Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ವರನನ್ನು ಕುದುರೆಯಿಂದ ಕೆಳಗಿಳಿಸಿದ...

ದಲಿತ ವರನನ್ನು ಕುದುರೆಯಿಂದ ಕೆಳಗಿಳಿಸಿದ ಸವರ್ಣೀಯರು

ವಾರ್ತಾಭಾರತಿವಾರ್ತಾಭಾರತಿ23 May 2016 11:24 PM IST
share
ದಲಿತ ವರನನ್ನು ಕುದುರೆಯಿಂದ ಕೆಳಗಿಳಿಸಿದ ಸವರ್ಣೀಯರು

ಕುರುಕ್ಷೇತ್ರ,ಮೇ 23: ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ಭೂಸ್ಥಲ ಗ್ರಾಮದಲ್ಲಿ ಸವರ್ಣೀಯರ ತಾರತಮ್ಯದ ಧೋರಣೆಯಿಂದಾಗಿ ತನ್ನ ಮದುವೆಯ ಮೊದಲಿನ ವಿಧಿಗಳನ್ನೂ ಪೂರೈಸಲು ಸಾಧ್ಯವಾಗದಿದ್ದ ದಲಿತ ಯುವಕನೋರ್ವ ಸೋಮವಾರ ಪೊಲೀಸ್ ರಕ್ಷಣೆಯಲ್ಲಿ ತನ್ನ ವಧುವಿನೊಂದಿಗೆ ಹಸೆಮಣೆಯನ್ನೇರಿದ್ದಾನೆ.
ಶನಿವಾರ ರಾತ್ರಿ ದಲಿತ ಸಮುದಾಯಕ್ಕೆ ಸೇರಿದ ಸಂದೀಪ ಕುಮಾರ ಕುದುರೆಯ ಮೇಲೆ ಮೆರವಣಿಗೆ ಹೊರಟಾಗ ಆತನನ್ನು ತಡೆದ ಗ್ರಾಮದ ಮೇಲ್ಜಾತಿಗಳ ಜನರು ಬಲವಂತದಿಂದ ಕೆಳಗಿಳಿಸಿ ಕಾರು ಅಥವಾ ಟ್ರಾಕ್ಟರ್‌ನಲ್ಲಿ ತೆರಳುವಂತೆ ಆದೇಶಿಸಿದ್ದರು. ಇಷ್ಟೇ ಅಲ್ಲ,ಮದುವೆಗೆ ಮುನ್ನ ಪೂಜಾವಿಧಿಗಳನ್ನು ನಡೆಸಲು ಸ್ಥಳೀಯ ದೇವಸ್ಥಾನಗಳ ಪ್ರವೇಶಕ್ಕೂ ವರನಿಗೆ ಮತ್ತು ಆತನ ಕುಟುಂಬ ಸದಸ್ಯರಿಗೆ ಅವಕಾಶ ನೀಡಿರಲಿಲ್ಲ. ಇದು ಗ್ರಾಮದಲ್ಲಿಯ ಎರಡು ಸಮುದಾಯಗಳ ನಡುವೆ ಘರ್ಷಣೆಗೂ ಕಾರಣವಾಗಿದ್ದು, ಶಾಂತಿಯನ್ನು ಕಾಪಾಡಲು ಸ್ಥಳಕ್ಕೆ ಪೊಲೀಸರನ್ನು ಕರೆಸುವಂತಾಗಿತ್ತು.
ಪೊಲೀಸರ ನೆರವಿನೊಂದಿಗೆ ಸಂದೀಪ ಮತ್ತು ಕುಟುಂಬದವರು ಗ್ರಾಮದಲ್ಲಿಯ ವಾಲ್ಮೀಕಿ ದೇವಸ್ಥಾನಕ್ಕೆ ತೆರಳಿದಾಗ ಗ್ರಾಮಸ್ಥರು ಅವರತ್ತ ಕಲ್ಲುಗಳನ್ನು ತೂರಿದ್ದು, ಪೊಲೀಸರೂ ಗಾಯಗೊಂಡಿದ್ದರು. ಹೆಚ್ಚಿನ ಪೊಲೀಸ್ ಪಡೆಯನ್ನು ಕರೆಸಿದ ಬಳಿಕವೇ ಮೆರವಣಿಗೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಿತ್ತು. ಪೊಲೀಸರ ಉಪಸ್ಥಿತಿಯಲ್ಲಿ ಸಂದೀಪ ಮತ್ತು ವೀಣಾರ ಮದುವೆ ಸೋಮವಾರ ಬೆಳಿಗ್ಗೆ ನಡೆಯಿತು.ದೀಗ ಗ್ರಾಮವು ಸಹಜ ಸ್ಥಿತಿಗೆ ಮರಳಿದೆಯಾದರೂ ಪೊಲೀಸರು ಸಂದೀಪ್ ಮನೆಗೆ ಭದ್ರತೆಯನ್ನೊದಗಿಸಿದ್ದಾರೆ.ಆಡಳಿತವು ಸಂದೀಪ ಮನೆಯವರ ಬೆಂಬಲಕ್ಕೆ ನಿಂತಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ನಾಯಿಬ್ ತಹಶೀಲ್ದಾರ ಚೇತನಾ ಚೌಧರಿ ತಿಳಿಸಿದರು.
ಘಟನೆಗೆ ಸಂಬಂಧಿಸಿದಂತೆ 20 ಜನರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಅವರ ಬಂಧನಕ್ಕಾಗಿ ದಾಳಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಕುರುಕ್ಷೇತ್ರ ಡಿಎಸ್‌ಪಿ ಆರ್ಯನ್ ಚೌಧರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X