Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಸಿಸಿಐ ನೂತನ ಅಧ್ಯಕ್ಷ ಠಾಕೂರ್‌ರಿಂದ...

ಬಿಸಿಸಿಐ ನೂತನ ಅಧ್ಯಕ್ಷ ಠಾಕೂರ್‌ರಿಂದ ಸುಧಾರಣೆಗಳ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ22 May 2016 11:56 PM IST
share
ಬಿಸಿಸಿಐ ನೂತನ ಅಧ್ಯಕ್ಷ ಠಾಕೂರ್‌ರಿಂದ ಸುಧಾರಣೆಗಳ ಘೋಷಣೆ

 ಮುಂಬೈ, ಮೇ 22: ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಅನುರಾಗ್ ಠಾಕೂರ್ ಮುಂಬರುವ ದಿನಗಳಲ್ಲಿ ಬಿಸಿಸಿಐ ಜಾರಿಗೆ ತರಲು ಉದ್ದೇಶಿಸಿರುವ ಪ್ರಮುಖ 10 ಸುಧಾರಣೆ/ ಕಾರ್ಯಕ್ರಮಗಳ ಪಟ್ಟಿಯನ್ನು ಘೋಷಿಸಿದ್ದಾರೆ.

1.ಬಿಸಿಸಿಐ ರಾಷ್ಟ್ರೀಯ ತಂಡದ ಪ್ರಮುಖ ಕೋಚ್ ಹುದ್ದೆಗೆ ಜಾಹೀರಾತು ನೀಡಲಿದೆ. ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನಾಂಕ.

 2.ಬರಗಾಲದಂತಹ ಬಿಕ್ಕಟ್ಟನ್ನು ನಿಭಾಯಿಸಲು ಮಳೆ ನೀರು ಕೊಯ್ಲು, ಕೊಳಚೆ ನೀರು ಶುದ್ದೀಕರಣ, ಜಲ ಸಂರಕ್ಷಣೆ ಯೋಜನೆ, ಸೋಲಾರ್ ಪ್ಯಾನೆಲ್‌ಗಳ ಬಳಕೆಗಾಗಿ ಒಂದು ವರ್ಷದ ಅವಧಿಗೆ 100 ಕೋಟಿ ರೂ. ಮೀಸಲಿಡುವುದು.

3. ಅಂಧ, ಕಿವುಡ ಹಾಗೂ ಮೂಕ ಕ್ರಿಕೆಟಿಗರಿಗೆ ನೆರವಾಗಲು ಮುಂದಿನ 5 ವರ್ಷಗಳ ಕಾಲ 5 ಕೋಟಿ ರೂ. ನಿಧಿ ಸ್ಥಾಪನೆ

4. ಲೋಧಾ ಸಮಿತಿಯ ಸಲಹೆಯಂತೆ ಕೆಲವೊಂದು ಸುಧಾರಣೆ ಜಾರಿಗೆ ತರಲು ಸಂತೋಷ್ ರಂಗ್ಣೇಕರ್‌ರನ್ನು ಮುಖ್ಯ ಹಣಕಾಸು ಅಧಿಕಾರಿ(ಸಿಎಫ್‌ಒ) ಆಗಿ ನೇಮಕ ಮಾಡುವುದು.

5. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ವಿಶೇಷ ವಿಕಲಚೇತನರಿಗೆ ಕನಿಷ್ಠ ಶೇ.10ರಷ್ಟು ಉಚಿತ ಟಿಕೆಟ್‌ಗಳನ್ನು ಕಾಯ್ದಿರಿಸುವುದು.

6.: ವಿಕಲಚೇತನರಿಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಆಸನಗಳ ವ್ಯವಸ್ಥೆ

7. ಪ್ರೇಕ್ಷಕರಿಗೆ ಅನುಕೂಲವಾಗುವಂತೆ ದೇಶದ ಎಲ್ಲ ಸ್ಟೇಡಿಯಂಗಳಲ್ಲಿ ನಂಬರ್ ಸಹಿತ ಸೀಟುಗಳಿರಬೇಕು.

8. ಕ್ರಿಕೆಟ್ ಅಭಿಮಾನಿಗಳಿಗೆ ಸಂಬಂಧಿತ ಮಾಹಿತಿ ಹಾಗೂ ಅಂಕಿ-ಅಂಶವನ್ನು ಒದಗಿಸಲು ಎಲ್ಲ ರಾಜ್ಯಗಳ ಕ್ರಿಕೆಟ್ ಘಟಕಗಳು ಅಧಿಕೃತ ಫೇಸ್‌ಬುಕ್/ಟ್ವಿಟ್ಟರ್ ಖಾತೆ ಹಾಗೂ ವೆಬ್‌ಸೈಟ್‌ಗಳನ್ನು ಸ್ಥಾಪಿಸಲು ಸೂಚನೆ ನೀಡುವುದು.

9. ಬಿಸಿಸಿಐಯಿಂದ ಲೈಸನ್ಸ್ ಪಡೆದ ಮೊಬೈಲ್ ಕೋಚಿಂಗ್ ಆ್ಯಪ್‌ನ್ನು ಸ್ಥಾಪಿಸಬೇಕು. ದೂರದ ಪ್ರದೇಶಗಳಲ್ಲಿರುವ ಕ್ರಿಕೆಟ್ ಅಕಾಡೆಮಿಗಳು ಇದನ್ನು ಬಳಸಿಕೊಂಡು ಕೋಚಿಂಗ್‌ನ್ನು ಪಡೆಯಬೇಕು.

10.:ಭಾರತದ ಮಹಿಳಾ ಕ್ರಿಕೆಟಿಗರ ಕೇಂದ್ರ ಒಪ್ಪಂದವನ್ನು ಜಾರಿಗೆ ತರಬೇಕು. ಈ ಬಗ್ಗೆ ಒಂದು ತಿಂಗಳಲ್ಲಿ ವಿವರವಾದ ವರದಿ ಸಲ್ಲಿಸಬೇಕು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X