Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಬಹಾರ್: ಅಮೆರಿಕ ಸಂಸದರ ಕಿರಿಕ್

ಚಬಹಾರ್: ಅಮೆರಿಕ ಸಂಸದರ ಕಿರಿಕ್

ವಾರ್ತಾಭಾರತಿವಾರ್ತಾಭಾರತಿ25 May 2016 11:45 PM IST
share
ಚಬಹಾರ್: ಅಮೆರಿಕ ಸಂಸದರ ಕಿರಿಕ್

ವಾಶಿಂಗ್ಟನ್,ಮೇ 25: ವಾಣಿಜ್ಯ ಸಂಪರ್ಕಕ್ಕಾಗಿ ದಕ್ಷಿಣ ಇರಾನ್‌ನಚಬಹಾರ್ ಬಂದರನ್ನು ಅಭಿವೃದ್ಧಿ ಪಡಿಸುವ ಭಾರತದ ಯೋಜನೆಯ ಜಾರಿಯಿಂದ ಅಂತಾರಾಷ್ಟ್ರೀಯ ನಿರ್ಬಂಧಗಳ ಉಲ್ಲಂಘನೆಯಾಗಲಿದೆಯೇ ಎಂಬ ಬಗ್ಗೆ ತಾನು ನಿಕಟವಾಗಿ ಪರಿಶೀಲಿಸುವುದಾಗಿ ಅಮೆರಿಕ ಸೋಮವಾರ ಹೇಳಿದೆ.

 ಚಬಹಾರ್ ಬಂದರನ್ನು ಅಭಿವೃದ್ಧಿಪಡಿಸಲು ಭಾರತವು, ಇರಾನ್ ಜೊತೆ ಒಪ್ಪಂದದಿಂದಾಗಿ ಟೆಹ್ರಾನ್ ವಿರುದ್ಧ ಹೇರಲಾದ ಅಂತಾರಾಷ್ಟ್ರೀಯ ನಿರ್ಬಂಧಗಳ ಉಲ್ಲಂಘನೆಯಾಗುವುದೇ ಎಂದು ಪ್ರಶ್ನಿಸಿರುವ ಅಮೆರಿಕ ಸೆನೆಟ್ ಸದಸ್ಯರಿಗೆ ಒಬಾಮ ಆಡಳಿತ ಈ ಭರವಸೆಯನ್ನು ನೀಡಿದೆ.ಚ್ಟ‘‘ ಇರಾನ್ ಜೊತೆಗಿನ ಚಟುವಟಿಕೆಗಳಿಗೆ ವಿಧಿಸಲಾಗಿರುವ ನಿರ್ಬಂಧಗಳ ಬಗ್ಗೆ ನಾವು ಭಾರತಕ್ಕೆ ಮನವರಿಕೆ ಮಾಡಿದ್ದೇವೆ ಎಂದು ದಕ್ಷಿಣ ಹಾಗೂ ಕೇಂದ್ರ ಏಶ್ಯ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ನಿಶಾ ದೇಸಾಯಿ ಬಿಸ್ವಾಲ್ ಮಂಗಳವಾರ ತಿಳಿಸಿದ್ದಾರೆ. ಚಬಹಾರ್ ಒಪ್ಪಂದ ಕೂಡಾ ಈ ನಿರ್ಬಂಧಗಳ ವ್ಯಾಪ್ತಿಯಲ್ಲಿ ಬರುವುದೇ ಎಂಬುದನ್ನು ತಿಳಿಯಲು ನಾವು ಆ ಒಡಂಬಡಿಕೆಯ ವಿವರಗಳನ್ನು ಪರಿಶೀಲಿಸಬೇಕಾಗಿದೆ’’ ಎಂದು ಬಿಸ್ವಾಲ್, ಅಮೆರಿಕ ಸೆನೆಟ್‌ನ ವಿದೇಶಾಂಗ ಸಂಬಂಧಗಳ ಸಮಿತಿಗೆ ತಿಳಿಸಿದ್ದಾರೆ.
  
    ಇರಾನ್‌ನ ಚಬಹಾರ್ ಬಂದರನ್ನು ಅಭಿವೃದ್ಧಿಪಡಿಸಲು 500 ದಶಲಕ್ಷ ಡಾಲರ್‌ಗಳ ಆರ್ಥಿಕ ನೆರವನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಘೋಷಿಸಿದ್ದರು. ಈ ಬಗ್ಗೆ ಉಭಯ ರಾಷ್ಟ್ರಗಳ ನಡುವೆ ಒಪ್ಪಂದ ಕೂಡಾ ಏರ್ಪಟ್ಟಿದೆ. ಚಬಹಾರ್ ಬಂದರನ್ನು ಅಭಿವೃದ್ಧಿಪಡಿಸುವುದರಿಂದ ಭಾರತಕ್ಕೆ ಇರಾನ್, ಅಫ್ಘಾನಿಸ್ತಾನ ಹಾಗೂ ಮಧ್ಯ ಏಶ್ಯ ಜೊತೆಗೆ ವಾಣಿಜ್ಯ ಸಂಪರ್ಕವನ್ನು ಪಡೆಯಲು ಸಾಧ್ಯವಾಗಲಿದೆ. ಇರಾನ್ ತನ್ನ ಅಣುಶಕ್ತಿ ಕಾರ್ಯಕ್ರಮದ ಮೇಲೆ ನಿಯಂತ್ರಣವನ್ನು ವಿಧಿಸುವ ಬಗ್ಗೆ ಒಪ್ಪಂದವೊಂದು ಏರ್ಪಟ್ಟ ಆನಂತರ ಕಳೆದ ವರ್ಷ ಅಮೆರಿಕ ಹಾಗೂ ಯುರೋಪ್ ಆ ದೇಶದ ಮೇಲೆ ಹೇರಲಾಗಿದ್ದ ನಿರ್ಬಂಧಗಳನ್ನು ರದ್ದುಪಡಿಸಿತ್ತು. ಆದರೆ ಇರಾನ್‌ನೊಂದಿಗೆ ಮಾನವಹಕ್ಕುಗಳು ಹಾಗೂ ಭಯೋತ್ಪಾದನೆಗೆ ಸಂಬಂಧಿಸಿದ ಕೆಲವೊಂದು ಭಿನ್ನಾಭಿಪ್ರಾಯಗಳು ಇನ್ನೂ ಉಳಿದುಕೊಂಡಿರುವುದರಿಂದ ಆ ದೇಶದ ಜೊತೆ ವಾಣಿಜ್ಯ ಚಟುವಟಿಕೆಗಳಿಗೆ ಸಂಬಂಧಿಸಿದ ಕೆಲವು ನಿರ್ಬಂಧಗಳನ್ನು ಇನ್ನೂ ಮುಂದುವರಿಸಲಾಗಿದೆ. ಇರಾನ್ ಜೊತೆಗಿನ ಭಾರತದ ಬಾಂಧವ್ಯವು ಮುಖ್ಯವಾಗಿ ಆರ್ಥಿಕ ಹಾಗೂ ಇಂಧನ ವಿಷಯಗಳಿಗೆ ಸಂಬಂಧಿಸಿದ್ದಾಗಿದೆ. ಸಮರ್ಪಕವಾದ ವಾಣಿಜ್ಯ ಮಾರ್ಗವನ್ನು ಹೊಂದುವ ಭಾರತದ ಆವಶ್ಯಕತೆಯನ್ನು ಅಮೆರಿಕ ಆಡಳಿತವು ಅರಿತುಕೊಂಡಿದೆಯೆಂದು ಬಿಸ್ವಾಲ್ ತಿಳಿಸಿದರು. ಆದರೆ ಸೇನಾ ಸಹಕಾರ ಸೇರಿದಂತೆ ಅಮೆರಿಕಕ್ಕೆ ಆತಂಕವುಂಟು ಮಾಡುವ ಕ್ಷೇತ್ರಗಳಲ್ಲಿ ಇರಾನ್ ಜೊತೆ ಭಾರತವು ಯಾವುದೇ ಒಪ್ಪಂದ ಮಾಡಿಕೊಂಡಿಲ್ಲವೆಂದು ಬಿಸ್ವಾಲ್ ತಿಳಿಸಿದರು.

 ಇರಾನ್ ಜೊತೆಗಿನ ಚಟುವಟಿಕೆಗಳಿಗೆ ವಿಧಿಸಲಾಗಿರುವ ನಿರ್ಬಂಧಗಳ ಬಗ್ಗೆ ನಾವು ಭಾರತಕ್ಕೆ ಮನವರಿಕೆ ಮಾಡಿದ್ದೇವೆ. ಚಬಹಾರ್ ಒಪ್ಪಂದ ಕೂಡಾ ಈ ನಿರ್ಬಂಧಗಳ ವ್ಯಾಪ್ತಿಯಲ್ಲಿ ಬರುವುದೇ ಎಂಬುದನ್ನು ತಿಳಿಯಲು ನಾವು ಆ ಒಡಂಬಡಿಕೆಯ ವಿವರಗಳನ್ನು ಪರಿಶೀಲಿಸಬೇಕಾಗಿದೆ’’
-ನಿಶಾ ದೇಸಾಯಿ ಬಿಸ್ವಾಲ್, ಅಮೆರಿಕ ವಿದೇಶಾಂಗ ಇಲಾಖೆಯ ದಕ್ಷಿಣ ಹಾಗೂ ಕೇಂದ್ರ ಏಶ್ಯ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X