Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊಪಾ ಡೆಲ್ ರೇ ಟ್ರೋಫಿ ಬಾಚಿಕೊಂಡ...

ಕೊಪಾ ಡೆಲ್ ರೇ ಟ್ರೋಫಿ ಬಾಚಿಕೊಂಡ ಬಾರ್ಸಿಲೋನ

ವಾರ್ತಾಭಾರತಿವಾರ್ತಾಭಾರತಿ23 May 2016 11:18 PM IST
share
ಕೊಪಾ ಡೆಲ್ ರೇ ಟ್ರೋಫಿ ಬಾಚಿಕೊಂಡ ಬಾರ್ಸಿಲೋನ

ಮ್ಯಾಡ್ರಿಡ್,ಮೇ 23: ಕೆಲವೇ ವಾರಗಳ ಹಿಂದೆ ಸ್ಪಾನೀಶ್ ಲೀಗ್ ಟ್ರೋಫಿಯನ್ನು ಜಯಿಸಿದ್ದ ಬಾರ್ಸಿಲೋನ ಎಫ್‌ಸಿ ಕೊಪಾ ಡೆಲ್ ರೇ(ಕಿಂಗ್ಸ್ ಕಪ್) ಪ್ರಶಸ್ತಿಯನ್ನು ಜಯಿಸುವ ಮೂಲಕ ಈ ವರ್ಷದ ದೇಶೀಯ ಟೂರ್ನಿಯಲ್ಲಿ ಡಬಲ್ ಪ್ರಶಸ್ತಿ ಜಯಿಸಿದೆ.

ರವಿವಾರ ಇಲ್ಲಿ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಬಾರ್ಸಿಲೋನ ತಂಡ ಸೆವಿಲ್ಲಾ ತಂಡವನ್ನು 2-0 ಅಂತರದಿಂದ ಮಣಿಸಿತು. ಬಾರ್ಸಿಲೋನದ ಪರ ಹೆಚ್ಚುವರಿ ಸಮಯದಲ್ಲಿ ಜೊರ್ಡಿ ಅಲ್ಬಾ (97ನೆ ನಿಮಿಷ)ಹಾಗೂ ನೇಮರ್(120ನೆ ನಿಮಿಷ) ತಲಾ ಒಂದು ಗೋಲು ಬಾರಿಸಿದರು.

ಬಾರ್ಸಿಲೋನ ಸತತ ಎರಡನೆ ಬಾರಿ ಕೋಪಾ ಡೆಲ್ ರೇ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ವರ್ಷ ಬಾರ್ಸಿಲೋನ ಜಯಿಸಿದ ನಾಲ್ಕನೆ ಪ್ರಶಸ್ತಿ ಇದಾಗಿದೆ. ಅದು ಈಗಾಗಲೇ ಯುರೋಪಿಯನ್ ಸೂಪರ್ ಕಪ್, ಕ್ಲಬ್ ವರ್ಲ್ಡ್‌ಕಪ್ ಹಾಗೂ ಸ್ಪಾನಿಶ್ ಲಾಲಿಗ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಆಟದ ಅವಧಿಯಲ್ಲಿ ಉಭಯ ತಂಡಗಳು ಗೋಲು ಬಾರಿಸಲು ವಿಫಲವಾದವು. ಹೆಚ್ಚುವರಿ ಸಮಯದಲ್ಲಿ ಲಿಯೊನೆಲ್ ಮೆಸ್ಸಿ ನೀಡಿದ ಪಾಸ್‌ನ್ನು ಎಡಗಾಲಿನ ಮೂಲಕ ಗೋಲಿನ ಬಲೆಗೆ ತಲುಪಿಸಿದ ಅಲ್ಬಾ ಬಾರ್ಸಿಲೋನಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು.

ಅಂತಿಮ ಕ್ಷಣದಲ್ಲಿ ಗೋಲು ಬಾರಿಸಿದ ನೇಮರ್ ಬಾರ್ಸಿಲೋನ 28ನೆ ಬಾರಿ ಟ್ರೋಫಿ ಜಯಿಸಲು ನೆರವಾಗಿದ್ದಾರೆ. ಬಾರ್ಸಿಲೋನ ಒಂದೇ ಋತುವಿನಲ್ಲಿ ಎರಡು ಪ್ರಮುಖ ದೇಶೀಯ ಪ್ರಶಸ್ತಿಯನ್ನು ಜಯಿಸಿರುವುದು ಇದು ಏಳನೆ ಬಾರಿ.

ಬಾರ್ಸಿಲೋನ ಇತ್ತೀಚೆಗೆ 24ನೆ ಬಾರಿ ಸ್ಪಾನಿಶ್ ಲೀಗ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

 ಡಿಫೆಂಡರ್ ಜೇವಿಯರ್ ಮಸ್ಕರೆನೊ ಎದುರಾಳಿ ತಂಡದ ಕೆವಿನ್ ಗಮೆರೊ ಅವರ ಜರ್ಸಿ ಹಿಡಿದೆಳೆದ ತಪ್ಪಿಗೆ ರೆಡ್ ಕಾರ್ಡ್ ಪಡೆದ ಕಾರಣ ಬಾರ್ಸಿಲೋನ 36ನೆ ನಿಮಿಷಗಳ ಬಳಿಕ 10 ಆಟಗಾರರೊಂದಿಗೆ ಆಡಿತು.

ದ್ವಿತೀಯಾರ್ಧದ ಆರಂಭದಲ್ಲೇ ಬಾರ್ಸಿಲೋನದ ಸ್ಟಾರ್ ಆಟಗಾರ ಲೂಯಿಸ್ ಸುಯರೆಝ್ ಸ್ನಾಯು ಸೆಳೆತಕ್ಕೆ ಒಳಗಾಗಿ ಮೈದಾನ ತೊರೆದರು. ಕಳೆದ 5 ಪಂದ್ಯಗಳಲ್ಲಿ 14 ಗೋಲುಗಳನ್ನು ಬಾರಿಸಿದ್ದ ಸುಯರೆಝ್ ಬಾರ್ಸಿಲೋನ ತಂಡ ಸ್ಪಾನಿಶ್ ಲೀಗ್‌ನಲ್ಲಿ ಫೈನಲ್ ತಲುಪಲು ನಿರ್ಣಾಯಕ ಪಾತ್ರವಹಿಸಿದ್ದರು.

ನೇಮರ್ ಸ್ಕೋರ್ ಬಾರಿಸಲು ಯತ್ನಿಸುತ್ತಿದ್ದಾಗ ಅವರನ್ನು ತಳ್ಳಿದ ಸೆವಿಲ್ಲಾ ತಂಡದ ಮಿಡ್‌ಫೀಲ್ಡರ್ ಎವೆರ್ ಬೆನೆಗಾಗೆ ರೆಡ್ ಕಾರ್ಡ್ ದರ್ಶನವಾಯಿತು. ಬೆನೆಗಾ ಅನುಪಸ್ಥಿತಿಯಲ್ಲಿ ಸೆವಿಲ್ಲಾ ತಂಡ 10 ಆಟಗಾರರೊಂದಿಗೆ ಆಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X