Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಬಿಐ ಗವರ್ನರ್ ವಿರುದ್ಧ ದಾಳಿಯನ್ನು...

ಆರ್‌ಬಿಐ ಗವರ್ನರ್ ವಿರುದ್ಧ ದಾಳಿಯನ್ನು ಒಪ್ಪುವುದಿಲ್ಲ:ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ26 May 2016 7:50 PM IST
share
ಆರ್‌ಬಿಐ ಗವರ್ನರ್ ವಿರುದ್ಧ ದಾಳಿಯನ್ನು ಒಪ್ಪುವುದಿಲ್ಲ:ಜೇಟ್ಲಿ

ಹೊಸದಿಲ್ಲಿ,ಮೇ 26: ಆರ್‌ಬಿಐ ಗವರ್ನರ್ ರಘುರಾಮ ರಾಜನ್ ವಿರುದ್ಧ ದಾಳಿಯನ್ನು ತಾನು ಒಪ್ಪುವುದಿಲ್ಲ ಎಂದು ವಿತ್ತಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ. ರಾಜನ್ ಅವರನ್ನು ವಜಾಗೊಳಿಸುವಂತೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಮತ್ತೆ ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

ಆರ್‌ಬಿಐ ಗವರ್ನರ್ ಇರಲಿ, ಯಾವುದೇ ವ್ಯಕ್ತಿಯ ವಿರುದ್ಧ ಯಾವುದೇ ವೈಯಕ್ತಿಕ ಟೀಕೆಯನ್ನು ನಾನು ಒಪ್ಪುವುದಿಲ್ಲ. ಆರ್‌ಬಿಐ ಮಹತ್ವದ ಸಂಸ್ಥೆಯಾಗಿದೆ,ಅದು ತನ್ನದೇ ನಿರ್ಧಾರವನ್ನು ಕೈಗೊಳ್ಳುತ್ತದೆ.ಅದರ ನಿರ್ಧಾರವನ್ನು ಯಾರೂ ಒಪ್ಪಬಹುದು ಅಥವಾ ಒಪ್ಪದಿರಬಹುದು,ಆದರೆ ಅದು ವಿಷಯಗಳ ಮೇಲಿನ ಚರ್ಚೆ ಎಂದು ಮೋದಿ ಸರಕಾರವು ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಸಂದರ್ಭದಲ್ಲಿ ಗುರುವಾರ ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಜೇಟ್ಲಿ ನುಡಿದರು.

ಆರ್‌ಬಿಐ ಗವರ್ನರ್‌ಗಳು ಬಹಿರಂಗವಾಗಿ ಹೆಚ್ಚು ಮಾತನಾಡಬಾರದು ಎಂದು ನೀವು ನಿರೀಕ್ಷಿಸುತ್ತೀರಾ ಎಂಬ ಪ್ರಶ್ನೆಗೆ ಜೇಟ್ಲಿ, ಯಾರು ಹೇಗೆ ಇರಬೇಕು ಎನ್ನುವುದು ಅವರ ವೈಯಕ್ತಿಕ ವಿಷಯವಾಗಿದೆ. ಸಚಿವರಲ್ಲಿಯೂ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುವವರಿದ್ದಾರೆ. ನಾನೂ ಹೊರಗಡೆ ನನ್ನ ಸಚಿವಾಲಯಕ್ಕೆ ಸಂಬಂಧಿಸದ ಗೊಡ್ಡು ವಿಚಾರಗಳ ಬಗ್ಗೆ ಮಾತನಾಡಿದ್ದಿದೆ. ಹೀಗಾಗಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡಬೇಡಿ ಎಂದು ನಾನು ಇನ್ನೊಬ್ಬರಿಗೆ ಬೋಧಿಸುವಂತಿಲ್ಲ. ಅದು ಮುಖ್ಯವೂ ಅಲ್ಲ,ಸುಸಂಗತವೂ ಅಲ್ಲ ಎಂದು ಉತ್ತರಿಸಿದರು.

ಅಸಹಿಷ್ಣುತೆ ಕುರಿತು ಚರ್ಚೆಯಲ್ಲಿ ರಾಜನ್ ಅವರ ಬಹಿರಂಗ ಹೇಳಿಕೆಗಳು ಅಥವಾ ಭಾರತೀಯ ಆರ್ಥಿಕತೆ ಕುರಿತಂತೆ ‘ಕುರುಡರ ನಾಡಿನಲ್ಲಿ ಒಕ್ಕಣ್ಣನೇ ರಾಜ’ಎಂಬ ಹೋಲಿಕೆಯ ಬಗ್ಗೆ ಬಿಜೆಪಿ ಮತ್ತು ಸರಕಾರದಲ್ಲಿ ಅಸಮಾಧಾನವಿದೆ ಎನ್ನಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X