Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೃದ್ಧೆಯ ಹತ್ಯೆ: ಆರೋಪಿ ಬಂಧನಕ್ಕೆ...

ವೃದ್ಧೆಯ ಹತ್ಯೆ: ಆರೋಪಿ ಬಂಧನಕ್ಕೆ ಗ್ರಾಮಸ್ಥರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ24 May 2016 10:37 PM IST
share
ವೃದ್ಧೆಯ ಹತ್ಯೆ: ಆರೋಪಿ ಬಂಧನಕ್ಕೆ ಗ್ರಾಮಸ್ಥರ ಒತ್ತಾಯ

ಮೂಡಿಗೆರೆ, ಮೇ 24: ಬೆಟ್ಟಗೆರೆ ಗ್ರಾಮದಲ್ಲಿ ಇತ್ತೀಚೆಗೆ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆ ಸಣ್ಣಮ್ಮ ಎಂಬವರನ್ನು ಮನೆಯೊಳಗೆ ನುಗ್ಗಿ ಅತ್ಯಾಚಾರವೆಸಗಿ ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುತ್ತಿಲ್ಲ. ಆರೋಪಿ ಗ್ರಾಮದಲ್ಲಿ ತಲವಾರು ಹಿಡಿದು ಗ್ರಾಮಸ್ಥರನ್ನು ಭೀತಿಗೊಳಿಸುತ್ತಿದ್ದಾನೆ ಎಂದು ಆರೋಪಿಸಿ ಬೆಟ್ಟಗೆರೆ ಗ್ರಾಮಸ್ಥರು ಮಂಗಳವಾರ ಮೂಡಿಗೆರೆ ಪೊಲೀಸ್ ಠಾಣೆಗೆ ತೆರಳಿ ಆರೋಪಿಯ ಶೀಘ್ರ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಕೊಲೆಗೀಡಾದ ವೃದ್ಧೆಯ ಪುತ್ರಿ ಲಕ್ಷ್ಮೀ ಮಾತನಾಡಿ, ತಮ್ಮ 70ವರ್ಷದ ತಾಯಿ ಸಣ್ಣಮ್ಮರನ್ನು ಆರೋಪಿ ಕುಬೇರ (ಲಕ್ಷ್ಮಣ) ಅತ್ಯಾಚಾರಗೈದು ಕೊಲೆ ಮಾಡಿರುವ ಶಂಕೆ ಬಲವಾಗಿದೆ. ಈತ ಈ ಹಿಂದೆ ಅನೇಕ ಬಾರಿ ತಮ್ಮ ತಾಯಿಯವರನ್ನು ಅತ್ಯಾಚಾರಗೈಯಲು ಪ್ರಯತ್ನಿಸಿದ್ದ. ಈ ವಿಷಯವನ್ನು ತಮ್ಮ ತಾಯಿ ತನ್ನೊಂದಿಗೆ 6ತಿಂಗಳ ಹಿಂದೆಯೇ ಹೇಳಿಕೊಂಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಬೇಕು ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಘಟನೆ: ಮೇ 18ರಂದು ವೃದ್ಧೆ ಸಣ್ಣಮ್ಮ ತಮ್ಮ ಪುತ್ರ ಗೋಪಿ ಮನೆಯಿಂದ ತಾವು ವಾಸಿಸುತ್ತಿದ್ದ ಸ್ವಂತ ಮನೆಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ ಆರೋಪಿ ಕುಬೇರ ಸಣ್ಣಮ್ಮರನ್ನು ಹಿಂಬಾಲಿಸಿ ಮನೆಗೆ ನುಗ್ಗಿ ಅತ್ಯಾಚಾರಗೈದು ಮರ್ಮಾಂಗಕ್ಕೆ ಪ್ಲಾಸ್ಟಿಕ್ ತುರುಕಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆಯಿದ್ದು, ಆರೋಪಿ ಶವವನ್ನು ಚಾಪೆಯಿಂದ ಸುತ್ತಿಟ್ಟಿದ್ದ. ಕೊಲೆ ಬಳಿಕ ಮೂರು ದಿನಗಳ ನಂತರ ಶವ ಪತ್ತೆಯಾಗಿದ್ದು, ಆ ದಿನ ನೀಡಿದ ದೂರಿನಲ್ಲಿ ಅತ್ಯಾಚಾರದ ಬಗ್ಗೆ ತಿಳಿಸಿರಲಿಲ್ಲ. ಮರು ಹೇಳಿಕೆ ಮೂಲಕ ದೂರು ನೀಡುವುದಾಗಿ ತಿಳಿಸಿದ್ದಾರೆ.

ಶವ ಪತ್ತೆಯಾದ ನಂತರ ಆರೋಪಿ ಕುಬೇರ ಗ್ರಾಮದಿಂದ ನಾಪತ್ತೆಯಾಗಿದ್ದ. ಇದರಿಂದಾಗಿ ಗ್ರಾಮಸ್ಥರಿಗೆ ಆರೋಪಿ ಕುಬೇರ ಮೇಲೆ ಅನುಮಾನ ಬಲಗೊಂಡಿದೆ. ಇದರಿಂದಾಗಿ ಗ್ರಾಮದ ಜನರು ತೀವ್ರ ಭೀತಿಯಿಂದ ಬದುಕುವಂತಾಗಿದೆ ಎಂದು ಗ್ರಾಮದ ನಿವಾಸಿಗಳು ಹೇಳಿಕೊಂಡರು.

ಈ ಸಂದರ್ಭದಲ್ಲಿ ಕೊಲೆಗೀಡಾದ ಸಣ್ಣಮ್ಮನವರ ಪುತ್ರ ಗೋಪಿ, ಪುತ್ರಿ ಲಕ್ಷ್ಮೀ, ಮೊಮ್ಮಕ್ಕಳಾದ ಚೈತ್ರಾ, ಚೇತನ್, ತಾಪಂ ಸದಸ್ಯ ಸುಂದರ್ ಕುಮಾರ್, ಬಿಎಸ್ಪಿ ಮುಖಂಡರಾದ ಬೆಟ್ಟಗೆರೆ ಶಂಕರ್, ಯು.ಬಿ.ಮಂಜಯ್ಯ, ಲೋಕವಳ್ಳಿ ರಮೇಶ್, ಹಳೆ ಮೂಡಿಗೆರೆ ಯೋಗೀಶ್, ಕಾಂಗ್ರೆಸ್ ಮುಖಂಡ ಬೆಟ್ಟಗೆರೆ ಮನೋಜ್, ಜೆಡಿಎಸ್ ಮುಖಂಡ ಬೆಟ್ಟಗೆರೆ ಉಪೇಂದ್ರಗೌಡ, ಹರೀಶ್, ಲಲಿತಾ, ಪೂರ್ಣಿಮಾ, ಬೆಟ್ಟಗೆರೆ ಮಂಜು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X