Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಬಿಸ್ಮಿಲ್ಲಾ, ಬಿಜು ಮಂತ್ರ...

ಇನ್ನು ಬಿಸ್ಮಿಲ್ಲಾ, ಬಿಜು ಮಂತ್ರ ಪಠಿಸಲಿರುವ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ22 May 2016 11:53 PM IST
share

ಹೊಸದಿಲ್ಲಿ, ಮೇ 22: ಕೇಂದ್ರ ಸರಕಾರದ ಯೋಜನೆಗಳಿಗೆ ನೆಹರೂ- ಗಾಂಧಿ ಹೆಸರುಗಳನ್ನು ಬಿಟ್ಟು, ಬೇರೆ ಹೆಸರುಗಳನ್ನು ಇಡಲು ಮುಂದಾಗಿರುವ ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ನೇತೃತ್ವದ ರಾಷ್ಟ್ರೀಯ ಅನುಷ್ಠಾನ ಸಮಿತಿ, ಇದೀಗ ಬಿಜೆಡಿ ಸಂಸ್ಥಾಪಕ ಹಾಗೂ ಒಡಿಶಾದ ಎರಡು ಬಾರಿಯ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಹಾಗೂ ಶಹನಾಯ್ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಹೆಸರಿನ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ.

ಹಲವು ರಾಷ್ಟ್ರೀಯ ಆಸ್ತಿಗಳಲ್ಲಿ ಗಾಂಧಿ ಕುಟುಂಬದ ಹೆಸರುಗಳು ರಾರಾಜಿಸುತ್ತಿವೆ ಎಂದು ನಟ ರಿಶಿ ಕಪೂರ್ ಟ್ವೀಟ್ ಮಾಡಿರುವುದರಿಂದ ಕೇಂದ್ರದ ಈ ನಿರ್ಧಾರ ಬಹಿರಂಗವಾಗಿದೆ. ಮೊಟ್ಟಮೊದಲ ಪ್ರಧಾನಿಯ ಹೆಸರನ್ನು ಸಂಸ್ಕೃತಿ, ರಾಜಕೀಯ ಹಾಗೂ ಇತಿಹಾಸದಲ್ಲಿ ಪ್ರಾಬಲ್ಯ ಸ್ಥಾಪಿಸುವ ಪ್ರಯತ್ನಕ್ಕೆ ಇದರಿಂದ ತಡೆ ಬೀಳಲಿದೆ.

ಈ ಹೆಸರುಗಳ ಬದಲಾಗಿ ರಾಷ್ಟ್ರೀಯವಾದಿ ಹೆಸರುಗಳನ್ನು ಸೇರಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಇದರಲ್ಲಿ ಅಲ್ಪಸಂಖ್ಯಾತ ಮುಖಂಡರ ಹೆಸರುಗಳನ್ನೂ ಸೇರಿಸಲು ಮುಂದಾಗಿದೆ. ಕಳೆದ ವರ್ಷ ತಾತ್ಯಾಟೋಪಿಯವರ ಹೆಸರು, ರಾಜಪೂತ ಅರಸ ಮಹಾರಾಣಾ ಪ್ರತಾಪ್ ಅವರ ಹೆಸರುಗಳು ಈ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದವು.

ಈ ವರ್ಷ ಬಿಜು ಪಟ್ನಾಯಕ್ ಅವರ ಜನ್ಮಶತಮಾನೋತ್ಸವ ವಾಗಿದ್ದು, ಮೋದಿಯವರ ಕ್ಷೇತ್ರವಾದ ವಾರಾಣಾಸಿಯ ಬಿಸ್ಮಿಲ್ಲಾ ಖಾನ್, ಹಿಂದಿ ಕಾದಂಬರಿಕಾರ ಅಮೃತಲಾಲ್ ನಾಗರ್, ಖ್ಯಾತ ಕರ್ನಾಟಕ ಸಂಗೀತಗಾರ್ತಿ ಎಂ.ಎಸ್.ಸುಬ್ಬುಲಕ್ಷ್ಮೀ ಅವರ ಹೆಸರನ್ನು ಸೇರಿಸಲು ನಿರ್ಧರಿಸಲಾಗಿದೆ. ರಾಮಕೃಷ್ಣ ವೇದಾಂತ ಮಠದ ಸಂಸ್ಥಾಪಕ ಸ್ವಾಮಿ ಅಭೇದಾನಂದ ಅವರ 150ನೆ ಜಯಂತಿಯಾಗಿದ್ದು, ಈ ಹೆಸರು ಕೂಡಾ ಸೇರ್ಪಡೆಯಾಗಲಿದೆ. ಈ ಸಮಿತಿಯಲ್ಲಿ ಸಚಿವ ಅರುಣ್ ಜೇಟ್ಲ್ಲಿ, ಮಹೇಶ್ ಶರ್ಮಾ ಮತ್ತು ಅಧಿಕಾರಿಗಳು ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X