Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಧರಿಗೆ ಸಹಾನುಭೂತಿಗಿಂತ ಸಹಾಯ ಅಗತ್ಯ:...

ಅಂಧರಿಗೆ ಸಹಾನುಭೂತಿಗಿಂತ ಸಹಾಯ ಅಗತ್ಯ: ಸಾಹಿತಿ ಡಾ. ನಾ. ಡಿಸೋಜ

ಸಾಗರ: ಗಾನವೈವಿಧ್ಯ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 May 2016 10:31 PM IST
share
ಅಂಧರಿಗೆ ಸಹಾನುಭೂತಿಗಿಂತ ಸಹಾಯ ಅಗತ್ಯ: ಸಾಹಿತಿ ಡಾ. ನಾ. ಡಿಸೋಜ

ಸಾಗರ, ಮೇ 22: ಅಂಧರಿಗೆ ಅನುಕಂಪ, ಸಹಾನುಭೂತಿಗಿಂತ ಅವರಿಗೆ ಅಗತ್ಯ ಸಹಾಯವನ್ನು ನೀಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ಚಿಂತನೆ ನಡೆಸುವ ಅಗತ್ಯವಿದೆ ಎಂದು ಸಾಹಿತಿ ಡಾ. ನಾ. ಡಿಸೋಜ ಹೇಳಿದ್ದಾರೆ.

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಶನಿವಾರ ನವಜ್ಯೋತಿ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್ ಸಹಾಯಾರ್ಥವಾಗಿ ಹಮ್ಮಿಕೊಳ್ಳಲಾಗಿದ್ದ ಗಾನವೈವಿಧ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪ್ರಸ್ತುತ ಎಲ್ಲ ಅವಯವಗಳು ಸರಿಯಾಗಿ ಇದ್ದವರೂ ಎಲ್ಲವನ್ನೂ ಪಡೆದಿದ್ದೇವೆ ಎಂಬ ಅಹಂಕಾರದಿಂದ ವರ್ತಿಸುತ್ತಾರೆ. ನಿಜಾರ್ಥದಲ್ಲಿ ಎಲ್ಲವನ್ನೂ ಕಳೆದುಕೊಂಡವರೇ ಎಲ್ಲವನ್ನು ಪಡೆದಿರುತ್ತಾರೆ. ಎಲ್ಲವನ್ನೂ ಕಳೆದುಕೊಂಡವರಲ್ಲಿ ಕಪಟ ಇರುವುದಿಲ್ಲ. ಇವರು ಬದುಕನ್ನು ನೋಡುವ, ಎದುರಿಸುವ ರೀತಿ ಎಲ್ಲರಿಗೂ ಅನುಕರಣೀಯವಾಗಬೇಕು ಎಂದ ಅವರು, ಅಂಧ ಕಲಾವಿದರಲ್ಲಿರುವ ಪ್ರತಿಭೆಯನ್ನು ಗೌರವಿಸಿ, ಸೂಕ್ತ ನೆರವು ಕಲ್ಪಿಸಿದರೆ ಸಮಾಜಕ್ಕೆ ಅವರಿಂದ ಹೆಚ್ಚಿನ ಪ್ರಯೋಜನವಾಗುತ್ತದೆ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಡಿ.ಎಂ.ಸತೀಶಕುಮಾರ್ ಮಾತನಾಡಿ, ಅಂಧರೆಂಬ ಕೀಳರಿಮೆ ಇರಿಸಿಕೊಳ್ಳದೆ ಇವರು ಬದುಕನ್ನು ಎದುರಿಸಲು ಕಂಡುಕೊಂಡ ಕಲಾಸೇವೆ ನಿಜಕ್ಕೂ ಗಮನಾರ್ಹವಾದದ್ದು. ಕಣ್ಣಿದ್ದವರು ತಮ್ಮ ಮನಸ್ಸನ್ನು ಕೆಡಿಸಿಕೊಂಡು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿರುವ ಹೊತ್ತಿನಲ್ಲಿ ಅಂಧ ಕಲಾವಿದರ ತಂಡವನ್ನು ಕಟ್ಟಿಕೊಂಡು ಬಸವರಾಜ್ ಮತ್ತು ಸಂಗಡಿಗರು ನಡೆಸುತ್ತಿರುವ ಸಂಗೀತ ಸೇವೆ ಮೌಲ್ಯಯುತವಾದದ್ದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನವಜ್ಯೋತಿ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಹಾಗೂ ಅಂಧ ಕಲಾವಿದ ಕೆ.ಆರ್.ಬಸವರಾಜ್, ಇಂತಹ ಕಾರ್ಯ ಕ್ರಮಗಳಲ್ಲಿ ಸಂಗ್ರಹವಾಗುವ ಹಣವನ್ನು ಅಂಗವಿಕಲರ ಕ್ಷೇಮಾಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಾಗುತ್ತದೆ. ಶಿವಮೊಗ್ಗದಲ್ಲಿ ಅಂಗವಿಕಲರಿಗಾಗಿ ಕಂಪ್ಯೂಟರ್ ತರಬೇತಿ, ಸಂಗೀತ ಶಾಲೆ, ಉಚಿತ ವಸತಿ ಶಾಲೆ ಇನ್ನಿತರ ತೆರೆಯುವ ಉದ್ದೇಶ ಸಂಸ್ಥೆ ಹೊಂದಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಉದ್ಯಮಿ ಯು.ಜಿ.ಶ್ರೀಧರ್ ಉಪಸ್ಥಿತರಿದ್ದರು. ನಗರಸಭೆ ಸದಸ್ಯ ಸಂತೋಷ್ ಆರ್. ಶೇಟ್ ಸ್ವಾಗತಿಸಿ, ಸುನಂದಾ ಶ್ರೀಧರ್ ಪ್ರಾಸ್ತಾವಿಕ ಮಾತನಾಡಿದರು. ಎಂ.ನಾಗರಾಜ್ ನಿರೂಪಿಸಿದರು. ನಂತರ ಕೆ.ಆರ್.ಬಸವರಾಜ್ ಮತ್ತು ತಂಡದವರಿಂದ ಗಾನವೈವಿಧ್ಯ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X