Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ: ಶಿವಮಂದಿರದಿಂದ 11 ರೂ.ಗೆ ಪಾಪ...

ರಾಜಸ್ಥಾನ: ಶಿವಮಂದಿರದಿಂದ 11 ರೂ.ಗೆ ಪಾಪ ಮುಕ್ತ ಪ್ರಮಾಣ ಪತ್ರ!

ವಾರ್ತಾಭಾರತಿವಾರ್ತಾಭಾರತಿ25 May 2016 6:48 PM IST
share
ರಾಜಸ್ಥಾನ: ಶಿವಮಂದಿರದಿಂದ 11 ರೂ.ಗೆ ಪಾಪ ಮುಕ್ತ ಪ್ರಮಾಣ ಪತ್ರ!

ಉದಯಪುರ, ಮೇ 25: ರಾಜಸ್ಥಾನದ ಶಿವಮಂದಿರವೊಂದು, ಕುಂಡದಲ್ಲಿ ಮುಳುಗು ಹಾಕಿದ ವ್ಯಕ್ತಿಗೆ ಪಾಪ ಮುಕ್ತ ಎಂಬ ಪ್ರಮಾಣ ಪತ್ರ ನೀಡುತ್ತಿರುವುದು ಚರ್ಚೆಗೆ ಕಾರಣವಾಗಿದೆ. ಈ ಪ್ರಮಾಣಪತ್ರ ಪಡೆಯಬೇಕಾದರೆ ಶುಲ್ಕವನ್ನೂ ಪಾವತಿಸಬೇಕಾಗಿದೆ. ಪ್ರತಾಪಗಡ ಜಿಲ್ಲೆಯಲ್ಲಿ ಗೌತಮೇಶ್ವರ ಮಹಾದೇವ ಪಾಪಮೋಚನ ತೀರ್ಥ ಹೆಸರಿನ ದೇವಸ್ಥಾನವಿದೆ. ಯಾರೇ ಆದರೂ ಇಲ್ಲಿರುವ ಮಂದಾಕಿನಿ ಕುಂಡದಲ್ಲಿ ಮುಳುಗು ಹಾಕಿ 11ರೂ. ಪಾವತಿಸಿ ‘ಪಾಪಮುಕ್ತ’ ಪ್ರಮಾಣಪತ್ರವನ್ನು ಪಡೆದು ಕೊಳ್ಳಬಹುದಾಗಿದೆ.

ದೇಶಕ್ಕೆ ಸ್ವಾತಂತ್ರ ಲಭಿಸಿದಾಗಿನಿಂದ ಮಂದಾಕಿನಿ ಕುಂಡದಲ್ಲಿ ಪವಿತ್ರ ಸ್ನಾನ ಮಾಡಿ ಪ್ರಮಾಣಪತ್ರವನ್ನು ಪಡೆದುಕೊಂಡವರ ದಾಖಲೆಯನ್ನು ಕಾಯ್ದುಕೊಂಡಿರುವುದಾಗಿ ದೇವಸ್ಥಾನವು ಹೇಳಿಕೊಂಡಿದೆ. ‘ಅಮಿನತ್ ಕಚ್ಚಾರಿ’ ಹೆಸರಿನ ಅರ್ಚಕರ ಮಂಡಳಿಯು ಪ್ರತಿ ಪ್ರಮಾಣಪತ್ರಕ್ಕೆ ಒಂದು ರೂ.ಶುಲ್ಕವನ್ನು ವಿಧಿಸುತ್ತದೆ ಮತ್ತು ದೋಷ ನಿವಾರಣೆಗಾಗಿ 10 ರೂ.ಪಾವತಿಸಬೇಕಾಗುತ್ತದೆ. ತಮ್ಮ ಗ್ರಾಮಗಳಲ್ಲಿ ಬಹಿಷ್ಕಾರಕ್ಕೊಳಗಾದವರು ಇಲ್ಲಿಗೆ ಬಂದು ಕುಂಡದಲ್ಲಿ ಮುಳುಗು ಹಾಕಿ ‘ಪಾಪಮುಕ್ತ’ ಪ್ರಮಾಣಪತ್ರದೊಂದಿಗೆ ಮರಳುತ್ತಾರೆ ಎಂದು ಅರ್ಚಕ ನಂದಕಿಶೋರ ಶರ್ಮಾ ತಿಳಿಸಿದರು.

ಈ ಕ್ಷೇತ್ರವು ಶತಮಾನಗಳಿಂದಲೂ ’ಗಿರಿಜನರ ಹರಿದ್ವಾರ’ ಎಂದೇ ಹೆಸರಾಗಿದೆ. ನೂರಾರು ವರ್ಷಗಳಿಂದಲೂ....ವಿಶೇಷವಾಗಿ ಬುಡಕಟ್ಟು ಸಮುದಾಯದ ಪಾಲಿಗೆ ಇದು ಪವಿತ್ರ ತೀರ್ಥಕ್ಷೇತ್ರವಾಗಿದೆ. ಪ್ರತೀ ವರ್ಷ ಮೇ ತಿಂಗಳಲ್ಲಿ ನಡೆಯುವ ಗೌತಮೇಶ್ವರ ಜಾತ್ರೆಗೆ ಲಕ್ಷಾಂತರ ಭಕ್ತರು ಇಲ್ಲಿ ಸೇರುತ್ತಾರೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಈ ಕ್ಷೇತ್ರಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದೆಯಾದರೂ ಈ ದಿನಗಳಲ್ಲಿ ‘ಪಾಪಮುಕ್ತ’ ಪ್ರಮಾಣಪತ್ರವನ್ನು ಬಯಸುವವರ ಸಂಖ್ಯೆ ಕಡಿಮೆಯಾಗಿದೆ. ಈ ತಿಂಗಳಲ್ಲಿ ನಡೆದ ಜಾತ್ರೆಯ ಸಂದರ್ಭ ಎರಡು ಲಕ್ಷಕ್ಕೂ ಅಧಿಕ ಭಕ್ತರು ಮಂದಾಕಿನಿ ಕುಂಡದಲ್ಲಿ ಸ್ನಾನ ಮಾಡಿದ್ದರಾದರೂ ಪ್ರಮಾಣಪತ್ರ ಪಡೆದುಕೊಂಡವರ ಸಂಖ್ಯೆ ಮೂರು ಮಾತ್ರ.

ಪ್ರಾಣಿಯೊಂದರ ಸಾವಿಗೆ ಕಾರಣನಾಗಿದ್ದಕ್ಕೆ ಶಾಪಗ್ರಸ್ತನಾಗಿದ್ದ ಗೌತಮ ಋಷಿಯು ಇಲ್ಲಿಯ ಕುಂಡದಲ್ಲಿ ಸ್ನಾನ ಮಾಡಿ ಶಾಪಮುಕ್ತನಾಗಿದ್ದ ಎಂದು ಐತಿಹ್ಯವೊಂದು ಹೇಳುತ್ತದೆ. ಅಲ್ಲಿಂದೀಚೆಗೆ ಇಲ್ಲಿ ಪವಿತ್ರ ಸ್ನಾನದ ಸುದೀರ್ಘ ಸಂಪ್ರದಾಯವು ಅನೂಚಾನವಾಗಿ ನಡೆದುಕೊಂಡು ಬಂದಿದೆ.

ರೈತರು ಕೃಷಿಯ ಸಂದರ್ಭದಲ್ಲಿ ಅನುದ್ದಿಷ್ಟವಾಗಿ ಕ್ರಿಮಿಕೀಟಗಳು,ಇತರ ಜಂತುಗಳ ಸಾವಿಗೆ ಕಾರಣರಾಗುತ್ತಾರೆ. ಪಕ್ಷಿಗಳು ಮತ್ತು ಸರೀಸೃಪಗಳ ಮೊಟ್ಟೆಗಳು ನಾಶವಾಗುತ್ತವೆ. ಇದು ಅವರಲ್ಲಿ ತಪ್ಪಿನ ಭಾವನೆಯನ್ನು ಮೂಡಿಸಿರುತ್ತದೆ. ಭಾರವಾದ ಹೃದಯದೊಂದಿಗೆ ಇಲ್ಲಿಗೆ ಬರುವ ಅವರು ಪವಿತ್ರ ಸ್ನಾನದ ಬಳಿಕ ನಿರಾಳರಾಗಿ ಮರಳುತ್ತಾರೆ ಎಂದು ಇನ್ನೋರ್ವ ಅರ್ಚಕ ಕನ್ಹೈಯಾಲಾಲ್ ಶರ್ಮಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X