Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಳ್ತೂರು: ಜಲ್ಲಿ ಕ್ರಷರ್‌ಗೆ ನೀಡಿದ...

ಕಳ್ತೂರು: ಜಲ್ಲಿ ಕ್ರಷರ್‌ಗೆ ನೀಡಿದ ನಿರಪೇಕ್ಷಣಾ ಪತ್ರ ರದ್ದುಗೊಳಿಸಲು ಗ್ರಾಮಸ್ಥರ ಮನವಿ

ವಾರ್ತಾಭಾರತಿವಾರ್ತಾಭಾರತಿ24 May 2016 8:44 PM IST
share
ಕಳ್ತೂರು: ಜಲ್ಲಿ ಕ್ರಷರ್‌ಗೆ ನೀಡಿದ ನಿರಪೇಕ್ಷಣಾ ಪತ್ರ ರದ್ದುಗೊಳಿಸಲು ಗ್ರಾಮಸ್ಥರ ಮನವಿ

ಬ್ರಹ್ಮಾವರ, ಮೇ 24: ಉಡುಪಿ ತಾಲೂಕಿನ 38ನೇ ಕಳ್ತೂರು ಗ್ರಾಮದ ಸರ್ವೆ ನಂ. 26/11ರಲ್ಲಿ ಜಲ್ಲಿ ಕ್ರಷರ್ ಘಟಕ ಸ್ಥಾಪನೆಗೆ ನೀಡಿರುವ ಪರವಾನಿಗೆ ನಿರಪೇಕ್ಷಣಾ ಪತ್ರವನ್ನು ಕೂಡಲೇ ರದ್ದುಗೊಳಿಸುವಂತೆ ಆಗ್ರಹಿಸಿ 38ಕಳ್ತೂರು, ಚಾರ ಹಾಗೂ ನಾಲ್ಕೂರು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಇಂದು ಬ್ರಹ್ಮಾವರ ವಿಶೇಷ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ ಮನವಿ ಅರ್ಪಿಸಿದರು.

ಜಲ್ಲಿ ಕ್ರಷರ್‌ಗೆ ಪ್ರಸ್ತಾಪಿಸಲಾದ ಪ್ರದೇಶದ ಸುತ್ತ ಫಲವತ್ತಾದ ಕೃಷಿಭೂಮಿ ಇದ್ದು, ಅನೇಕ ವರ್ಷಗಳಿಂದ ಸುತ್ತಮುತ್ತ ನೂರಕ್ಕೂ ಅಧಿಕ ಮನೆಗಳಿವೆ. ಕಳ್ತೂರು, ಚಾರ ಹಾಗೂ ನಾಲ್ಕೂರು ಗ್ರಾಮಗಳಿಗೆ ಸಂಬಂಧ ಪಟ್ಟ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆರಾಧ್ಯ ದೈವವಾಗಿರುವ ಹುಣಸೆಬೆಟ್ಟು ಕಟ್ಟೆ ಅಮ್ಮ ದೇವಸ್ಥಾನ ಇದರ ಸಮೀಪದಲ್ಲೇ ಇದೆ.

ಅಲ್ಲದೇ ಚಾರ ಗ್ರಾಮದ ಹಂದಿಕಲ್ಲಿನಲ್ಲಿ ಅಂಗನವಾಡಿ ಕೇಂದ್ರ ಇರುವುದರಿಂದ ಈ ಪ್ರದೇಶದಲ್ಲಿ ಕಲ್ಲುಗಣಿಗಾರಿಕೆ ನಡೆಸಲು ಗ್ರಾಮಸ್ಥರಿಂದ ತೀವ್ರವಾದ ಪ್ರತಿರೋಧವಿದೆ. ಆದುದರಿಂದ ನವೀನ ಕೆ.ಅಡ್ಯಂತಾಯ/ಭಾರತಿ ಅಡ್ಯಂತಾಯ ಸಲ್ಲಿಸಿರುವ ಜಲ್ಲಿ ಕ್ರಷರ್ ಪರವಾನಿಗೆಗೆ ನಿರಪೇಕ್ಷಣಾ ಪತ್ರವನ್ನು ಕೂಡಲೇ ರದ್ದುಗೊಳಿಸಿ, ಮುಂದೆ ಯಾವುದೇ ರೀತಿ ಕಲ್ಲುಗಣಿಗಾರಿಕೆಗೆ ಪರವಾನಿಗೆ ನೀಡದಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.

ಮನವಿ ಪತ್ರ ಸ್ವೀಕರಿಸಿದ ಬ್ರಹ್ಮಾವರದ ವಿಶೇಷ ತಹಶೀಲ್ದಾರ್ ತಿಪ್ಪೇಸ್ವಾಮಿ, ಘಟಕಕ್ಕೆ ಗ್ರಾಮಸ್ಥರಿಂದ ಯಾವುದೇ ವಿರೋಧ ಬಾರದ್ದರಿಂದ ತಾನು ಪರವಾ ನಿಗೆಗೆ ನಿರಪೇಕ್ಷಣಾ ಪತ್ರ ನೀಡಿರುವುದಾಗಿ ಹೇಳಿದಾಗ, ನೀವು ಗ್ರಾಮಸ್ಥರನ್ನು ಭೇಟಿಯಾಗದೇ, ಇಲ್ಲೇ ಕುಳಿತು ಈ ಪತ್ರ ನೀಡಿರುವುದಾಗಿ ಅವರು ವಾದಿಸಿದರು. ತಾನು ತಮ್ಮ ಈ ಮನವಿ ಪತ್ರವನ್ನು ಹಾಗೂ ಯೋಜನೆಗೆ ಗ್ರಾಮಸ್ಥರ ವಿರೋಧವನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸುವುದಾಗಿ ತಿಪ್ಪೇಸ್ವಾಮಿ ಪ್ರತಿಭಟನ ಕಾರರಿಗೆ ಭರವಸೆ ನೀಡಿದರು.

ಕಳ್ತೂರಿನಲ್ಲಿ ಜಲ್ಲಿ ಕ್ರಷರ್ ಆರಂಭಿಸುವ ಯೋಜನೆಯನ್ನು ತಕ್ಷಣವೇ ಕೈಬಿಡುವಂತೆ ಆಗ್ರಹಿಸಿದ ಗ್ರಾಮಸ್ಥರು, ಮೇ 28ರಂದು ಯೋಜಿತ ಸರ್ವೆಗಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಗ್ರಾಮದೊಳಗೆ ಕಾಲಿರಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಜಲ್ಲಿ ಕ್ರಷರ್ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಮುದ್ದು ಪೂಜಾರಿ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಪ್ರಸನ್ನ ಕುಮಾರ್, ರವೀಂದ್ರನಾಥ ಶೆಟ್ಟಿ, ಗುಣಕರ ಶೆಟ್ಟಿ, ಮಿಥುನ್ ಶೆಟ್ಟಿ, ಅಶೋಕ್ ನಾಯ್ಕಿ, ರಘು ನಾಯ್ಕಿ ಸದಾನಂದ ನಾಯ್ಕಿ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X