ಕೊಲ್ಯ ರಮಾನಂದ ಸ್ವಾಮೀಜಿ ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂತಾಪ
ಬೆಳ್ತಂಗಡಿ, ಮೇ 23: ಕೊಲ್ಯ ಮೂಕಾಂಬಿಕಾ ಮಠದ ರಮಾನಂದ ಸ್ವಾಮೀಜಿಯವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ.
ರಮಾನಂದ ಸ್ವಾಮೀಜಿ ಸಂಘಟನಾ ಚತುರರಾಗಿದ್ದು, ಹಿಂದೂ ಸಮಾಜದ ಸಂಘಟನೆ ಮತ್ತು ಬಲವರ್ಧನೆಗಾಗಿ ಶ್ರಮಿಸಿದ್ದಾರೆ. ಬಡವರು, ದೀನ-ದಲಿತರ ಅಭಿವೃದ್ಧಿ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು.
ಸದಾ ಜನಸಾಮಾನ್ಯರೊಂದಿಗೆ ಬೆರೆತು ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿಗಾಗಿ ನಿರಂತರ ಶ್ರಮ ವಹಿಸುತ್ತಿದ್ದರು. ಅವರ ನಿಧನದಿಂದ ಸರ್ವಧರ್ಮೀಯರ ಹಿತಚಿಂತಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಹೆಗ್ಗಡೆಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story