾರ್ತಾಭಾರತಿ22 May 2016 10:29 PM IST
share
ಗೌರವದಿಂದ ಬದುಕಲು ಮಾನವ ಹಕ್ಕು ಅಗತ್ಯ:ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ

ಚಿಕ್ಕಮಗಳೂರು, ಮೇ 22: ಮನುಷ್ಯ ಗೌರವದಿಂದ ಬದುಕಲು ಮಾನವ ಹಕ್ಕುಗಳು ಬೇಕು. ಆ ನಿಟ್ಟಿನಲ್ಲಿ ಬಡವರಿಗೆ ಸೂರು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ಸರಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅರ್ಹರಿಗೆ ಈ ಸೌಲಭ್ಯ ಕಲ್ಪಿಸುವಾಗ ಕಾನೂನು, ಕಟ್ಟಳೆ ಅಡ್ಡಿಯಾದರೆ ಆ ಬಗ್ಗೆ ಸರಕಾರಿ ನೌಕರರು ಮನವರಿಕೆ ಮಾಡಿಕೊಡುವುದು ಅವರ ಕರ್ತವ್ಯವಾಗಿದೆ ಎಂದು ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ಹೇಳಿದ್ದಾರೆ.

 ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನುಷ್ಯ ಹೇಗಾದರೂ ಜೀವಿಸಬಹುದು. ಆದರೆ ಗೌರವದಿಂದ ಬದುಕಲು ಮಾನವ ಹಕ್ಕುಗಳು ಅಗತ್ಯ. ಆಯೋಗಕ್ಕೆ ಈ ಹಿಂದೆ ಪೊಲೀಸರ ಕಿರುಕುಳ, ಹಿಂಸೆ, ಲಾಕಪ್‌ಡೆತ್ ಬಗ್ಗೆ ಮಾತ್ರ ದೂರುಗಳು ಬರುತ್ತಿದ್ದವು. ಆದರೆ ಈಗ ಗೌರವದಿಂದ ಬದುಕುವ ಅಗತ್ಯವಾದ ಮೂಲ ಭೂತ ಹಕ್ಕುಗಳ ಕೊರತೆ ಬಗ್ಗೆಯೂ ದೂರುಗಳು ಬರುತ್ತಿವೆ. ಅನೇಕ ಕಡೆ ಕುಡಿಯುವ ನೀರು, ಶೌಚಾಲಯ, ಶಾಲಾ ಕೊಠಡಿ, ಆಸ್ಪತ್ರೆಯಲ್ಲಿನ ಸ್ವಚ್ಛತೆ, ಬಿಸಿಯೂಟದಲ್ಲಿನ ಲೋಪ, ವೈದ್ಯರ ಕೊರತೆ ಮುಂತಾದ ಸಮಸ್ಯೆಗಳ ಬಗ್ಗೆ ದೂರು ದಾಖಲಿಸಲಾಗುತ್ತಿದೆ ಎಂದು ನುಡಿದರು.

ಜನರಿಗೆ ಅಂತಹ ಮೂಲಭೂತ ಸೌಕರ್ಯ ಕಲ್ಪಿಸುವುದು ಸರಕಾರಗಳ ಹೊಣೆ. ಈ ನಿಟ್ಟಿನಲ್ಲಿ ಅಪಾರ ಯೋಜನೆಗಳು ಜಾರಿಯಲ್ಲಿವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಸೌಲಭ್ಯ ಕಲ್ಪಿಸುವುದು ಸರಕಾರದ ಸಿಬ್ಬಂದಿಯ ಹೊಣೆಯಾಗಿದೆ. ಕಾನೂನು, ನಿಯಮಗಳು ಅಡ್ಡಿಯಾದರೆ ಆ ಬಗ್ಗೆ ಅರ್ಹರಿಗೆ ಮನವರಿಕೆ ಮಾಡಿ ಕೊಡಬೇಕಾದುದು ಕೂಡ ಸಿಬ್ಬಂದಿಯ ಜವಬ್ದಾರಿ ಎಂದು ಹೇಳಿದರು.

ಈ ಜಿಲ್ಲೆಯಿಂದ 945 ದೂರು ದಾಖಲಾಗಿದ್ದು, ಅದರಲ್ಲಿ 752 ವಿಲೇವಾರಿ ಮಾಡಲಾಗಿದೆ. ಉಳಿದವು ವಿವಿಧ ಹಂತದಲ್ಲಿವೆ. ಇತ್ತೀಚೆಗೆ ನಗರದ ಎಐಟಿ ಕಾಲೇಜಿನ ಪ್ರಾಂಶುಪಾಲರು ನೂರಾರು ವರ್ಷಗಳಿಂದ ಬಳಕೆಗೆ ಇದ್ದ ದಾರಿಯನ್ನು ಮುಚ್ಚಿದ್ದು, ಅದರಿಂದ ಓಡಾಡಲು ತೊಂದರೆ ಆಗಿದೆ ಎಂಬ ದೂರು ಬಂದಿದೆ. ಉಳಿದಂತೆ ತರೀಕೆರೆಯಲ್ಲಿ ಕಲ್ಲುಕ್ವಾರಿಯಿಂದಾಗುವ ತೊಂದರೆ, ಹೇಮಾವತಿ ನದಿಯಲ್ಲಿ ಅಕ್ರಮ ಮರಳು ದಂಧೆ ಹೀಗೆ ಬೇರೆಬೇರೆ ಸಮಸ್ಯೆಗಳ ಬಗ್ಗೆ ದೂರು ಬಂದಿದೆ ಎಂದರು.

ಅಕ್ರಮ ಸಕ್ರಮದಲ್ಲಿ ಹಕ್ಕುಪತ್ರ ದೊರೆಯದಿರುವುದು, ಸಾಗುವಳಿ ಚೀಟಿ, ಅರಣ್ಯಭೂಮಿಗಳ ಸಮಸ್ಯೆಗಳ ಬಗ್ಗೆಯೂ ತಮ್ಮ ಆಯೋಗಕ್ಕೆ ದೂರುಗಳು ಬಂದಿವೆ. ಅರಣ್ಯ ಕಾಯ್ದೆಯಂತೆ ಕಾಡಿನ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ನೀಡುವಂತಿಲ್ಲ. ಕುಡಿಯುವ ನೀರು ಒದಗಿಸುವುದಕ್ಕೆ ಕೇಂದ್ರ ಸರಕಾರದಿಂದ ಅನುಮತಿ ಪಡೆಯಬೇಕು. ಅರಣ್ಯ ವಾಸಿಗಳು ಹಾಗೂ ಬುಡಕಟ್ಟು ಜನರಿಗಾಗಿ ರೂಪಿಸಿದ ಕಾಯ್ದೆಯಲ್ಲಿ ವೈಯಕ್ತಿಕ ಮತ್ತು ಸಾಮೂಹಿಕವಾಗಿ ಕೆಲವು ಶರತ್ತುಗಳಡಿ ಅರಣ್ಯ ಬಳಕೆಗೆ ಅವಕಾಶವಿದೆ. ಅದನ್ನು ಹೊರತುಪಡಿಸಿ ಅರಣ್ಯನಾಶಕ್ಕೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ. ಅಂತಹ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದವರಿಗೆ ಮನವರಿಕೆ ಮಾಡಿಕೊಡಬೇಕೆಂದರು.

ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎಸ್.ಪಿ.ಷಡಕ್ಷರಿಸ್ವಾಮಿ, ಜಿಪಂ ಸಿಇಒ ಡಾ. ರಾಗಪ್ರಿಯ, ಎಸ್ಪಿ ಸಂತೋಷ್‌ಬಾಬು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X